ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸತೋಮ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ,
ಮೃತ್ಯೋರ್ಮಾ ಅಮೃತಂಗಮಯ… ಓಂ ಶಾಂತಿ, ಶಾಂತಿ ಶಾಂತಿಃ
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

ದೀಪಾವಳಿಯ ಕಥೆಗಳು ಹಲವಾರು. ಕೆಲವರು ಈ ದಿನದಂದು ರಾಮ ಸೀತೆ ಹಾಗೂ ಲಕ್ಷ್ಮಣರು 14 ವರ್ಷಗಳ ನಂತರ ಅಯೋಧ್ಯೆಗೆ ಮರಳಿದ ದಿನಗಳು ಎಂದರೆ. ಮತ್ತೆ ಕೆಲವರು ಇದು ಪಾಂಡವರು 12 ವರ್ಷ ವನವಾಸ ಮತ್ತು 1 ವರ್ಷ ಅಜ್ಞಾತವಾಸವನ್ನು ಮುಗಿಸಿ ಪುನಃ ಹಸ್ತಿನಾಪುರಕ್ಕೆ ಹಿಂದಿರುಗಿದ ದಿವಸಗಳು ಎನ್ನುತ್ತಾರೆ. ಇನ್ನು ವಿಷ್ಣುಪುರಾಣಗಳು ಈ ದಿನದಂದು ಲಕ್ಮೀ ಮಾತೆ ಹಾಲಿನ ಸರೋವರದಿಂದ ಜನಿಸಿದ್ದು. ತದನಂತರ ವಿಷ್ಣುವನ್ನು ಒಪ್ಪಿ ಮದುವೆಯಾದ ದಿನಗಳು ಆದ್ದರಿಂದಲೇ ಈ ದಿನದಂದು ಲಕ್ಷ್ಮೀ ಪೂಜೆಯನ್ನು ಮಾಡಿದರೆ ಮಾತೆ ಒಲಿಯುತ್ತಾಳೆ ಎಂಬ ಕಥಾನಕವನ್ನೂ ನೀಡುತ್ತದೆ.

ಇನ್ನೂ ಹಿಂದೆ ಹೋದರೆ ಕಥೋಪನಿಷದ್ ಈ ದಿನದಂದು ಯಮ ಮತ್ತು ನಚಿಕೇತರ ನಡುವಿನ ಕಥೆಯನ್ನು ತೆರೆದಿಡುತ್ತದೆ. ಮೊದಲದಿನವಾದ ನರಕ ಚರ್ತುದಶಿಯಂದು ನಚಿಕೇತನು ಧರ್ಮ -ಅಧರ್ಮ, ಸರಿ-ತಪ್ಪು, ಅಜ್ಞಾನ-ಜ್ಞಾನ ಗಳ ಬಗ್ಗೆ ಸಂಪೂರ್ಣ ಚಿತ್ರಣ ನೀಡಿದ ದಿನ ಎಂದು ತಿಳಿಸುತ್ತದೆ.

ಇನ್ನು ಇದರೊಂದಿಗೆ ಬಲಿ ಚಕ್ರವರ್ತಿಯ ಕಥೆಯೂ ಸೇರಿಕೊಂಡಿದೆ. ಸ್ವರ್ಗವನ್ನೇ ಗೆದ್ದು ಅಲ್ಲಿ ಭೂಮಿಯ ಹಾಗೆ ಏನು ಇಲ್ಲ ಎಂದು ಹಿಂದಿರುಗಿದ ಮಹಾ ಪರಾಕ್ರಮಿ ಬಲಿ ಚಕ್ರವರ್ತಿಯು ಇಂದ್ರ ಸ್ಥಾನವನ್ನು ಪಡೆಯಲು ಯಜ್ಞ ಮಾಡುತ್ತಿರುವಾಗ ದೇವತೆಗಳ ಬೇಡಿಕೆಯಂತೆ ವಾಮನ ಅವತಾರದಲ್ಲಿ ಪ್ರತ್ಯಕ್ಷನಾದ ವಿಷ್ಣುವು 3 ಪಾದ (ಅಡಿ) ಜಾಗವನ್ನು ಕೇಳಿದಾಗ ಯಾವುದೇ ಯೋಚನೆ ಮಾಡದೇ ದಾನದ ಅರ್ಗ್ಯ ನೀಡಿದ ಬಲಿಗೆ ತನ್ನ ಬಲವ ಪ್ರದರ್ಶಿಸಿ ಭೂ-ಮಂಡಲದಲ್ಲೊಂದು ಕಾಲು ಆಕಾಶದಲ್ಲೊಂದು ಪಾದವಿರಿಸಿ..
ಇನ್ನೊಂದು ಪಾದವೆಲ್ಲಿರಿಸಲಿ ಎಂದಾಗ ಸರ್ವತ್ಸ್ವವನ್ನೂ ಅರ್ಪಿಸುತ್ತ ತನ್ನ ಶಿರಸ್ಸಿನ ಮೇಲಿರಿಸಿ ಎಂದ. ಅದಕ್ಕನುಗುಣವಾಗಿ ವಾಮನನು ಅವನನ್ನು ಭೂಗರ್ಭಕ್ಕಿಳಿಸಿದ. ಆತನ ತ್ಯಾಗಕ್ಕೆ ಮೆಚ್ಚಿ ನಿನಗೇನು ಬೇಕು ಎಂದಾಗ ಮುಕ್ತಿ ಎಂದನಂತೆ.
ಇಂತಹ ತ್ಯಾಗಮನೋಭಾವದಿಂದ ಪ್ರಭಾವಿತನಾದ ವಿಷ್ಣುವು ಈ ದಿನವನ್ನು ಬಲಿಪಾಡ್ಯ ಎಂದೇ ವಿಶ್ವದಾದ್ಯಂತ ಆಚರಿಸುತ್ತಾರೆ ಎಂಬ ವರನಿತ್ತ ಎಂಬ ಪ್ರತೀತಿ ಕೂಡ ಇದೆ.

ಇವೆಲ್ಲವನ್ನೂ ಒಡಗೂಡಿ ನರಕಾಸುರನನ್ನು ವಧೆ ಮಾಡಿದ ದಿನವೂ ಇದೇ ಎಂದೂ ಹೇಳುವುದುಂಟು. ಹತ್ತು ಹಲವಾರು ಕಥೆಗಳನ್ನು ದೀಪಾವಳಿ ಹೊಂದಿದ್ದರೂ, ಇವೆಲ್ಲರ ಅರ್ಥ ಒಂದೇ ಒಳ್ಳೆಯದರ ಗೆಲುವು. ನಮ್ಮೆಲ್ಲರ ಮನಸ್ಸಿನ ವಿಕಾರಗಳಾದ ಕಾಮ, ಕ್ರೋಧ ಮದ, ಮತ್ಸರಗಳನ್ನು ಜುಸಿ.(ಬಲಿಯಾಗಿಸಿ), ಹೊಸ ತನದಿಂದ ಉತ್ತಮ ವಿಚಾರಗಳ ಉಗಮವಾಗಬೇಕು. ಮನದ ಕೊಳೆಯನ್ನು ಕಳಚಿ ಶುಭ್ರ ಬಟ್ಟೆಯ ತೊಡುವ ಹಾಗೆ, ನಿರಾಕಾರ ಜ್ಯೋತಿಯಷ್ಟೇ ಪರಿಶುದ್ಧ ಮನಸ್ಸನ್ನು ಪಡೆಯುವುದು. ನೀರು ತುಂಬುವ ಆಚರಣೆಂದ ಆರಂಭವಾಗುವ ಈ ಹಬ್ಬದ ಪ್ರತಿದಿನಕ್ಕೂ ಅದರದೇ ಆದ ವೈಶಿಷ್ಟ್ಯತೆ ಇದೆ.

ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ದೀಪಾವಳಿ ಹಬ್ಬದ ಸಂಭ್ರಮ-ಸಡಗರವನ್ನು ಇಮ್ಮಡಿಗೊಳಿಸಲು ಸುರಕ್ಷಿತವಾಗಿ ಆಚರಿಸುವುದು ಕೂಡ ಮುಖ್ಯ.
ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯುವ ಭರಾಟೆಯಲ್ಲಿ ಮಕ್ಕಳು ಕಣ್ಣು, ಕೈ, ಕಾಲಿಗೆ ಪೆಟ್ಟು ಮಾಡಿಕೊಳ್ಳುವುದು ಸಾಮಾನ್ಯ. ಪಟಾಕಿ ಸಿಡಿಸುವಾಗ ಏನು ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಾ.ಅಗರ್ ವಾಲ್ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞ ಡಾ.ಅಮೋದ್ ನಾಯಕ್ ಹೇಳುತ್ತಾರೆ.
– ಪಟಾಕಿ ಸಿಡಿಸುವಾಗ ಮಕ್ಕಳು ಪಟಾಕಿಯಿಂದ ಕನಿಷ್ಠ ತೋಳಿನಷ್ಟು ದೂರದಲ್ಲಿರಬೇಕು.
– ಪಟಾಕಿ ಹೊಡೆಯುವಾಗ ಸಡಿಲ ಬಟ್ಟೆಗಳನ್ನು ಧರಿಸಬೇಡಿ.
-ರಕ್ಷಕ ಕವಚಗಳನ್ನು ದೇಹಕ್ಕೆ ಧರಿಸಿಕೊಳ್ಳಿ.
-ಬೇಡದ ವಸ್ತುಗಳು ದೇಹಕ್ಕೆ ಬಿದ್ದರೆ ನೀರಿನಿಂದ ತೊಳೆಯಿರಿ.
-ರಕ್ಷಾ ಫಲಕವಾಗಿ ಕಾಂಟಾಕ್ಸ್ಟ್ ಬದಲು ಗ್ಲಾಸುಗಳನ್ನು ಧರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಗುರುವಾರ, 05/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್ಸೈಟ್ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ