ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸತೋಮ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ,
ಮೃತ್ಯೋರ್ಮಾ ಅಮೃತಂಗಮಯ… ಓಂ ಶಾಂತಿ, ಶಾಂತಿ ಶಾಂತಿಃ
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

ದೀಪಾವಳಿಯ ಕಥೆಗಳು ಹಲವಾರು. ಕೆಲವರು ಈ ದಿನದಂದು ರಾಮ ಸೀತೆ ಹಾಗೂ ಲಕ್ಷ್ಮಣರು 14 ವರ್ಷಗಳ ನಂತರ ಅಯೋಧ್ಯೆಗೆ ಮರಳಿದ ದಿನಗಳು ಎಂದರೆ. ಮತ್ತೆ ಕೆಲವರು ಇದು ಪಾಂಡವರು 12 ವರ್ಷ ವನವಾಸ ಮತ್ತು 1 ವರ್ಷ ಅಜ್ಞಾತವಾಸವನ್ನು ಮುಗಿಸಿ ಪುನಃ ಹಸ್ತಿನಾಪುರಕ್ಕೆ ಹಿಂದಿರುಗಿದ ದಿವಸಗಳು ಎನ್ನುತ್ತಾರೆ. ಇನ್ನು ವಿಷ್ಣುಪುರಾಣಗಳು ಈ ದಿನದಂದು ಲಕ್ಮೀ ಮಾತೆ ಹಾಲಿನ ಸರೋವರದಿಂದ ಜನಿಸಿದ್ದು. ತದನಂತರ ವಿಷ್ಣುವನ್ನು ಒಪ್ಪಿ ಮದುವೆಯಾದ ದಿನಗಳು ಆದ್ದರಿಂದಲೇ ಈ ದಿನದಂದು ಲಕ್ಷ್ಮೀ ಪೂಜೆಯನ್ನು ಮಾಡಿದರೆ ಮಾತೆ ಒಲಿಯುತ್ತಾಳೆ ಎಂಬ ಕಥಾನಕವನ್ನೂ ನೀಡುತ್ತದೆ.

ಇನ್ನೂ ಹಿಂದೆ ಹೋದರೆ ಕಥೋಪನಿಷದ್ ಈ ದಿನದಂದು ಯಮ ಮತ್ತು ನಚಿಕೇತರ ನಡುವಿನ ಕಥೆಯನ್ನು ತೆರೆದಿಡುತ್ತದೆ. ಮೊದಲದಿನವಾದ ನರಕ ಚರ್ತುದಶಿಯಂದು ನಚಿಕೇತನು ಧರ್ಮ -ಅಧರ್ಮ, ಸರಿ-ತಪ್ಪು, ಅಜ್ಞಾನ-ಜ್ಞಾನ ಗಳ ಬಗ್ಗೆ ಸಂಪೂರ್ಣ ಚಿತ್ರಣ ನೀಡಿದ ದಿನ ಎಂದು ತಿಳಿಸುತ್ತದೆ.

ಇನ್ನು ಇದರೊಂದಿಗೆ ಬಲಿ ಚಕ್ರವರ್ತಿಯ ಕಥೆಯೂ ಸೇರಿಕೊಂಡಿದೆ. ಸ್ವರ್ಗವನ್ನೇ ಗೆದ್ದು ಅಲ್ಲಿ ಭೂಮಿಯ ಹಾಗೆ ಏನು ಇಲ್ಲ ಎಂದು ಹಿಂದಿರುಗಿದ ಮಹಾ ಪರಾಕ್ರಮಿ ಬಲಿ ಚಕ್ರವರ್ತಿಯು ಇಂದ್ರ ಸ್ಥಾನವನ್ನು ಪಡೆಯಲು ಯಜ್ಞ ಮಾಡುತ್ತಿರುವಾಗ ದೇವತೆಗಳ ಬೇಡಿಕೆಯಂತೆ ವಾಮನ ಅವತಾರದಲ್ಲಿ ಪ್ರತ್ಯಕ್ಷನಾದ ವಿಷ್ಣುವು 3 ಪಾದ (ಅಡಿ) ಜಾಗವನ್ನು ಕೇಳಿದಾಗ ಯಾವುದೇ ಯೋಚನೆ ಮಾಡದೇ ದಾನದ ಅರ್ಗ್ಯ ನೀಡಿದ ಬಲಿಗೆ ತನ್ನ ಬಲವ ಪ್ರದರ್ಶಿಸಿ ಭೂ-ಮಂಡಲದಲ್ಲೊಂದು ಕಾಲು ಆಕಾಶದಲ್ಲೊಂದು ಪಾದವಿರಿಸಿ..
ಇನ್ನೊಂದು ಪಾದವೆಲ್ಲಿರಿಸಲಿ ಎಂದಾಗ ಸರ್ವತ್ಸ್ವವನ್ನೂ ಅರ್ಪಿಸುತ್ತ ತನ್ನ ಶಿರಸ್ಸಿನ ಮೇಲಿರಿಸಿ ಎಂದ. ಅದಕ್ಕನುಗುಣವಾಗಿ ವಾಮನನು ಅವನನ್ನು ಭೂಗರ್ಭಕ್ಕಿಳಿಸಿದ. ಆತನ ತ್ಯಾಗಕ್ಕೆ ಮೆಚ್ಚಿ ನಿನಗೇನು ಬೇಕು ಎಂದಾಗ ಮುಕ್ತಿ ಎಂದನಂತೆ.
ಇಂತಹ ತ್ಯಾಗಮನೋಭಾವದಿಂದ ಪ್ರಭಾವಿತನಾದ ವಿಷ್ಣುವು ಈ ದಿನವನ್ನು ಬಲಿಪಾಡ್ಯ ಎಂದೇ ವಿಶ್ವದಾದ್ಯಂತ ಆಚರಿಸುತ್ತಾರೆ ಎಂಬ ವರನಿತ್ತ ಎಂಬ ಪ್ರತೀತಿ ಕೂಡ ಇದೆ.

ಇವೆಲ್ಲವನ್ನೂ ಒಡಗೂಡಿ ನರಕಾಸುರನನ್ನು ವಧೆ ಮಾಡಿದ ದಿನವೂ ಇದೇ ಎಂದೂ ಹೇಳುವುದುಂಟು. ಹತ್ತು ಹಲವಾರು ಕಥೆಗಳನ್ನು ದೀಪಾವಳಿ ಹೊಂದಿದ್ದರೂ, ಇವೆಲ್ಲರ ಅರ್ಥ ಒಂದೇ ಒಳ್ಳೆಯದರ ಗೆಲುವು. ನಮ್ಮೆಲ್ಲರ ಮನಸ್ಸಿನ ವಿಕಾರಗಳಾದ ಕಾಮ, ಕ್ರೋಧ ಮದ, ಮತ್ಸರಗಳನ್ನು ಜುಸಿ.(ಬಲಿಯಾಗಿಸಿ), ಹೊಸ ತನದಿಂದ ಉತ್ತಮ ವಿಚಾರಗಳ ಉಗಮವಾಗಬೇಕು. ಮನದ ಕೊಳೆಯನ್ನು ಕಳಚಿ ಶುಭ್ರ ಬಟ್ಟೆಯ ತೊಡುವ ಹಾಗೆ, ನಿರಾಕಾರ ಜ್ಯೋತಿಯಷ್ಟೇ ಪರಿಶುದ್ಧ ಮನಸ್ಸನ್ನು ಪಡೆಯುವುದು. ನೀರು ತುಂಬುವ ಆಚರಣೆಂದ ಆರಂಭವಾಗುವ ಈ ಹಬ್ಬದ ಪ್ರತಿದಿನಕ್ಕೂ ಅದರದೇ ಆದ ವೈಶಿಷ್ಟ್ಯತೆ ಇದೆ.

ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ದೀಪಾವಳಿ ಹಬ್ಬದ ಸಂಭ್ರಮ-ಸಡಗರವನ್ನು ಇಮ್ಮಡಿಗೊಳಿಸಲು ಸುರಕ್ಷಿತವಾಗಿ ಆಚರಿಸುವುದು ಕೂಡ ಮುಖ್ಯ.
ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯುವ ಭರಾಟೆಯಲ್ಲಿ ಮಕ್ಕಳು ಕಣ್ಣು, ಕೈ, ಕಾಲಿಗೆ ಪೆಟ್ಟು ಮಾಡಿಕೊಳ್ಳುವುದು ಸಾಮಾನ್ಯ. ಪಟಾಕಿ ಸಿಡಿಸುವಾಗ ಏನು ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಾ.ಅಗರ್ ವಾಲ್ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞ ಡಾ.ಅಮೋದ್ ನಾಯಕ್ ಹೇಳುತ್ತಾರೆ.
– ಪಟಾಕಿ ಸಿಡಿಸುವಾಗ ಮಕ್ಕಳು ಪಟಾಕಿಯಿಂದ ಕನಿಷ್ಠ ತೋಳಿನಷ್ಟು ದೂರದಲ್ಲಿರಬೇಕು.
– ಪಟಾಕಿ ಹೊಡೆಯುವಾಗ ಸಡಿಲ ಬಟ್ಟೆಗಳನ್ನು ಧರಿಸಬೇಡಿ.
-ರಕ್ಷಕ ಕವಚಗಳನ್ನು ದೇಹಕ್ಕೆ ಧರಿಸಿಕೊಳ್ಳಿ.
-ಬೇಡದ ವಸ್ತುಗಳು ದೇಹಕ್ಕೆ ಬಿದ್ದರೆ ನೀರಿನಿಂದ ತೊಳೆಯಿರಿ.
-ರಕ್ಷಾ ಫಲಕವಾಗಿ ಕಾಂಟಾಕ್ಸ್ಟ್ ಬದಲು ಗ್ಲಾಸುಗಳನ್ನು ಧರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…