ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸತೋಮ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ,
ಮೃತ್ಯೋರ್ಮಾ ಅಮೃತಂಗಮಯ… ಓಂ ಶಾಂತಿ, ಶಾಂತಿ ಶಾಂತಿಃ
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

ದೀಪಾವಳಿಯ ಕಥೆಗಳು ಹಲವಾರು. ಕೆಲವರು ಈ ದಿನದಂದು ರಾಮ ಸೀತೆ ಹಾಗೂ ಲಕ್ಷ್ಮಣರು 14 ವರ್ಷಗಳ ನಂತರ ಅಯೋಧ್ಯೆಗೆ ಮರಳಿದ ದಿನಗಳು ಎಂದರೆ. ಮತ್ತೆ ಕೆಲವರು ಇದು ಪಾಂಡವರು 12 ವರ್ಷ ವನವಾಸ ಮತ್ತು 1 ವರ್ಷ ಅಜ್ಞಾತವಾಸವನ್ನು ಮುಗಿಸಿ ಪುನಃ ಹಸ್ತಿನಾಪುರಕ್ಕೆ ಹಿಂದಿರುಗಿದ ದಿವಸಗಳು ಎನ್ನುತ್ತಾರೆ. ಇನ್ನು ವಿಷ್ಣುಪುರಾಣಗಳು ಈ ದಿನದಂದು ಲಕ್ಮೀ ಮಾತೆ ಹಾಲಿನ ಸರೋವರದಿಂದ ಜನಿಸಿದ್ದು. ತದನಂತರ ವಿಷ್ಣುವನ್ನು ಒಪ್ಪಿ ಮದುವೆಯಾದ ದಿನಗಳು ಆದ್ದರಿಂದಲೇ ಈ ದಿನದಂದು ಲಕ್ಷ್ಮೀ ಪೂಜೆಯನ್ನು ಮಾಡಿದರೆ ಮಾತೆ ಒಲಿಯುತ್ತಾಳೆ ಎಂಬ ಕಥಾನಕವನ್ನೂ ನೀಡುತ್ತದೆ.

ಇನ್ನೂ ಹಿಂದೆ ಹೋದರೆ ಕಥೋಪನಿಷದ್ ಈ ದಿನದಂದು ಯಮ ಮತ್ತು ನಚಿಕೇತರ ನಡುವಿನ ಕಥೆಯನ್ನು ತೆರೆದಿಡುತ್ತದೆ. ಮೊದಲದಿನವಾದ ನರಕ ಚರ್ತುದಶಿಯಂದು ನಚಿಕೇತನು ಧರ್ಮ -ಅಧರ್ಮ, ಸರಿ-ತಪ್ಪು, ಅಜ್ಞಾನ-ಜ್ಞಾನ ಗಳ ಬಗ್ಗೆ ಸಂಪೂರ್ಣ ಚಿತ್ರಣ ನೀಡಿದ ದಿನ ಎಂದು ತಿಳಿಸುತ್ತದೆ.

ಇನ್ನು ಇದರೊಂದಿಗೆ ಬಲಿ ಚಕ್ರವರ್ತಿಯ ಕಥೆಯೂ ಸೇರಿಕೊಂಡಿದೆ. ಸ್ವರ್ಗವನ್ನೇ ಗೆದ್ದು ಅಲ್ಲಿ ಭೂಮಿಯ ಹಾಗೆ ಏನು ಇಲ್ಲ ಎಂದು ಹಿಂದಿರುಗಿದ ಮಹಾ ಪರಾಕ್ರಮಿ ಬಲಿ ಚಕ್ರವರ್ತಿಯು ಇಂದ್ರ ಸ್ಥಾನವನ್ನು ಪಡೆಯಲು ಯಜ್ಞ ಮಾಡುತ್ತಿರುವಾಗ ದೇವತೆಗಳ ಬೇಡಿಕೆಯಂತೆ ವಾಮನ ಅವತಾರದಲ್ಲಿ ಪ್ರತ್ಯಕ್ಷನಾದ ವಿಷ್ಣುವು 3 ಪಾದ (ಅಡಿ) ಜಾಗವನ್ನು ಕೇಳಿದಾಗ ಯಾವುದೇ ಯೋಚನೆ ಮಾಡದೇ ದಾನದ ಅರ್ಗ್ಯ ನೀಡಿದ ಬಲಿಗೆ ತನ್ನ ಬಲವ ಪ್ರದರ್ಶಿಸಿ ಭೂ-ಮಂಡಲದಲ್ಲೊಂದು ಕಾಲು ಆಕಾಶದಲ್ಲೊಂದು ಪಾದವಿರಿಸಿ..
ಇನ್ನೊಂದು ಪಾದವೆಲ್ಲಿರಿಸಲಿ ಎಂದಾಗ ಸರ್ವತ್ಸ್ವವನ್ನೂ ಅರ್ಪಿಸುತ್ತ ತನ್ನ ಶಿರಸ್ಸಿನ ಮೇಲಿರಿಸಿ ಎಂದ. ಅದಕ್ಕನುಗುಣವಾಗಿ ವಾಮನನು ಅವನನ್ನು ಭೂಗರ್ಭಕ್ಕಿಳಿಸಿದ. ಆತನ ತ್ಯಾಗಕ್ಕೆ ಮೆಚ್ಚಿ ನಿನಗೇನು ಬೇಕು ಎಂದಾಗ ಮುಕ್ತಿ ಎಂದನಂತೆ.
ಇಂತಹ ತ್ಯಾಗಮನೋಭಾವದಿಂದ ಪ್ರಭಾವಿತನಾದ ವಿಷ್ಣುವು ಈ ದಿನವನ್ನು ಬಲಿಪಾಡ್ಯ ಎಂದೇ ವಿಶ್ವದಾದ್ಯಂತ ಆಚರಿಸುತ್ತಾರೆ ಎಂಬ ವರನಿತ್ತ ಎಂಬ ಪ್ರತೀತಿ ಕೂಡ ಇದೆ.

ಇವೆಲ್ಲವನ್ನೂ ಒಡಗೂಡಿ ನರಕಾಸುರನನ್ನು ವಧೆ ಮಾಡಿದ ದಿನವೂ ಇದೇ ಎಂದೂ ಹೇಳುವುದುಂಟು. ಹತ್ತು ಹಲವಾರು ಕಥೆಗಳನ್ನು ದೀಪಾವಳಿ ಹೊಂದಿದ್ದರೂ, ಇವೆಲ್ಲರ ಅರ್ಥ ಒಂದೇ ಒಳ್ಳೆಯದರ ಗೆಲುವು. ನಮ್ಮೆಲ್ಲರ ಮನಸ್ಸಿನ ವಿಕಾರಗಳಾದ ಕಾಮ, ಕ್ರೋಧ ಮದ, ಮತ್ಸರಗಳನ್ನು ಜುಸಿ.(ಬಲಿಯಾಗಿಸಿ), ಹೊಸ ತನದಿಂದ ಉತ್ತಮ ವಿಚಾರಗಳ ಉಗಮವಾಗಬೇಕು. ಮನದ ಕೊಳೆಯನ್ನು ಕಳಚಿ ಶುಭ್ರ ಬಟ್ಟೆಯ ತೊಡುವ ಹಾಗೆ, ನಿರಾಕಾರ ಜ್ಯೋತಿಯಷ್ಟೇ ಪರಿಶುದ್ಧ ಮನಸ್ಸನ್ನು ಪಡೆಯುವುದು. ನೀರು ತುಂಬುವ ಆಚರಣೆಂದ ಆರಂಭವಾಗುವ ಈ ಹಬ್ಬದ ಪ್ರತಿದಿನಕ್ಕೂ ಅದರದೇ ಆದ ವೈಶಿಷ್ಟ್ಯತೆ ಇದೆ.

ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ದೀಪಾವಳಿ ಹಬ್ಬದ ಸಂಭ್ರಮ-ಸಡಗರವನ್ನು ಇಮ್ಮಡಿಗೊಳಿಸಲು ಸುರಕ್ಷಿತವಾಗಿ ಆಚರಿಸುವುದು ಕೂಡ ಮುಖ್ಯ.
ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯುವ ಭರಾಟೆಯಲ್ಲಿ ಮಕ್ಕಳು ಕಣ್ಣು, ಕೈ, ಕಾಲಿಗೆ ಪೆಟ್ಟು ಮಾಡಿಕೊಳ್ಳುವುದು ಸಾಮಾನ್ಯ. ಪಟಾಕಿ ಸಿಡಿಸುವಾಗ ಏನು ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಾ.ಅಗರ್ ವಾಲ್ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞ ಡಾ.ಅಮೋದ್ ನಾಯಕ್ ಹೇಳುತ್ತಾರೆ.
– ಪಟಾಕಿ ಸಿಡಿಸುವಾಗ ಮಕ್ಕಳು ಪಟಾಕಿಯಿಂದ ಕನಿಷ್ಠ ತೋಳಿನಷ್ಟು ದೂರದಲ್ಲಿರಬೇಕು.
– ಪಟಾಕಿ ಹೊಡೆಯುವಾಗ ಸಡಿಲ ಬಟ್ಟೆಗಳನ್ನು ಧರಿಸಬೇಡಿ.
-ರಕ್ಷಕ ಕವಚಗಳನ್ನು ದೇಹಕ್ಕೆ ಧರಿಸಿಕೊಳ್ಳಿ.
-ಬೇಡದ ವಸ್ತುಗಳು ದೇಹಕ್ಕೆ ಬಿದ್ದರೆ ನೀರಿನಿಂದ ತೊಳೆಯಿರಿ.
-ರಕ್ಷಾ ಫಲಕವಾಗಿ ಕಾಂಟಾಕ್ಸ್ಟ್ ಬದಲು ಗ್ಲಾಸುಗಳನ್ನು ಧರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ) ಹೆಚ್ಚುವರಿ ಯೂನಿವರ್ಸಿಟಿ ಹಾಗೂ…
ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…