ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸತೋಮ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ,
ಮೃತ್ಯೋರ್ಮಾ ಅಮೃತಂಗಮಯ… ಓಂ ಶಾಂತಿ, ಶಾಂತಿ ಶಾಂತಿಃ
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ದೀಪಾವಳಿಯ ಕಥೆಗಳು ಹಲವಾರು. ಕೆಲವರು ಈ ದಿನದಂದು ರಾಮ ಸೀತೆ ಹಾಗೂ ಲಕ್ಷ್ಮಣರು 14 ವರ್ಷಗಳ ನಂತರ ಅಯೋಧ್ಯೆಗೆ ಮರಳಿದ ದಿನಗಳು ಎಂದರೆ. ಮತ್ತೆ ಕೆಲವರು ಇದು ಪಾಂಡವರು 12 ವರ್ಷ ವನವಾಸ ಮತ್ತು 1 ವರ್ಷ ಅಜ್ಞಾತವಾಸವನ್ನು ಮುಗಿಸಿ ಪುನಃ ಹಸ್ತಿನಾಪುರಕ್ಕೆ ಹಿಂದಿರುಗಿದ ದಿವಸಗಳು ಎನ್ನುತ್ತಾರೆ. ಇನ್ನು ವಿಷ್ಣುಪುರಾಣಗಳು ಈ ದಿನದಂದು ಲಕ್ಮೀ ಮಾತೆ ಹಾಲಿನ ಸರೋವರದಿಂದ ಜನಿಸಿದ್ದು. ತದನಂತರ ವಿಷ್ಣುವನ್ನು ಒಪ್ಪಿ ಮದುವೆಯಾದ ದಿನಗಳು ಆದ್ದರಿಂದಲೇ ಈ ದಿನದಂದು ಲಕ್ಷ್ಮೀ ಪೂಜೆಯನ್ನು ಮಾಡಿದರೆ ಮಾತೆ ಒಲಿಯುತ್ತಾಳೆ ಎಂಬ ಕಥಾನಕವನ್ನೂ ನೀಡುತ್ತದೆ.
ಇನ್ನೂ ಹಿಂದೆ ಹೋದರೆ ಕಥೋಪನಿಷದ್ ಈ ದಿನದಂದು ಯಮ ಮತ್ತು ನಚಿಕೇತರ ನಡುವಿನ ಕಥೆಯನ್ನು ತೆರೆದಿಡುತ್ತದೆ. ಮೊದಲದಿನವಾದ ನರಕ ಚರ್ತುದಶಿಯಂದು ನಚಿಕೇತನು ಧರ್ಮ -ಅಧರ್ಮ, ಸರಿ-ತಪ್ಪು, ಅಜ್ಞಾನ-ಜ್ಞಾನ ಗಳ ಬಗ್ಗೆ ಸಂಪೂರ್ಣ ಚಿತ್ರಣ ನೀಡಿದ ದಿನ ಎಂದು ತಿಳಿಸುತ್ತದೆ.
ಇನ್ನು ಇದರೊಂದಿಗೆ ಬಲಿ ಚಕ್ರವರ್ತಿಯ ಕಥೆಯೂ ಸೇರಿಕೊಂಡಿದೆ. ಸ್ವರ್ಗವನ್ನೇ ಗೆದ್ದು ಅಲ್ಲಿ ಭೂಮಿಯ ಹಾಗೆ ಏನು ಇಲ್ಲ ಎಂದು ಹಿಂದಿರುಗಿದ ಮಹಾ ಪರಾಕ್ರಮಿ ಬಲಿ ಚಕ್ರವರ್ತಿಯು ಇಂದ್ರ ಸ್ಥಾನವನ್ನು ಪಡೆಯಲು ಯಜ್ಞ ಮಾಡುತ್ತಿರುವಾಗ ದೇವತೆಗಳ ಬೇಡಿಕೆಯಂತೆ ವಾಮನ ಅವತಾರದಲ್ಲಿ ಪ್ರತ್ಯಕ್ಷನಾದ ವಿಷ್ಣುವು 3 ಪಾದ (ಅಡಿ) ಜಾಗವನ್ನು ಕೇಳಿದಾಗ ಯಾವುದೇ ಯೋಚನೆ ಮಾಡದೇ ದಾನದ ಅರ್ಗ್ಯ ನೀಡಿದ ಬಲಿಗೆ ತನ್ನ ಬಲವ ಪ್ರದರ್ಶಿಸಿ ಭೂ-ಮಂಡಲದಲ್ಲೊಂದು ಕಾಲು ಆಕಾಶದಲ್ಲೊಂದು ಪಾದವಿರಿಸಿ..
ಇನ್ನೊಂದು ಪಾದವೆಲ್ಲಿರಿಸಲಿ ಎಂದಾಗ ಸರ್ವತ್ಸ್ವವನ್ನೂ ಅರ್ಪಿಸುತ್ತ ತನ್ನ ಶಿರಸ್ಸಿನ ಮೇಲಿರಿಸಿ ಎಂದ. ಅದಕ್ಕನುಗುಣವಾಗಿ ವಾಮನನು ಅವನನ್ನು ಭೂಗರ್ಭಕ್ಕಿಳಿಸಿದ. ಆತನ ತ್ಯಾಗಕ್ಕೆ ಮೆಚ್ಚಿ ನಿನಗೇನು ಬೇಕು ಎಂದಾಗ ಮುಕ್ತಿ ಎಂದನಂತೆ.
ಇಂತಹ ತ್ಯಾಗಮನೋಭಾವದಿಂದ ಪ್ರಭಾವಿತನಾದ ವಿಷ್ಣುವು ಈ ದಿನವನ್ನು ಬಲಿಪಾಡ್ಯ ಎಂದೇ ವಿಶ್ವದಾದ್ಯಂತ ಆಚರಿಸುತ್ತಾರೆ ಎಂಬ ವರನಿತ್ತ ಎಂಬ ಪ್ರತೀತಿ ಕೂಡ ಇದೆ.
ಇವೆಲ್ಲವನ್ನೂ ಒಡಗೂಡಿ ನರಕಾಸುರನನ್ನು ವಧೆ ಮಾಡಿದ ದಿನವೂ ಇದೇ ಎಂದೂ ಹೇಳುವುದುಂಟು. ಹತ್ತು ಹಲವಾರು ಕಥೆಗಳನ್ನು ದೀಪಾವಳಿ ಹೊಂದಿದ್ದರೂ, ಇವೆಲ್ಲರ ಅರ್ಥ ಒಂದೇ ಒಳ್ಳೆಯದರ ಗೆಲುವು. ನಮ್ಮೆಲ್ಲರ ಮನಸ್ಸಿನ ವಿಕಾರಗಳಾದ ಕಾಮ, ಕ್ರೋಧ ಮದ, ಮತ್ಸರಗಳನ್ನು ಜುಸಿ.(ಬಲಿಯಾಗಿಸಿ), ಹೊಸ ತನದಿಂದ ಉತ್ತಮ ವಿಚಾರಗಳ ಉಗಮವಾಗಬೇಕು. ಮನದ ಕೊಳೆಯನ್ನು ಕಳಚಿ ಶುಭ್ರ ಬಟ್ಟೆಯ ತೊಡುವ ಹಾಗೆ, ನಿರಾಕಾರ ಜ್ಯೋತಿಯಷ್ಟೇ ಪರಿಶುದ್ಧ ಮನಸ್ಸನ್ನು ಪಡೆಯುವುದು. ನೀರು ತುಂಬುವ ಆಚರಣೆಂದ ಆರಂಭವಾಗುವ ಈ ಹಬ್ಬದ ಪ್ರತಿದಿನಕ್ಕೂ ಅದರದೇ ಆದ ವೈಶಿಷ್ಟ್ಯತೆ ಇದೆ.
ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ದೀಪಾವಳಿ ಹಬ್ಬದ ಸಂಭ್ರಮ-ಸಡಗರವನ್ನು ಇಮ್ಮಡಿಗೊಳಿಸಲು ಸುರಕ್ಷಿತವಾಗಿ ಆಚರಿಸುವುದು ಕೂಡ ಮುಖ್ಯ.
ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯುವ ಭರಾಟೆಯಲ್ಲಿ ಮಕ್ಕಳು ಕಣ್ಣು, ಕೈ, ಕಾಲಿಗೆ ಪೆಟ್ಟು ಮಾಡಿಕೊಳ್ಳುವುದು ಸಾಮಾನ್ಯ. ಪಟಾಕಿ ಸಿಡಿಸುವಾಗ ಏನು ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಾ.ಅಗರ್ ವಾಲ್ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞ ಡಾ.ಅಮೋದ್ ನಾಯಕ್ ಹೇಳುತ್ತಾರೆ.
– ಪಟಾಕಿ ಸಿಡಿಸುವಾಗ ಮಕ್ಕಳು ಪಟಾಕಿಯಿಂದ ಕನಿಷ್ಠ ತೋಳಿನಷ್ಟು ದೂರದಲ್ಲಿರಬೇಕು.
– ಪಟಾಕಿ ಹೊಡೆಯುವಾಗ ಸಡಿಲ ಬಟ್ಟೆಗಳನ್ನು ಧರಿಸಬೇಡಿ.
-ರಕ್ಷಕ ಕವಚಗಳನ್ನು ದೇಹಕ್ಕೆ ಧರಿಸಿಕೊಳ್ಳಿ.
-ಬೇಡದ ವಸ್ತುಗಳು ದೇಹಕ್ಕೆ ಬಿದ್ದರೆ ನೀರಿನಿಂದ ತೊಳೆಯಿರಿ.
-ರಕ್ಷಾ ಫಲಕವಾಗಿ ಕಾಂಟಾಕ್ಸ್ಟ್ ಬದಲು ಗ್ಲಾಸುಗಳನ್ನು ಧರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…