ಕಾನೂನು

ದೇವಮಾನವನಿಗೆ ಇನ್ನು ಮುಂದೆ ಜೈಲು ವಾಸ!ಹಿಂಸಾಚಾರದಲ್ಲಿ ಸತ್ತ ಜನ ಎಷ್ಟು ಗೊತ್ತಾ?

664

ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ. ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪುವು ಪ್ರಕಟಿಸಿದೆ. 7 ವರ್ಷ ಜೈಲುಶಿಕ್ಷೆ ವಿಧಿಸಿದೆ. ಬಾಬಾ ಇನ್ನು ತನ್ನ ಆಶ್ರಮ ಬಿಟ್ಟು ಜೈಲಿನಲ್ಲಿ ಕಂಬಿ ಎಣಿಸಬೇಕಿದೆ. ಬಾಬಾ ನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು, ಜೈಲಿಗೆ ರವಾನೆ ಮಾಡಲಾಗುತ್ತಿದೆ.

ಹರಿಯಾಣದ ಸಿರ್ಸಾದಲ್ಲಿರುವ ಆಶ್ರಮದಲ್ಲಿ ರಾಮ್ ರಹೀಂ ವಿರುದ್ಧ 1999ರಲ್ಲಿ ಇಬ್ಬರು ಮಹಿಳಾ ಭಕ್ತರ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಸಾಭಿತಾಗಿದೆ. ಕಳೆದ 2002ರಿಂದ ಸಿಬಿಐ ತನಿಖೆ ನಡೆಸಲಾಗುತ್ತಿತ್ತು. ಇಂದು ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ.

ತೀರ್ಪನ್ನು ಪ್ರಕಟಿಸಿದ ನ್ಯಾಯಾಧೀಶರು, ರಾಮ್ ರಹೀಂ ಸಿಂಗ್ ನನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದರು, ಈ ಹಿನ್ನೆಲೆಯಲ್ಲಿ ರಾಮ್ ರಹೀಂ ಸಿಂಗ್ ರನ್ನು ಪೊಲೀಸರು ಅಂಬಾಲಾ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ಸಂತ್ರಸ್ತೆ ಪರ ವಕೀಲರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾದ ಬೆನ್ನಲ್ಲೇ ಹರಿಯಾಣದ ಪಂಚಕುಲಾದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಆರೋಪ ಸಾಬೀತಾಗುತ್ತಿದ್ದಂತೆಯೇ ಕೋರ್ಟ್ ಎದುರೇ ನೆರೆದಿದ್ದ ಬಾಬಾ ಭಕ್ತರು ರಾಷ್ಟ್ರೀಯ ಸುದ್ದಿವಾಹಿನಿಯ ಮೂರು ವಾಹನಗಳನ್ನು ಧ್ವಂಸ ಮಾಡಿದ್ದಾರೆ. ಅಲ್ಲದೇ 10ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿಯಿಟ್ಟಿದ್ದಾರೆ.

ಘಟನೆಯಿಂದಾಗಿ 11 ಮಂದಿ ಬಾಬಾ ಭಕ್ತರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಹರಿಯಾಣದ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಅಲ್ಲಿನ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟಾರ್, ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಇದ್ಯಾವುದಕ್ಕೂ ಜಗ್ಗದ ಬಾಬಾ ಭಕ್ತರು ಹಿಂಸಾಚಾರಕ್ಕೆ ತಿರುಗಿದ್ದಾರೆ. ಪೊಲೀಸರ ಮೇಲೆಯೇ ರಾಮ್ ರಹೀಂ ಭಕ್ತರಿಂದ ಕಲ್ಲು ತೂರಾಟ, ಹಲ್ಲೆ ನಡೆಯುತ್ತಿದೆ. ತಮ್ಮ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಗುಂಡು, ಜಲಫಿರಂಗಿ ಬಳಸಿದ್ರೂ ಬಗ್ಗದೇ ಭದ್ರತಾ ಪಡೆ ಮೇಲೂ ಕಲ್ಲು ತೂರಾಟ ನಡೆಸುತ್ತಿದ್ದಾರೆ.

ಸರ್ಕಾರಿ ಕಚೇರಿ, ಪೆಟ್ರೋಲ್ ಬಂಕ್, ವಿದ್ಯುತ್ ಸ್ಥಾವರಕ್ಕೂ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಮನೆಯೊಳಗೆ ನಿಲ್ಲಿಸಿದ್ದ ಕಾರ್ ಗಳ ಮೇಲೂ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ಸದ್ಯ ಹರಿಯಾಣದ ಪರಿಸ್ಥಿತಿ ಬಿಗಡಾಯಿಸಿದೆ. ಇತ್ತ ನವದೆಹಲಿಯಲ್ಲಿ 7 ಕಡೆ ಕಲ್ಲು ತೂರಾಟ, ಬೆಂಕಿ ಹಚ್ಚಿದ ಘಟನೆ ನಡೆದಿರುವುದಾಗಿ ವರದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ. ಕೇವಲ 5 ನಿಮಿಷದಲ್ಲಿ ನೆಗಡಿ ಕೆಮ್ಮು ಕಫ ಗಂಟಲು ಕಿರಿಕಿರಿ ಮಾಯ.

    ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…

  • ಸುದ್ದಿ

    ಸುಶಾಂತ್ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ, ಅವರ ಕುಟುಂಬದಲ್ಲಿ ಮತ್ತೊಂದು ದೊಡ್ಡ ಆಘಾತ.

    ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…

  • Health

    ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

    ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…