ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದೇವರ ಹುಡುಕಾಟದಲ್ಲಿ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ನಮಗಿಂತ ಮೇಲೆ ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.
ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.
ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.
ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ಆತ್ಮವಿಶ್ವಾಸ ಹೆಚ್ಚಿಸಬಹುದು.
ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.
ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.
ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.
ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.
ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.
ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.
ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.
ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.
ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.
ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.
ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.
ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.
ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.
ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.
ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.
ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.
ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?
ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.
ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.
ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.
ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.
ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…