News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
God

ದೇವರ ಹುಡುಕಾಟದಲ್ಲಿ… ಈ ಲೇಖನ ಓದಿ

102

ದೇವರ ಹುಡುಕಾಟದಲ್ಲಿ…

ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.

ನಮಗಿಂತ ಮೇಲೆ ‌ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.

ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.

ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.

ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ‌ಆತ್ಮವಿಶ್ವಾಸ ಹೆಚ್ಚಿಸಬಹುದು.

ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.

ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.

ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.

ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.

ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ‌ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.

ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.

ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.

ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.

ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.

ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.

ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.

ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ‌ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.

ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.

ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.

ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.

ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.

ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?

ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ‌ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.

ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.

ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.

ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.

ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಹೊರನಾಡು ಅನ್ನಪೂರ್ಣೇಶ್ವರಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • ಸುದ್ದಿ

    ಬೆಳಕಿನ ಹಬ್ಬ ದೀಪಾವಳಿಯ ಸೊಬಗು ಹೆಚ್ಚಿಸುವ ದೀಪಗಳ ಇಂದಿರುವ ಮಹತ್ವಗಳೇನು ಗೊತ್ತಾ..?

    ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….

  • ದೇವರು, ವಿಸ್ಮಯ ಜಗತ್ತು

    ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

    ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…

  • ಮನೆ

    ಮನೆಯ ವಾಸ್ತು ಖರ್ಚಿಲ್ಲದೇ ಅಳವಡಿಸಿಕೊಳ್ಳಿ. ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.