ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದೇವರ ಹುಡುಕಾಟದಲ್ಲಿ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ನಮಗಿಂತ ಮೇಲೆ ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.
ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.
ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.
ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ಆತ್ಮವಿಶ್ವಾಸ ಹೆಚ್ಚಿಸಬಹುದು.
ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.
ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.
ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.
ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.
ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.
ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.
ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.
ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.
ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.
ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.
ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.
ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.
ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.
ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.
ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.
ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.
ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?
ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.
ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.
ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.
ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.
ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…
ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್ಬೈಕ್ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…