ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದೇವರ ಹುಡುಕಾಟದಲ್ಲಿ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ನಮಗಿಂತ ಮೇಲೆ ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.
ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.
ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.
ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ಆತ್ಮವಿಶ್ವಾಸ ಹೆಚ್ಚಿಸಬಹುದು.
ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.
ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.
ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.
ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.
ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.
ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.
ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.
ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.
ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.
ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.
ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.
ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.
ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.
ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.
ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.
ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.
ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?
ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.
ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.
ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.
ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.
ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.