ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದೇವರ ಹುಡುಕಾಟದಲ್ಲಿ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ನಮಗಿಂತ ಮೇಲೆ ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.
ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.
ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.
ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ಆತ್ಮವಿಶ್ವಾಸ ಹೆಚ್ಚಿಸಬಹುದು.
ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.
ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.
ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.
ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.
ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.
ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.
ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.
ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.
ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.
ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.
ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.
ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.
ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.
ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.
ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.
ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.
ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?
ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.
ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.
ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.
ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.
ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…
ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…