ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದೇವರ ಹುಡುಕಾಟದಲ್ಲಿ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ನಮಗಿಂತ ಮೇಲೆ ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.
ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.
ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.
ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ಆತ್ಮವಿಶ್ವಾಸ ಹೆಚ್ಚಿಸಬಹುದು.
ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.
ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.
ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.
ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.
ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.
ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.
ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.
ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.
ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.
ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.
ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.
ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.
ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.
ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.
ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.
ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.
ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?
ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.
ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.
ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.
ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.
ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…
ಇದೊಂದು ಪಾಗಲ್ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್ವೇರ್ ಎಂಜಿನಿಯರ್ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.