ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದೇವರ ಹುಡುಕಾಟದಲ್ಲಿ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ನಮಗಿಂತ ಮೇಲೆ ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.
ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.
ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.
ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ಆತ್ಮವಿಶ್ವಾಸ ಹೆಚ್ಚಿಸಬಹುದು.
ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.
ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.
ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.
ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.
ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.
ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.
ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.
ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.
ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.
ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.
ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.
ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.
ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.
ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.
ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.
ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.
ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?
ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.
ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.
ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.
ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.
ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…