News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
God

ದೇವರ ಹುಡುಕಾಟದಲ್ಲಿ… ಈ ಲೇಖನ ಓದಿ

102

ದೇವರ ಹುಡುಕಾಟದಲ್ಲಿ…

ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.

ನಮಗಿಂತ ಮೇಲೆ ‌ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.

ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.

ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.

ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ‌ಆತ್ಮವಿಶ್ವಾಸ ಹೆಚ್ಚಿಸಬಹುದು.

ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.

ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.

ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.

ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.

ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ‌ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.

ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.

ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.

ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.

ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.

ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.

ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.

ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ‌ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.

ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.

ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.

ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.

ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.

ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?

ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ‌ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.

ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.

ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.

ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.

ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಳ್ಳನಿಂದ ಬಾಯಿ ಬಿಡಿಸಲು ಈ ಪೊಲೀಸರು ಮಾಡಿದ್ದೇನು ಗೊತ್ತಾ..?ಮೈ ಜುಮ್ಮೆನುಸುವ ಈ ವಿಡಿಯೋ ನೋಡಿ…

    ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….

  • Cinema

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….

  • ಉಪಯುಕ್ತ ಮಾಹಿತಿ

    ನಿಜವಾದ ಬಡವ, ಶ್ರೀಮಂತ ಎಂದ್ರೆ ಯಾರೂ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…