News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
God

ದೇವರ ಹುಡುಕಾಟದಲ್ಲಿ… ಈ ಲೇಖನ ಓದಿ

106

ದೇವರ ಹುಡುಕಾಟದಲ್ಲಿ…

ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.

ನಮಗಿಂತ ಮೇಲೆ ‌ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.

ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.

ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.

ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ‌ಆತ್ಮವಿಶ್ವಾಸ ಹೆಚ್ಚಿಸಬಹುದು.

ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.

ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.

ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.

ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.

ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ‌ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.

ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.

ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.

ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.

ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.

ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.

ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.

ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ‌ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.

ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.

ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.

ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.

ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.

ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?

ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ‌ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.

ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.

ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.

ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.

ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕರ್ನಾಟಕಕ್ಕೆ ಮೊಟ್ಟ ಮೊದಲ ಬಾರಿಗೆ ಸಿಗಲಿದೆ ಎಲೆಕ್ಟ್ರಿಕ್ ಲೋಕೋ ಶೆಡ್: ಕೆ ಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆ….!

    ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಯೋಗವಿದ್ದು, ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಸುದ್ದಿ

    62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…