ಸುದ್ದಿ

ದೊಡ್ಡಗೌಡರ ಎದುರೆ ಕುರ್ಚಿಗಾಗಿ ಕಚ್ಚಾಟ..!

152

ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ.

ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್​ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ ಪಟ್ಟು ಹಿಡಿದಿದ್ದಾರೆ.

ಮೂರ್ನಾಲ್ಕು ದಿನದಿಂದ ಮೇಲಿಂದ ಮೇಲೆ ಸಭೆ ನಡೆಸ್ತಿರೋ ಹೆಚ್​ಡಿ ದೇವೇಗೌಡರು ಪಕ್ಷ ಸಂಘಟನೆಗೆ ಇನ್ನಿಲ್ಲ ಇಂಪಾರ್ಟೆನ್ಸ್​ ಕೊಡ್ತಿದ್ದಾರೆ. ಇಂದೂ ಸಹ ಜೆಪಿ ಭವನದಲ್ಲಿ ಬೆಂಗಳೂರು ನಗರದ ಪದಾಧಿಕಾರಿಗಳ ಜೊತೆ ಸಭೆ ಹಮ್ಮಿಕೊಂಡಿದ್ರು. ಈ ವೇಳೆ ಪಕ್ಷಸಂಘಟನೆಬಗ್ಗೆ ಮಾತಅಡಿದ್ದಕ್ಕಿಂತ ನಿಗಮ ಮಂಡಳಿ ವಿಷ್ಯವೇ ಹೆಚ್ಚು ಸದ್ದು ಮಾಡ್ತು. ದೇವೇಗೌಡ ವಿರುದ್ಧ ಫುಲ್​ ಗರಂ ಆಗಿದ್ದ ಕಾರ್ಯಕರ್ತರು ಪಕ್ಷ ಅಧಿಕಾರಕ್ಕೆ ಬಂದು ಒಂದು ವರ್ಷ ಆಗ್ತಿದೆ. ಆದರೆ, ಬರೀ ಶಾಸಕರಿಗಷ್ಟೇ ಸ್ಥಾನ ಮಾನ ನೀಡಲಾಗಿದೆ. ಹೀಗೇ ಆದರೆ, ಪಕ್ಷಕ್ಕಾಗಿ ದುಡಿದ ನಾವು ಎಲ್ಲಿಗೆ ಹೋಗ್ಬೇಕು. ನಮಗೂ ನಿಗಮ ಮಂಡಳಿ ಸ್ಥಾನ ನೀಡಿ ಅಂತಾ ಏರು ಧ್ವನಿಯಲ್ಲೇ ಆಕ್ರೋಶ ಹೊರಹಾಕಿದರು.

ಯಾವಾಗ ನಿಗಮ ಮಂಡಳಿ ಗದ್ದಲ ಮುಗಿಯೋ ಹಾಗೆ ಕಾಣ್ಲಿಲ್ವೋ ಮಧ್ಯಪ್ರವೇಶಿಸಿದ ಶಾಸಕ ಗೋಪಾಲಯ್ಯ ಎಲ್ರನ್ನೂ ಸಮಾಧಾನ ಪಡಿಸೋ ಪ್ರಯತ್ನ ಮಾಡಿದ್ರು. ಅದ್ರೆ, ಕಾರ್ಯಕರ್ತರು ಕೇಳ್ಬೇಕಲ್ಲ, ನಿಗಮ ಮಂಡಳಿ ಸ್ಥಾನ ನಮಗೂ ಕೊಡ್ಲೇ ಬೇಕು ಅನ್ನೋ ಕೂಗೂ ಮತ್ತೆ ಜೋರು ಮಾಡಿದರುಅನಿವಾರ್ಯವಾಗಿ ಸಭೆಯನ್ನು ಮೊಟುಕು ಗೊಳಿಸಿದ ಹೆಚ್​ಡಿಡಿ ಸಭೆಯಿಂದ ಅರ್ಧಕ್ಕೆ ಎದ್ದು ನಡೆದ್ರು. ಇಷ್ಟಕ್ಕೂ ಸುಮ್ಮನಾದ ಕಾರ್ಯಕರ್ತರು ರಾಜ್ಯಸಭಾಸದಸ್ಯ ಕುಪೇಂದ್ರರೆಡ್ಡಿಯನ್ನು ಅಡ್ಡ ಗಟ್ಟಿದ ಕಾರ್ಯಕರ್ತರು ಅಲ್ಲೋ ಪಟ್ಟಕ್ಕಾಗಿ ಪಟ್ಟು ಹಿಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

    ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಸುದ್ದಿ

    ಪ್ಲಾಸ್ಟಿಕ್ ಬಾಟಲ’ಗಳನ್ನು ಬಿಸಾಡ್ತೀರಾ.!ನೋಡಿ ಇವರು ಈ ವೇಸ್ಟ್ ಬಾಟಲ’ಗಳಿಂದಲೇ ಮನೆ ಕಟ್ಟಿದ್ದಾರೆ..ಹೇಗೆ ತಿಳಿಯಲು ಈ ಲೇಖನ ಓದಿ…

    ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.

  • inspirational

    ತಾನು’ಮುಟ್ಟಾಳ ಅಲ್ಲ’ಎಂದು ಸಾಬೀತು ಪಡಿಸಿದ ಮನೋಜ್..! ಮನೋಜ್ ಗೆದ್ದ ಮೊತ್ತ ಎಷ್ಟು.?

    ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್  ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…