ಆರೋಗ್ಯ

ಧೂಮಪಾನದಿಂದ ದೂರ ಸರಿಯಲು ಮನೆ ಮದ್ದು ತಯಾರಿಸುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

409

ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.

ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್‍ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್‍ನಂತಹ ಅಪಾಯವನ್ನುಂಟು ಮಾಡುವುದು.

ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..

ನೀರು:-

ನೀರು ನೈಸರ್ಗಿಕ ಡಿಟೊಕ್ಸಿಫೈಯರ್‍ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.

ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.

ಜೇನುತುಪ್ಪ:-

ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್‍ಗಳನ್ನು ಒಳಗೊಂಡಿರುತ್ತದೆ.

ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.

 

ಶುಂಠಿ:-

ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.

ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.

ಕ್ಯಾಮೋಮೈಲ್ ಟೀ:-

ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್‍ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.

ಜಿನ್ಸೆಂಗ್:-

ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.

ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.

ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-

ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.

ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ

 

ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾನನ್ನ ನೆನೆಯುತ್ತ ನಿಮ್ಮ ದಿನದ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…

  • ಸುದ್ದಿ

    ಪೊಲೀಸರ ನಿರ್ಲಕ್ಷ್ಯ. ಪಾಕ್ ಪರ ಘೋಷಣೆ ಕೂಗಿದ್ದ ದೇಶದ್ರೋಹಿ ವಿದ್ಯಾರ್ಥಿಗಳ ಬಿಡುಗಡೆ!ಕಿಡಿಕಾರಿದ ವಕೀಲರು.

    ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್‍ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…

  • ಸುದ್ದಿ

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ರಾಜಯೋಗವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…