ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ…
ಈ ಹಳ್ಳಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಚಿಖಾಲಿ. ಈ ಚಿಖಾಲಿ ಹಳ್ಳಿಯಲ್ಲಿ ಈ ವಿಚಿತ್ರ ಆಚರಣೆಯ ಮಾಡುತ್ತಾರೆ. ಇಲ್ಲಿನ ಜನರ ನಂಬಿಕೆಯಂತೆ ರಾವಣನಿಗೆ ಅವಮಾನ ಮಾಡುವುದೆಂದರೆ ಅದು ಇಡೀ ಹಳ್ಳಿಗೇ ಅಶುಭ ಶಕುನವಂತೆ.
ಚೈತ್ರ ನವರಾತ್ರಿಯ ಸಂಪ್ರದಾಯದ ಪ್ರಕಾರ, 10ನೇ ದಿನವಾದ ದಶಮಿಯಂದು ಹಳ್ಳಿಗರು ಇಲ್ಲಿ ಪೂಜಿಸುವುದು ರಾವಣನನ್ನು. ಇದೇ ಅವಧಿಯಲ್ಲಿ ರಾವಣನ ಗೌರವಾರ್ಥ ಜಾತ್ರೆಯೊಂದೂ ನಡೆಯುತ್ತದೆ. ಆ ದಿನ ಜನರು ರಾಮ-ರಾವಣ ಯುದ್ಧದ ಪ್ರಹಸನವನ್ನೂ ಮಾಡುತ್ತಾರೆ. ಈ ಸಂದರ್ಭ ಭಾರೀ ಸಂಖ್ಯೆಯಲ್ಲಿ ಜನರು ನೆರೆಯುತ್ತಾರೆ ಇಲ್ಲಿ.
ಇಲ್ಲಿರುವ ಮಂದಿರದ ಅರ್ಚಕ ಬಾಬು ಭಾಯಿ ರಾವಣ್. ಯಾವಾಗ ಅವರು ಈ ದೇವಸ್ಥಾನದ ಪೂಜೆಗೆ ಶುರುವಿಟ್ಟುಕೊಂಡರೋ ಅಂದಿನಿಂದ ಅವರ ಹೆಸರಿನೊಂದಿಗೆ ‘ರಾವಣ’ ಎಂಬ ಅಡ್ಡನಾಮವೂ ಸೇರಿಕೊಂಡು ಜನಜನಿತವಾಯಿತು.ಇಲ್ಲಿ ಓದಿ:-24 ಗಂಟೆಯಲ್ಲಿ 36 ಮೊಟ್ಟೆ ಇಟ್ಟ ಕೋಳಿ!!!
ಹಳ್ಳಿಗೆ ಯಾವುದೇ ಸಮಸ್ಯೆ ಎದುರಾದಾಗ, ಜನರು ಆತನ ಬಳಿ ಬರುತ್ತಾರೆ. ಅವರು ಬೇಡಿಕೆ ಈಡೇರುವವರೆಗೂ ರಾವಣನ ವಿಗ್ರಹದೆದುರು ಉಪವಾಸ ವ್ರತ ಮಾಡುತ್ತಾರೆ. ಈ ಗ್ರಾಮ ಮತ್ತು ಸಮೀಪದ ಹಳ್ಳಿಗಳು ನೀರಿನ ತೀವ್ರ ಕ್ಷಾಮ ಎದುರಿಸಿದ ಸಂದರ್ಭವೊಂದರಲ್ಲಿ, ಅವರು ರಾವಣ ವಿಗ್ರಹದೆದುರು ಕುಳಿತ ಅವರು ತಮ್ಮ ಪ್ರಾರ್ಥನೆ ಪ್ರಾರಂಭಿಸಿದರು. ಪವಾಡಸದೃಶವೋ ಎಂಬಂತೆ ಮೂರೇ ದಿನಗಳಲ್ಲಿ ಆ ಪ್ರದೇಶದಲ್ಲಿ ಭರ್ಜರಿ ಮಳೆ ಸುರಿಯಿತು.
ಈ ಪ್ರದೇಶದಲ್ಲಿ ರಾವಣನನ್ನು ಮಾತ್ರ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ಚಾಲ್ತಿಯಲ್ಲಿದೆ ಎನ್ನುತ್ತಾರೆ ಕೈಲಾಸ ನಾರಾಯಣ ವ್ಯಾಸ. ಅದೊಮ್ಮೆ ಅದ್ಯಾವುದೋ ಕಾರಣಕ್ಕೆ ಚೈತ್ರ ದಶಮಿಯಂದು ರಾವಣನ ಉತ್ಸವವನ್ನು ನಡೆಸಲಾಗಲಿಲ್ಲ. ಆ ಸಂದರ್ಭದಲ್ಲಿ ಇಡೀ ಹಳ್ಳಿಗೇ ಬೆಂಕಿ ಬಿದ್ದು, ಆ ಗ್ರಾಮದ ಒಂದು ಭಾಗವನ್ನಷ್ಟೇ ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಧ್ಯವಾಯಿತಂತೆ.
ಸ್ಥಳೀಯರಾದ ಪದ್ಮಾ ಜೈನ್ ಕೂಡಾ ಈ ನಂಬಿಕೆಯನ್ನು ಬೆಂಬಲಿಸುತ್ತಾರೆ. ನವರಾತ್ರಿ ಕಳೆದ ದಶಮಿ ದಿನದಂದು ರಾವಣನನ್ನು ಪೂಜಿಸದೇ ಇದ್ದ ಕಾರಣ ಹಳ್ಳಿಗೆ ಒಂದಲ್ಲ, ಎರಡು ಬಾರಿ ಬೆಂಕಿ ಹತ್ತಿಕೊಂಡಿತಂತೆ. ಹಳ್ಳಿಗೆ ಬೆಂಕಿ ಹತ್ತಿಕೊಂಡಿದ್ದನ್ನು ವೀಡಿಯೋದಲ್ಲಿ ಸೆರೆಹಿಡಿಯುವ ಪ್ರಯತ್ನ ಮಾಡಲಾಗಿತ್ತಾದರೂ, ಭಾರೀ ಬಿರುಗಾಳಿಯಿಂದಾಗಿ ಅದು ಸಾಧ್ಯವಾಗಲಿಲ್ಲವಂತೆ.
ಭಾರತದಲ್ಲಿ ಮತ್ತು ನೆರೆಯ ಶ್ರೀಲಂಕಾದಲ್ಲಿ ರಾವಣನನ್ನು ಪೂಜಿಸುವುದು ಹೊಸತೇನಲ್ಲ. ರಾವಣೇಶ್ವರನಿಗೆ ಸಾಕಷ್ಟು ಮಂದಿರಗಳೂ ಇವೆ. ಆದರೆ ರಾವಣನ ಪೂಜೆ ಮಾಡದಿರುವುದಕ್ಕಾಗಿ ಇಡೀ ಹಳ್ಳಿಗೆ ಹಳ್ಳಿಗೇ ಭಸ್ಮವಾಗುವುದು ಮಾತ್ರ ತೀರಾ ಅಪರೂಪ ಮತ್ತು ಚರ್ಚೆ ಮಾಡಬೇಕಾದ ಸಂಗತಿ.
ಇದರ ಬಗ್ಗೆ ನಿಮ್ಮ ಅಭಿಪ್ರಾಯ ಬರೆದು ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…