ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ…
ಈ ಹಳ್ಳಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಚಿಖಾಲಿ. ಈ ಚಿಖಾಲಿ ಹಳ್ಳಿಯಲ್ಲಿ ಈ ವಿಚಿತ್ರ ಆಚರಣೆಯ ಮಾಡುತ್ತಾರೆ. ಇಲ್ಲಿನ ಜನರ ನಂಬಿಕೆಯಂತೆ ರಾವಣನಿಗೆ ಅವಮಾನ ಮಾಡುವುದೆಂದರೆ ಅದು ಇಡೀ ಹಳ್ಳಿಗೇ ಅಶುಭ ಶಕುನವಂತೆ.
ಚೈತ್ರ ನವರಾತ್ರಿಯ ಸಂಪ್ರದಾಯದ ಪ್ರಕಾರ, 10ನೇ ದಿನವಾದ ದಶಮಿಯಂದು ಹಳ್ಳಿಗರು ಇಲ್ಲಿ ಪೂಜಿಸುವುದು ರಾವಣನನ್ನು. ಇದೇ ಅವಧಿಯಲ್ಲಿ ರಾವಣನ ಗೌರವಾರ್ಥ ಜಾತ್ರೆಯೊಂದೂ ನಡೆಯುತ್ತದೆ. ಆ ದಿನ ಜನರು ರಾಮ-ರಾವಣ ಯುದ್ಧದ ಪ್ರಹಸನವನ್ನೂ ಮಾಡುತ್ತಾರೆ. ಈ ಸಂದರ್ಭ ಭಾರೀ ಸಂಖ್ಯೆಯಲ್ಲಿ ಜನರು ನೆರೆಯುತ್ತಾರೆ ಇಲ್ಲಿ.
ಇಲ್ಲಿರುವ ಮಂದಿರದ ಅರ್ಚಕ ಬಾಬು ಭಾಯಿ ರಾವಣ್. ಯಾವಾಗ ಅವರು ಈ ದೇವಸ್ಥಾನದ ಪೂಜೆಗೆ ಶುರುವಿಟ್ಟುಕೊಂಡರೋ ಅಂದಿನಿಂದ ಅವರ ಹೆಸರಿನೊಂದಿಗೆ ‘ರಾವಣ’ ಎಂಬ ಅಡ್ಡನಾಮವೂ ಸೇರಿಕೊಂಡು ಜನಜನಿತವಾಯಿತು.ಇಲ್ಲಿ ಓದಿ:-24 ಗಂಟೆಯಲ್ಲಿ 36 ಮೊಟ್ಟೆ ಇಟ್ಟ ಕೋಳಿ!!!
ಹಳ್ಳಿಗೆ ಯಾವುದೇ ಸಮಸ್ಯೆ ಎದುರಾದಾಗ, ಜನರು ಆತನ ಬಳಿ ಬರುತ್ತಾರೆ. ಅವರು ಬೇಡಿಕೆ ಈಡೇರುವವರೆಗೂ ರಾವಣನ ವಿಗ್ರಹದೆದುರು ಉಪವಾಸ ವ್ರತ ಮಾಡುತ್ತಾರೆ. ಈ ಗ್ರಾಮ ಮತ್ತು ಸಮೀಪದ ಹಳ್ಳಿಗಳು ನೀರಿನ ತೀವ್ರ ಕ್ಷಾಮ ಎದುರಿಸಿದ ಸಂದರ್ಭವೊಂದರಲ್ಲಿ, ಅವರು ರಾವಣ ವಿಗ್ರಹದೆದುರು ಕುಳಿತ ಅವರು ತಮ್ಮ ಪ್ರಾರ್ಥನೆ ಪ್ರಾರಂಭಿಸಿದರು. ಪವಾಡಸದೃಶವೋ ಎಂಬಂತೆ ಮೂರೇ ದಿನಗಳಲ್ಲಿ ಆ ಪ್ರದೇಶದಲ್ಲಿ ಭರ್ಜರಿ ಮಳೆ ಸುರಿಯಿತು.
ಈ ಪ್ರದೇಶದಲ್ಲಿ ರಾವಣನನ್ನು ಮಾತ್ರ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ಚಾಲ್ತಿಯಲ್ಲಿದೆ ಎನ್ನುತ್ತಾರೆ ಕೈಲಾಸ ನಾರಾಯಣ ವ್ಯಾಸ. ಅದೊಮ್ಮೆ ಅದ್ಯಾವುದೋ ಕಾರಣಕ್ಕೆ ಚೈತ್ರ ದಶಮಿಯಂದು ರಾವಣನ ಉತ್ಸವವನ್ನು ನಡೆಸಲಾಗಲಿಲ್ಲ. ಆ ಸಂದರ್ಭದಲ್ಲಿ ಇಡೀ ಹಳ್ಳಿಗೇ ಬೆಂಕಿ ಬಿದ್ದು, ಆ ಗ್ರಾಮದ ಒಂದು ಭಾಗವನ್ನಷ್ಟೇ ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಧ್ಯವಾಯಿತಂತೆ.
ಸ್ಥಳೀಯರಾದ ಪದ್ಮಾ ಜೈನ್ ಕೂಡಾ ಈ ನಂಬಿಕೆಯನ್ನು ಬೆಂಬಲಿಸುತ್ತಾರೆ. ನವರಾತ್ರಿ ಕಳೆದ ದಶಮಿ ದಿನದಂದು ರಾವಣನನ್ನು ಪೂಜಿಸದೇ ಇದ್ದ ಕಾರಣ ಹಳ್ಳಿಗೆ ಒಂದಲ್ಲ, ಎರಡು ಬಾರಿ ಬೆಂಕಿ ಹತ್ತಿಕೊಂಡಿತಂತೆ. ಹಳ್ಳಿಗೆ ಬೆಂಕಿ ಹತ್ತಿಕೊಂಡಿದ್ದನ್ನು ವೀಡಿಯೋದಲ್ಲಿ ಸೆರೆಹಿಡಿಯುವ ಪ್ರಯತ್ನ ಮಾಡಲಾಗಿತ್ತಾದರೂ, ಭಾರೀ ಬಿರುಗಾಳಿಯಿಂದಾಗಿ ಅದು ಸಾಧ್ಯವಾಗಲಿಲ್ಲವಂತೆ.
ಭಾರತದಲ್ಲಿ ಮತ್ತು ನೆರೆಯ ಶ್ರೀಲಂಕಾದಲ್ಲಿ ರಾವಣನನ್ನು ಪೂಜಿಸುವುದು ಹೊಸತೇನಲ್ಲ. ರಾವಣೇಶ್ವರನಿಗೆ ಸಾಕಷ್ಟು ಮಂದಿರಗಳೂ ಇವೆ. ಆದರೆ ರಾವಣನ ಪೂಜೆ ಮಾಡದಿರುವುದಕ್ಕಾಗಿ ಇಡೀ ಹಳ್ಳಿಗೆ ಹಳ್ಳಿಗೇ ಭಸ್ಮವಾಗುವುದು ಮಾತ್ರ ತೀರಾ ಅಪರೂಪ ಮತ್ತು ಚರ್ಚೆ ಮಾಡಬೇಕಾದ ಸಂಗತಿ.
ಇದರ ಬಗ್ಗೆ ನಿಮ್ಮ ಅಭಿಪ್ರಾಯ ಬರೆದು ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…