ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ…
ಈ ಹಳ್ಳಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಚಿಖಾಲಿ. ಈ ಚಿಖಾಲಿ ಹಳ್ಳಿಯಲ್ಲಿ ಈ ವಿಚಿತ್ರ ಆಚರಣೆಯ ಮಾಡುತ್ತಾರೆ. ಇಲ್ಲಿನ ಜನರ ನಂಬಿಕೆಯಂತೆ ರಾವಣನಿಗೆ ಅವಮಾನ ಮಾಡುವುದೆಂದರೆ ಅದು ಇಡೀ ಹಳ್ಳಿಗೇ ಅಶುಭ ಶಕುನವಂತೆ.
ಚೈತ್ರ ನವರಾತ್ರಿಯ ಸಂಪ್ರದಾಯದ ಪ್ರಕಾರ, 10ನೇ ದಿನವಾದ ದಶಮಿಯಂದು ಹಳ್ಳಿಗರು ಇಲ್ಲಿ ಪೂಜಿಸುವುದು ರಾವಣನನ್ನು. ಇದೇ ಅವಧಿಯಲ್ಲಿ ರಾವಣನ ಗೌರವಾರ್ಥ ಜಾತ್ರೆಯೊಂದೂ ನಡೆಯುತ್ತದೆ. ಆ ದಿನ ಜನರು ರಾಮ-ರಾವಣ ಯುದ್ಧದ ಪ್ರಹಸನವನ್ನೂ ಮಾಡುತ್ತಾರೆ. ಈ ಸಂದರ್ಭ ಭಾರೀ ಸಂಖ್ಯೆಯಲ್ಲಿ ಜನರು ನೆರೆಯುತ್ತಾರೆ ಇಲ್ಲಿ.
ಇಲ್ಲಿರುವ ಮಂದಿರದ ಅರ್ಚಕ ಬಾಬು ಭಾಯಿ ರಾವಣ್. ಯಾವಾಗ ಅವರು ಈ ದೇವಸ್ಥಾನದ ಪೂಜೆಗೆ ಶುರುವಿಟ್ಟುಕೊಂಡರೋ ಅಂದಿನಿಂದ ಅವರ ಹೆಸರಿನೊಂದಿಗೆ ‘ರಾವಣ’ ಎಂಬ ಅಡ್ಡನಾಮವೂ ಸೇರಿಕೊಂಡು ಜನಜನಿತವಾಯಿತು.ಇಲ್ಲಿ ಓದಿ:-24 ಗಂಟೆಯಲ್ಲಿ 36 ಮೊಟ್ಟೆ ಇಟ್ಟ ಕೋಳಿ!!!
ಹಳ್ಳಿಗೆ ಯಾವುದೇ ಸಮಸ್ಯೆ ಎದುರಾದಾಗ, ಜನರು ಆತನ ಬಳಿ ಬರುತ್ತಾರೆ. ಅವರು ಬೇಡಿಕೆ ಈಡೇರುವವರೆಗೂ ರಾವಣನ ವಿಗ್ರಹದೆದುರು ಉಪವಾಸ ವ್ರತ ಮಾಡುತ್ತಾರೆ. ಈ ಗ್ರಾಮ ಮತ್ತು ಸಮೀಪದ ಹಳ್ಳಿಗಳು ನೀರಿನ ತೀವ್ರ ಕ್ಷಾಮ ಎದುರಿಸಿದ ಸಂದರ್ಭವೊಂದರಲ್ಲಿ, ಅವರು ರಾವಣ ವಿಗ್ರಹದೆದುರು ಕುಳಿತ ಅವರು ತಮ್ಮ ಪ್ರಾರ್ಥನೆ ಪ್ರಾರಂಭಿಸಿದರು. ಪವಾಡಸದೃಶವೋ ಎಂಬಂತೆ ಮೂರೇ ದಿನಗಳಲ್ಲಿ ಆ ಪ್ರದೇಶದಲ್ಲಿ ಭರ್ಜರಿ ಮಳೆ ಸುರಿಯಿತು.
ಈ ಪ್ರದೇಶದಲ್ಲಿ ರಾವಣನನ್ನು ಮಾತ್ರ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ಚಾಲ್ತಿಯಲ್ಲಿದೆ ಎನ್ನುತ್ತಾರೆ ಕೈಲಾಸ ನಾರಾಯಣ ವ್ಯಾಸ. ಅದೊಮ್ಮೆ ಅದ್ಯಾವುದೋ ಕಾರಣಕ್ಕೆ ಚೈತ್ರ ದಶಮಿಯಂದು ರಾವಣನ ಉತ್ಸವವನ್ನು ನಡೆಸಲಾಗಲಿಲ್ಲ. ಆ ಸಂದರ್ಭದಲ್ಲಿ ಇಡೀ ಹಳ್ಳಿಗೇ ಬೆಂಕಿ ಬಿದ್ದು, ಆ ಗ್ರಾಮದ ಒಂದು ಭಾಗವನ್ನಷ್ಟೇ ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಧ್ಯವಾಯಿತಂತೆ.
ಸ್ಥಳೀಯರಾದ ಪದ್ಮಾ ಜೈನ್ ಕೂಡಾ ಈ ನಂಬಿಕೆಯನ್ನು ಬೆಂಬಲಿಸುತ್ತಾರೆ. ನವರಾತ್ರಿ ಕಳೆದ ದಶಮಿ ದಿನದಂದು ರಾವಣನನ್ನು ಪೂಜಿಸದೇ ಇದ್ದ ಕಾರಣ ಹಳ್ಳಿಗೆ ಒಂದಲ್ಲ, ಎರಡು ಬಾರಿ ಬೆಂಕಿ ಹತ್ತಿಕೊಂಡಿತಂತೆ. ಹಳ್ಳಿಗೆ ಬೆಂಕಿ ಹತ್ತಿಕೊಂಡಿದ್ದನ್ನು ವೀಡಿಯೋದಲ್ಲಿ ಸೆರೆಹಿಡಿಯುವ ಪ್ರಯತ್ನ ಮಾಡಲಾಗಿತ್ತಾದರೂ, ಭಾರೀ ಬಿರುಗಾಳಿಯಿಂದಾಗಿ ಅದು ಸಾಧ್ಯವಾಗಲಿಲ್ಲವಂತೆ.
ಭಾರತದಲ್ಲಿ ಮತ್ತು ನೆರೆಯ ಶ್ರೀಲಂಕಾದಲ್ಲಿ ರಾವಣನನ್ನು ಪೂಜಿಸುವುದು ಹೊಸತೇನಲ್ಲ. ರಾವಣೇಶ್ವರನಿಗೆ ಸಾಕಷ್ಟು ಮಂದಿರಗಳೂ ಇವೆ. ಆದರೆ ರಾವಣನ ಪೂಜೆ ಮಾಡದಿರುವುದಕ್ಕಾಗಿ ಇಡೀ ಹಳ್ಳಿಗೆ ಹಳ್ಳಿಗೇ ಭಸ್ಮವಾಗುವುದು ಮಾತ್ರ ತೀರಾ ಅಪರೂಪ ಮತ್ತು ಚರ್ಚೆ ಮಾಡಬೇಕಾದ ಸಂಗತಿ.
ಇದರ ಬಗ್ಗೆ ನಿಮ್ಮ ಅಭಿಪ್ರಾಯ ಬರೆದು ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.