ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ…
ಈ ಹಳ್ಳಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಚಿಖಾಲಿ. ಈ ಚಿಖಾಲಿ ಹಳ್ಳಿಯಲ್ಲಿ ಈ ವಿಚಿತ್ರ ಆಚರಣೆಯ ಮಾಡುತ್ತಾರೆ. ಇಲ್ಲಿನ ಜನರ ನಂಬಿಕೆಯಂತೆ ರಾವಣನಿಗೆ ಅವಮಾನ ಮಾಡುವುದೆಂದರೆ ಅದು ಇಡೀ ಹಳ್ಳಿಗೇ ಅಶುಭ ಶಕುನವಂತೆ.
ಚೈತ್ರ ನವರಾತ್ರಿಯ ಸಂಪ್ರದಾಯದ ಪ್ರಕಾರ, 10ನೇ ದಿನವಾದ ದಶಮಿಯಂದು ಹಳ್ಳಿಗರು ಇಲ್ಲಿ ಪೂಜಿಸುವುದು ರಾವಣನನ್ನು. ಇದೇ ಅವಧಿಯಲ್ಲಿ ರಾವಣನ ಗೌರವಾರ್ಥ ಜಾತ್ರೆಯೊಂದೂ ನಡೆಯುತ್ತದೆ. ಆ ದಿನ ಜನರು ರಾಮ-ರಾವಣ ಯುದ್ಧದ ಪ್ರಹಸನವನ್ನೂ ಮಾಡುತ್ತಾರೆ. ಈ ಸಂದರ್ಭ ಭಾರೀ ಸಂಖ್ಯೆಯಲ್ಲಿ ಜನರು ನೆರೆಯುತ್ತಾರೆ ಇಲ್ಲಿ.
ಇಲ್ಲಿರುವ ಮಂದಿರದ ಅರ್ಚಕ ಬಾಬು ಭಾಯಿ ರಾವಣ್. ಯಾವಾಗ ಅವರು ಈ ದೇವಸ್ಥಾನದ ಪೂಜೆಗೆ ಶುರುವಿಟ್ಟುಕೊಂಡರೋ ಅಂದಿನಿಂದ ಅವರ ಹೆಸರಿನೊಂದಿಗೆ ‘ರಾವಣ’ ಎಂಬ ಅಡ್ಡನಾಮವೂ ಸೇರಿಕೊಂಡು ಜನಜನಿತವಾಯಿತು.ಇಲ್ಲಿ ಓದಿ:-24 ಗಂಟೆಯಲ್ಲಿ 36 ಮೊಟ್ಟೆ ಇಟ್ಟ ಕೋಳಿ!!!
ಹಳ್ಳಿಗೆ ಯಾವುದೇ ಸಮಸ್ಯೆ ಎದುರಾದಾಗ, ಜನರು ಆತನ ಬಳಿ ಬರುತ್ತಾರೆ. ಅವರು ಬೇಡಿಕೆ ಈಡೇರುವವರೆಗೂ ರಾವಣನ ವಿಗ್ರಹದೆದುರು ಉಪವಾಸ ವ್ರತ ಮಾಡುತ್ತಾರೆ. ಈ ಗ್ರಾಮ ಮತ್ತು ಸಮೀಪದ ಹಳ್ಳಿಗಳು ನೀರಿನ ತೀವ್ರ ಕ್ಷಾಮ ಎದುರಿಸಿದ ಸಂದರ್ಭವೊಂದರಲ್ಲಿ, ಅವರು ರಾವಣ ವಿಗ್ರಹದೆದುರು ಕುಳಿತ ಅವರು ತಮ್ಮ ಪ್ರಾರ್ಥನೆ ಪ್ರಾರಂಭಿಸಿದರು. ಪವಾಡಸದೃಶವೋ ಎಂಬಂತೆ ಮೂರೇ ದಿನಗಳಲ್ಲಿ ಆ ಪ್ರದೇಶದಲ್ಲಿ ಭರ್ಜರಿ ಮಳೆ ಸುರಿಯಿತು.
ಈ ಪ್ರದೇಶದಲ್ಲಿ ರಾವಣನನ್ನು ಮಾತ್ರ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ಚಾಲ್ತಿಯಲ್ಲಿದೆ ಎನ್ನುತ್ತಾರೆ ಕೈಲಾಸ ನಾರಾಯಣ ವ್ಯಾಸ. ಅದೊಮ್ಮೆ ಅದ್ಯಾವುದೋ ಕಾರಣಕ್ಕೆ ಚೈತ್ರ ದಶಮಿಯಂದು ರಾವಣನ ಉತ್ಸವವನ್ನು ನಡೆಸಲಾಗಲಿಲ್ಲ. ಆ ಸಂದರ್ಭದಲ್ಲಿ ಇಡೀ ಹಳ್ಳಿಗೇ ಬೆಂಕಿ ಬಿದ್ದು, ಆ ಗ್ರಾಮದ ಒಂದು ಭಾಗವನ್ನಷ್ಟೇ ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಧ್ಯವಾಯಿತಂತೆ.
ಸ್ಥಳೀಯರಾದ ಪದ್ಮಾ ಜೈನ್ ಕೂಡಾ ಈ ನಂಬಿಕೆಯನ್ನು ಬೆಂಬಲಿಸುತ್ತಾರೆ. ನವರಾತ್ರಿ ಕಳೆದ ದಶಮಿ ದಿನದಂದು ರಾವಣನನ್ನು ಪೂಜಿಸದೇ ಇದ್ದ ಕಾರಣ ಹಳ್ಳಿಗೆ ಒಂದಲ್ಲ, ಎರಡು ಬಾರಿ ಬೆಂಕಿ ಹತ್ತಿಕೊಂಡಿತಂತೆ. ಹಳ್ಳಿಗೆ ಬೆಂಕಿ ಹತ್ತಿಕೊಂಡಿದ್ದನ್ನು ವೀಡಿಯೋದಲ್ಲಿ ಸೆರೆಹಿಡಿಯುವ ಪ್ರಯತ್ನ ಮಾಡಲಾಗಿತ್ತಾದರೂ, ಭಾರೀ ಬಿರುಗಾಳಿಯಿಂದಾಗಿ ಅದು ಸಾಧ್ಯವಾಗಲಿಲ್ಲವಂತೆ.
ಭಾರತದಲ್ಲಿ ಮತ್ತು ನೆರೆಯ ಶ್ರೀಲಂಕಾದಲ್ಲಿ ರಾವಣನನ್ನು ಪೂಜಿಸುವುದು ಹೊಸತೇನಲ್ಲ. ರಾವಣೇಶ್ವರನಿಗೆ ಸಾಕಷ್ಟು ಮಂದಿರಗಳೂ ಇವೆ. ಆದರೆ ರಾವಣನ ಪೂಜೆ ಮಾಡದಿರುವುದಕ್ಕಾಗಿ ಇಡೀ ಹಳ್ಳಿಗೆ ಹಳ್ಳಿಗೇ ಭಸ್ಮವಾಗುವುದು ಮಾತ್ರ ತೀರಾ ಅಪರೂಪ ಮತ್ತು ಚರ್ಚೆ ಮಾಡಬೇಕಾದ ಸಂಗತಿ.
ಇದರ ಬಗ್ಗೆ ನಿಮ್ಮ ಅಭಿಪ್ರಾಯ ಬರೆದು ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…
ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…