ಕರ್ನಾಟಕ

ನಮ್ಮ ಬೆಂಗಳೂರು ಮಹಾನಗರಕ್ಕೆ ಸಿಕ್ತು,ಹೊಸದೊಂದು ನೊರೆ ಬಾಗ್ಯ!ಏನಿದು ನೊರೆ ಬಾಗ್ಯ ಅಂತೀರಾ?ಮುಂದೆ ಓದಿ…

439

ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.

ಶಾಕ್ ಆಯ್ತಾ ಯಾವ ಭಾಗ್ಯ ಅಂತ.ಅದೇ ಬೆಳ್ಳಂದೂರು ಕೆರೆಯ ನೊರೆ ಭಾಗ್ಯ.ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಳ್ಳಂದೂರು, ವರ್ತೂರು ಕೆರೆ ಕೋಡಿಗಳಲ್ಲಿ ಭಾರಿ ಪ್ರಮಾಣದಲ್ಲಿ ನೊರೆ ಕಾಣಿಸಿಕೊಂಡು ಗಾಳಿಯಲ್ಲಿ ತೇಲಾಡುತ್ತಿರುವುದರಿಂದ ವಾಹನ ಬಳಕೆದಾರರು, ಸಾರ್ವಜನಿಕರು ತೀವ್ರ ಪರದಾಡುವಂತಾಗಿದೆ.

ಕೆರೆಯ ಅಭಿವೃದ್ಧಿ ಕಾರ್ಯಕ್ಕೆ ಬಿಡಿಎ ಒಂದಿಷ್ಟು ಕ್ರಮ ಕೈಗೊಂಡಿದ್ದರೂ ನೊರೆ ಸಮಸ್ಯೆ ತೀವ್ರವಾಗಿದ್ದು, ಸ್ಥಳೀಯರು ಅನಾರೋಗ್ಯಕರ ವಾತಾವರಣದಲ್ಲೇ ದಿನ ಕಳೆಯುವಂತಾಗಿದೆ.

ಕೆಲವು ದಿನಗಳಿಂದ ಬಿದ್ದ ಬಾರೀ ಮಳೆಯಿಂದಾಗಿ ಬೆಳ್ಳಂದೂರು ಕೆರೆ, ವರ್ತೂರು ಕೆರೆ ಕೋಡಿಯಲ್ಲಿ ಭಾರಿ ಪ್ರಮಾಣದಲ್ಲಿ ನೊರೆ ಸಂಗ್ರಹವಾಗಿತ್ತು. ಮಳೆ ಜಾಸ್ತಿ ಬಿದ್ದಂತೆ ಕೆರೆಯಲ್ಲಿ ನೀರು ಹೆಚ್ಚಾಗಿ ನೊರೆ ಹೆಚ್ಚಾಗಿದೆ.

ಕೋಡಿ ಭಾಗದಲ್ಲಿ ಐದಾರು ಅಡಿ ಎತ್ತರದಷ್ಟು ದಟ್ಟ ನೊರೆ ಕಾಣಿಸಿಕೊಂಡು, ಗಾಳಿ ಬೀಸಿದ್ದರಿಂದ ರಸ್ತೆಯಲ್ಲಿ ಬಿದ್ದ ಅಗಾಧ ನೊರೆಯಿಂದ ವಾಹನಗಳಿಗೆ ತೊಂದರೆಯಾಗಿ ಸಾರ್ವಜನಿಕರಿಗೂ ತೊಂದರೆಯಾಗಿದೆ.

ರಸ್ತೆಯಲ್ಲಿ ಸಂಚರಿಸಲು ಸಹ ಜನರಿಗೆ ಭಯವಾಗುತ್ತಿದೆ…

ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರು, ಆಟೋರಿಕ್ಷಾ, ತ್ರಿಚಕ್ರ ವಾಹನ ಚಾಲಕರು, ಪ್ರಯಾಣಿಕರು ನೊರೆಯಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಡುತ್ತಿದ್ದ ದೃಶ್ಯ ಕಂಡುಬಂತು.

ಏಕೆಂದರೆ ವಿಷಯುಕ್ತ ರಾಸಾಯನಿಕ ಸೇರ್ಪಡೆಯಿಂದಾಗಿ ನೊರೆ ಚರ್ಮಕ್ಕೆ ಸೋಕಿದ ಭಾಗದಲ್ಲಿ ಕೆಂಪು ಕಲೆಗಳಾಗಿ ತುರಿಕೆ ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯರು ಈ ಭಾಗದಲ್ಲಿ ಓಡಾಡಲು ಆತಂಕಪಡುವಂತಾಗಿದೆ.

ಬಿಡಿಎ ಅಲ್ಪಾವಧಿ ಕ್ರಮವೆಂಬಂತೆ ಕೆರೆಯಲ್ಲಿ ಸಂಗ್ರಹವಾಗಿರುವ ಜೊಂಡು, ಕಳೆ ಸಸಿ ತೆರವು ಕಾರ್ಯ ಮುಂದುವರಿಸಿದೆ.

ದೀರ್ಘಾವಧಿ ಕ್ರಮವಾಗಿ ಯಾವ ವಿಧಾನದಡಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂಬ ಬಗ್ಗೆ ಬಿಡಿಎ ಆಯುಕ್ತರ ಅಧ್ಯಕ್ಷತೆಯ ತಜ್ಞರ ಸಮಿತಿಯು ಚರ್ಚೆ ನಡೆಸುತ್ತಿದ್ದು, ಸರ್ಕಾರ ಕೈಗೊಳ್ಳುವ ನಿರ್ಧಾರದಂತೆ ಮುಂದುವರಿಯಲು ನಿರ್ಧರಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….

  • ಜ್ಯೋತಿಷ್ಯ

    ಶ್ರೀ ಚಾಮುಂಡೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…