ಸುದ್ದಿ

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

608

ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್‌ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.

 

ಏಕೆ ಈ ಯುದ್ದ..?

ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು ಸಹಿಸದ ಬಹುಸಂಖ್ಯಾತ ಸುನ್ನಿ ಸಮುದಾಯಗಳು, ಸರ್ಕಾರದ ವಿರುದ್ಧವೇ ಸಮರ ಸಾರಿವೆ..

ಮಕ್ಕಳು ಮತ್ತು ಅಮಾಯಕ ಪ್ರಜೆಗಳ ಸಾವಿನ ಸಂಖ್ಯೆ…

ನೆರೆ ದೇಶಗಳ ಬೆಂಬಲದಿಂದಾಗಿ ಎರಡೂ ಬಣಗಳ ನಡುವೆ ರಕ್ತದ ಒಕಳಿಯೇ ಹರಿಯುತ್ತದೆ.ಅಕ್ಷರಶಃ ಸಿರಿಯಾ ರಕ್ತಪಾತ ದೇಶವಾಗಿದೆ. 22 ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ಬಂಡುಕೋರರ ಸೆಣಸಾಟಕ್ಕೆ ಅಮಾಯಕ ಪ್ರಜೆಗಳು ಮತ್ತು ಮಕ್ಕಳ ಸಾವಿನ ಸಂಖ್ಯೆ 60 ಸಾವಿರ  ದಾಟಿದ್ದು ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಪ್ರಾಣದ ಭಯದಿಂದಾಗಿ ಸಾವಿರಾರು ಮಂದಿ ದೇಶ ಬಿಟ್ಟು ಗಡಿ ಭಾಗದ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.ಸುಮಾರು ಎರಡುವರೆ ಲಕ್ಷಕ್ಕಿಂತ ಹೆಚ್ಚು ಜನ ದೇಶ ಬಿಟ್ಟು ಈಗಾಗಲೇ ಪಕ್ಕದ ದೇಶಗಳಾದ ಟರ್ಕಿ, ಲೆಬೆನಾನ್, ಜೋರ್ಡಾನ್, ಇರಾನ್‌ದೇಶಗಳಿಗೆ ನುಗ್ಗಿದ್ದಾರೆ.

ಸಾತ್ ಕೊಡ್ತಿರೋ ದೇಶಗಳು..

ಅಧ್ಯಕ್ಷ ಬಷರ್ ಅಲ್

  • ರಷ್ಯಾ
  • ಇರಾನ್
  • ಲೆಬನಾನ್

ಸಿರಿಯಾ ಬಂಡುಕೋರರು

  • ಸೌದಿ ಅರೇಬಿಯಾ
  • ಅಮೇರಿಕಾ
  • ಇಸ್ರೇಲ್

ಸಿರಿಯಾದ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಹಾಗೂ ಇವರ ಆಡಳಿತವನ್ನು ವಿರೋಧಿಸುವ ಕ್ರಾಂತಿಕಾರಿ ಸಂಘಟನೆಗಳ ನಡುವೆ ಭೀಕರ ಕದನ ನಡೆಯುತ್ತಿದೆ. ಇವರಿಬ್ಬರ ಹೊಡೆದಾಟಕ್ಕೆ ಅಮಾಯಕ ಪ್ರಜೆಗಳು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಬಲ್ಯ ದೇಶಗಳ ಬೆಂಬಲದಿಂದಾಗಿ ಸಿರಿಯಾ ದೇಶವು ರಕ್ತಸಿಕ್ತಗೊಂಡಿದ್ದು ಬಾಂಬ್, ರಾಕೆಟ್ ದಾಳಿಯಿಂದ ದೊಡ್ಡ ದೊಡ್ಡ ನಗರಗಳು ಭೂಕಂಪ ಪೀಡಿತ ಪ್ರದೇಶಗಳಂತೆ ಕಾಣುತ್ತಿವೆ.

ಇದೆರೆಲ್ಲದರ ಪರಿಣಾಮ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ.ಸಿರಿಯಾದಲ್ಲಿನ ಮಕ್ಕಳ ಕಣ್ಣೀರು ಆಕ್ರಂದನ ಕೆಳುವವರಿಲ್ಲವಂತಾಗಿದೆ. ದಾಳಿಯಲ್ಲಿ ಗಾಯಗೊಂಡ ಪುಟ್ಟ ಪುಟ್ಟ ಕಂದಮ್ಮಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತ ಸುದ್ದಿ ಮಾಡಿದೆ.

ವಿಶ್ವ ಸಂಸ್ಥೆ ಮಾತಿಗೆ ಜಗ್ಗದ ಸಿರಿಯಾ ಸರ್ಕಾರ ಮತ್ತು ಬಂಡುಕೋರರು

ಕದನ ವಿರಾಮ ಘೋಷಿಸಿ, ಅಧಿಕಾರವನ್ನು ಬಿಟ್ಟುಕೊಟ್ಟು, ದೇಶದಲ್ಲಿ ಶಾಂತಿ ನೆಲೆಸಲು ಸಹಕರಿಸಿ ಎಂಬ ವಿಶ್ವ ಸಂಸ್ಥೆಯ ಕೋರಿಕೆಗೆ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಒಪ್ಪಿಗೆ ಸೂಚಿಸಿಲ್ಲ.ತಮ್ಮ ಅಧಿಕಾರಕ್ಕಾಗಿ ಸಾವಿರಾರು ಜನರ ಮಾರಣ ಹೋಮ ನಡೆಯುತ್ತಿದ್ದರೂ ಈ ಅಧ್ಯಕ್ಷ ತಮ್ಮ ಅಧಿಕಾರದಿಂದ ಕೆಳಗಿಳಿಯಲು ಒಪ್ಪುತ್ತಿಲ್ಲ.

ಅತ್ತ ಕಡೆ ಸಿರಿಯಾ ಬಂಡುಕೋರರು ‘ಬಷರ್ ಅಲ್ ಅಸ್ಸಾದ್ ಅಧಿಕಾರದಿಂದ ಕೆಳಗಿಳಿಯುವವರೆಗೂ ಯುದ್ದ ನಿಲ್ಲಿಸುವ ಮಾತೇ ಇಲ್ಲ ಎಂದು ವಿಶ್ವಸಂಸ್ತೆಯ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.ಇದೆರೆಲ್ಲದರ ನಡುವೆ ಅಲ್ಲಿನ ರಕ್ತಪಾತದಿಂದಾಗಿ ನರುಳುತ್ತಿರುವವರು ಸಿರಿಯಾದ ಜನ ಮತ್ತು ಸಿರಿಯಾ ದೇಶದ ಮುಂದಿನ ಪ್ರಜೆಗಲಾಗಬೇಕಾಗಿರುವ ಮುಗ್ದ ಕಂದಮ್ಮಗಳು ಮಾತ್ರ.

ಜಗತ್ತಿಗೆ ಕಾಣುತ್ತಿಲ್ಲವೇ  ಮುಗ್ದ ಕಂದಮ್ಮಗಳ ಮಾರಣಹೋಮ…

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ ಇದು ಸಿರಿಯಾದ ಹುಡುಗನೊಬ್ಬ  ಫೇಸ್‌ಬುಕ್‌ನಲ್ಲಿ ಇಡೀ ಪ್ರಪಂಚಕ್ಕೆ ಕೂಗಿ ಹೇಳಿರುವ ನುಡಿ.

ಮುಗ್ದ ಕಂದಮ್ಮಗಳ ಮಾರಣ ಹೋಮವನ್ನು ಜಗತ್ತಿನ ದೇಶಗಳು ನೋಡಿಯೂ ನೋಡದಂತೆ ಇವೆ.ಅಲ್ಲಿನ ಮುಗ್ದ ರಕ್ತಸಿಕ್ತ ಮಕ್ಕಳ ಚಿತ್ರಗಳನ್ನು ನೋಡಿದ್ರೆ ಕಲ್ಲು ಹೃದಯ ಇದ್ರೂ ಸಹ ಕಣ್ಣೀರು ಬರಿಸುವಂತಿದೆ.ಅಮೇರಿಕಾ ರಷ್ಯಾ ಸೇರಿದಂತೆ ಕೆಲವು ದೇಶಗಳು, ಏಕೆ ಹೀಗೆ ಮಕ್ಕಳ ಮತ್ತು ಅಲ್ಲಿನ ಜನರ ಜೀವನದಲ್ಲಿ ಆಟವಾಡುತ್ತಿವೆ ಗೊತ್ತಿಲ್ಲ.ಒಂದಂತೂ ಸತ್ಯ ಅಧಿಕಾರದ ಮೋಹದಿಂದ ಜಗತ್ತಿನ ಜನ ಏನೆಲ್ಲಾ ಮಾಡ್ತಾರೆ ಎನ್ನುವುದಕ್ಕೆ ಇದೊಂದು ಕಣ್ಣಿಗೆ ಕಾಣುವ ನಿದರ್ಶನ.

ಸಿರಿಯಾದ ಮತ್ತಷ್ಟು ಭಯಾನಕ ಚಿತ್ರಗಳು…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…

  • ಉಪಯುಕ್ತ ಮಾಹಿತಿ

    ಲೋ ಬಿಪಿಯನ್ನು ನಿಯಂತ್ರಿಸಲು ಮನೆಯಲ್ಲಿಯೇ ಈ 5 ಸುಲಭ ಮಾರ್ಗಗಳನ್ನು ಅನುಸರಿಸಿ…

    ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…

  • ಸುದ್ದಿ

    ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಜಗ್ಗೇಶ್, ಉಪಾಸನಾ ಕೊನಿಡೆಲಾ ಇನ್ನು ಅನೇಕ ಸ್ಟಾರ್​ಗಳು,..ಇದಕ್ಕೆ ಕಾರಣ.?ಇಲ್ಲಿದೆ ನೋಡಿ….

    ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ  ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು  ಎಲ್ಲರ  ಟ್ವೀಟ್​ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…

  • ಉಪಯುಕ್ತ ಮಾಹಿತಿ

    ನೀವು ಬಳಸುವ ಮಾತ್ರೆಗಳ ಪ್ಯಾಕ್ ನಲ್ಲಿ ಈ ಕೆಂಪು ಗೆರೆ ಏಕಿರುತ್ತದೆ ಗೊತ್ತಾ. ಯಾರಿಗೂ ತಿಳಿದಿಲ್ಲ.

    ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…