ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.

ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು ಸಹಿಸದ ಬಹುಸಂಖ್ಯಾತ ಸುನ್ನಿ ಸಮುದಾಯಗಳು, ಸರ್ಕಾರದ ವಿರುದ್ಧವೇ ಸಮರ ಸಾರಿವೆ..

ನೆರೆ ದೇಶಗಳ ಬೆಂಬಲದಿಂದಾಗಿ ಎರಡೂ ಬಣಗಳ ನಡುವೆ ರಕ್ತದ ಒಕಳಿಯೇ ಹರಿಯುತ್ತದೆ.ಅಕ್ಷರಶಃ ಸಿರಿಯಾ ರಕ್ತಪಾತ ದೇಶವಾಗಿದೆ. 22 ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ಬಂಡುಕೋರರ ಸೆಣಸಾಟಕ್ಕೆ ಅಮಾಯಕ ಪ್ರಜೆಗಳು ಮತ್ತು ಮಕ್ಕಳ ಸಾವಿನ ಸಂಖ್ಯೆ 60 ಸಾವಿರ ದಾಟಿದ್ದು ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಪ್ರಾಣದ ಭಯದಿಂದಾಗಿ ಸಾವಿರಾರು ಮಂದಿ ದೇಶ ಬಿಟ್ಟು ಗಡಿ ಭಾಗದ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.ಸುಮಾರು ಎರಡುವರೆ ಲಕ್ಷಕ್ಕಿಂತ ಹೆಚ್ಚು ಜನ ದೇಶ ಬಿಟ್ಟು ಈಗಾಗಲೇ ಪಕ್ಕದ ದೇಶಗಳಾದ ಟರ್ಕಿ, ಲೆಬೆನಾನ್, ಜೋರ್ಡಾನ್, ಇರಾನ್ದೇಶಗಳಿಗೆ ನುಗ್ಗಿದ್ದಾರೆ.
ಅಧ್ಯಕ್ಷ ಬಷರ್ ಅಲ್
ಸಿರಿಯಾ ಬಂಡುಕೋರರು

ಸಿರಿಯಾದ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಹಾಗೂ ಇವರ ಆಡಳಿತವನ್ನು ವಿರೋಧಿಸುವ ಕ್ರಾಂತಿಕಾರಿ ಸಂಘಟನೆಗಳ ನಡುವೆ ಭೀಕರ ಕದನ ನಡೆಯುತ್ತಿದೆ. ಇವರಿಬ್ಬರ ಹೊಡೆದಾಟಕ್ಕೆ ಅಮಾಯಕ ಪ್ರಜೆಗಳು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಬಲ್ಯ ದೇಶಗಳ ಬೆಂಬಲದಿಂದಾಗಿ ಸಿರಿಯಾ ದೇಶವು ರಕ್ತಸಿಕ್ತಗೊಂಡಿದ್ದು ಬಾಂಬ್, ರಾಕೆಟ್ ದಾಳಿಯಿಂದ ದೊಡ್ಡ ದೊಡ್ಡ ನಗರಗಳು ಭೂಕಂಪ ಪೀಡಿತ ಪ್ರದೇಶಗಳಂತೆ ಕಾಣುತ್ತಿವೆ.

ಇದೆರೆಲ್ಲದರ ಪರಿಣಾಮ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ.ಸಿರಿಯಾದಲ್ಲಿನ ಮಕ್ಕಳ ಕಣ್ಣೀರು ಆಕ್ರಂದನ ಕೆಳುವವರಿಲ್ಲವಂತಾಗಿದೆ. ದಾಳಿಯಲ್ಲಿ ಗಾಯಗೊಂಡ ಪುಟ್ಟ ಪುಟ್ಟ ಕಂದಮ್ಮಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತ ಸುದ್ದಿ ಮಾಡಿದೆ.
ಕದನ ವಿರಾಮ ಘೋಷಿಸಿ, ಅಧಿಕಾರವನ್ನು ಬಿಟ್ಟುಕೊಟ್ಟು, ದೇಶದಲ್ಲಿ ಶಾಂತಿ ನೆಲೆಸಲು ಸಹಕರಿಸಿ ಎಂಬ ವಿಶ್ವ ಸಂಸ್ಥೆಯ ಕೋರಿಕೆಗೆ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಒಪ್ಪಿಗೆ ಸೂಚಿಸಿಲ್ಲ.ತಮ್ಮ ಅಧಿಕಾರಕ್ಕಾಗಿ ಸಾವಿರಾರು ಜನರ ಮಾರಣ ಹೋಮ ನಡೆಯುತ್ತಿದ್ದರೂ ಈ ಅಧ್ಯಕ್ಷ ತಮ್ಮ ಅಧಿಕಾರದಿಂದ ಕೆಳಗಿಳಿಯಲು ಒಪ್ಪುತ್ತಿಲ್ಲ.

ಅತ್ತ ಕಡೆ ಸಿರಿಯಾ ಬಂಡುಕೋರರು ‘ಬಷರ್ ಅಲ್ ಅಸ್ಸಾದ್ ಅಧಿಕಾರದಿಂದ ಕೆಳಗಿಳಿಯುವವರೆಗೂ ಯುದ್ದ ನಿಲ್ಲಿಸುವ ಮಾತೇ ಇಲ್ಲ ಎಂದು ವಿಶ್ವಸಂಸ್ತೆಯ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.ಇದೆರೆಲ್ಲದರ ನಡುವೆ ಅಲ್ಲಿನ ರಕ್ತಪಾತದಿಂದಾಗಿ ನರುಳುತ್ತಿರುವವರು ಸಿರಿಯಾದ ಜನ ಮತ್ತು ಸಿರಿಯಾ ದೇಶದ ಮುಂದಿನ ಪ್ರಜೆಗಲಾಗಬೇಕಾಗಿರುವ ಮುಗ್ದ ಕಂದಮ್ಮಗಳು ಮಾತ್ರ.
ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ ಇದು ಸಿರಿಯಾದ ಹುಡುಗನೊಬ್ಬ ಫೇಸ್ಬುಕ್ನಲ್ಲಿ ಇಡೀ ಪ್ರಪಂಚಕ್ಕೆ ಕೂಗಿ ಹೇಳಿರುವ ನುಡಿ.

ಮುಗ್ದ ಕಂದಮ್ಮಗಳ ಮಾರಣ ಹೋಮವನ್ನು ಜಗತ್ತಿನ ದೇಶಗಳು ನೋಡಿಯೂ ನೋಡದಂತೆ ಇವೆ.ಅಲ್ಲಿನ ಮುಗ್ದ ರಕ್ತಸಿಕ್ತ ಮಕ್ಕಳ ಚಿತ್ರಗಳನ್ನು ನೋಡಿದ್ರೆ ಕಲ್ಲು ಹೃದಯ ಇದ್ರೂ ಸಹ ಕಣ್ಣೀರು ಬರಿಸುವಂತಿದೆ.ಅಮೇರಿಕಾ ರಷ್ಯಾ ಸೇರಿದಂತೆ ಕೆಲವು ದೇಶಗಳು, ಏಕೆ ಹೀಗೆ ಮಕ್ಕಳ ಮತ್ತು ಅಲ್ಲಿನ ಜನರ ಜೀವನದಲ್ಲಿ ಆಟವಾಡುತ್ತಿವೆ ಗೊತ್ತಿಲ್ಲ.ಒಂದಂತೂ ಸತ್ಯ ಅಧಿಕಾರದ ಮೋಹದಿಂದ ಜಗತ್ತಿನ ಜನ ಏನೆಲ್ಲಾ ಮಾಡ್ತಾರೆ ಎನ್ನುವುದಕ್ಕೆ ಇದೊಂದು ಕಣ್ಣಿಗೆ ಕಾಣುವ ನಿದರ್ಶನ.










ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…