News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

618

ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್‌ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.

 

ಏಕೆ ಈ ಯುದ್ದ..?

ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು ಸಹಿಸದ ಬಹುಸಂಖ್ಯಾತ ಸುನ್ನಿ ಸಮುದಾಯಗಳು, ಸರ್ಕಾರದ ವಿರುದ್ಧವೇ ಸಮರ ಸಾರಿವೆ..

ಮಕ್ಕಳು ಮತ್ತು ಅಮಾಯಕ ಪ್ರಜೆಗಳ ಸಾವಿನ ಸಂಖ್ಯೆ…

ನೆರೆ ದೇಶಗಳ ಬೆಂಬಲದಿಂದಾಗಿ ಎರಡೂ ಬಣಗಳ ನಡುವೆ ರಕ್ತದ ಒಕಳಿಯೇ ಹರಿಯುತ್ತದೆ.ಅಕ್ಷರಶಃ ಸಿರಿಯಾ ರಕ್ತಪಾತ ದೇಶವಾಗಿದೆ. 22 ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ಬಂಡುಕೋರರ ಸೆಣಸಾಟಕ್ಕೆ ಅಮಾಯಕ ಪ್ರಜೆಗಳು ಮತ್ತು ಮಕ್ಕಳ ಸಾವಿನ ಸಂಖ್ಯೆ 60 ಸಾವಿರ  ದಾಟಿದ್ದು ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಪ್ರಾಣದ ಭಯದಿಂದಾಗಿ ಸಾವಿರಾರು ಮಂದಿ ದೇಶ ಬಿಟ್ಟು ಗಡಿ ಭಾಗದ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.ಸುಮಾರು ಎರಡುವರೆ ಲಕ್ಷಕ್ಕಿಂತ ಹೆಚ್ಚು ಜನ ದೇಶ ಬಿಟ್ಟು ಈಗಾಗಲೇ ಪಕ್ಕದ ದೇಶಗಳಾದ ಟರ್ಕಿ, ಲೆಬೆನಾನ್, ಜೋರ್ಡಾನ್, ಇರಾನ್‌ದೇಶಗಳಿಗೆ ನುಗ್ಗಿದ್ದಾರೆ.

ಸಾತ್ ಕೊಡ್ತಿರೋ ದೇಶಗಳು..

ಅಧ್ಯಕ್ಷ ಬಷರ್ ಅಲ್

  • ರಷ್ಯಾ
  • ಇರಾನ್
  • ಲೆಬನಾನ್

ಸಿರಿಯಾ ಬಂಡುಕೋರರು

  • ಸೌದಿ ಅರೇಬಿಯಾ
  • ಅಮೇರಿಕಾ
  • ಇಸ್ರೇಲ್

ಸಿರಿಯಾದ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಹಾಗೂ ಇವರ ಆಡಳಿತವನ್ನು ವಿರೋಧಿಸುವ ಕ್ರಾಂತಿಕಾರಿ ಸಂಘಟನೆಗಳ ನಡುವೆ ಭೀಕರ ಕದನ ನಡೆಯುತ್ತಿದೆ. ಇವರಿಬ್ಬರ ಹೊಡೆದಾಟಕ್ಕೆ ಅಮಾಯಕ ಪ್ರಜೆಗಳು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಬಲ್ಯ ದೇಶಗಳ ಬೆಂಬಲದಿಂದಾಗಿ ಸಿರಿಯಾ ದೇಶವು ರಕ್ತಸಿಕ್ತಗೊಂಡಿದ್ದು ಬಾಂಬ್, ರಾಕೆಟ್ ದಾಳಿಯಿಂದ ದೊಡ್ಡ ದೊಡ್ಡ ನಗರಗಳು ಭೂಕಂಪ ಪೀಡಿತ ಪ್ರದೇಶಗಳಂತೆ ಕಾಣುತ್ತಿವೆ.

ಇದೆರೆಲ್ಲದರ ಪರಿಣಾಮ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ.ಸಿರಿಯಾದಲ್ಲಿನ ಮಕ್ಕಳ ಕಣ್ಣೀರು ಆಕ್ರಂದನ ಕೆಳುವವರಿಲ್ಲವಂತಾಗಿದೆ. ದಾಳಿಯಲ್ಲಿ ಗಾಯಗೊಂಡ ಪುಟ್ಟ ಪುಟ್ಟ ಕಂದಮ್ಮಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತ ಸುದ್ದಿ ಮಾಡಿದೆ.

ವಿಶ್ವ ಸಂಸ್ಥೆ ಮಾತಿಗೆ ಜಗ್ಗದ ಸಿರಿಯಾ ಸರ್ಕಾರ ಮತ್ತು ಬಂಡುಕೋರರು

ಕದನ ವಿರಾಮ ಘೋಷಿಸಿ, ಅಧಿಕಾರವನ್ನು ಬಿಟ್ಟುಕೊಟ್ಟು, ದೇಶದಲ್ಲಿ ಶಾಂತಿ ನೆಲೆಸಲು ಸಹಕರಿಸಿ ಎಂಬ ವಿಶ್ವ ಸಂಸ್ಥೆಯ ಕೋರಿಕೆಗೆ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಒಪ್ಪಿಗೆ ಸೂಚಿಸಿಲ್ಲ.ತಮ್ಮ ಅಧಿಕಾರಕ್ಕಾಗಿ ಸಾವಿರಾರು ಜನರ ಮಾರಣ ಹೋಮ ನಡೆಯುತ್ತಿದ್ದರೂ ಈ ಅಧ್ಯಕ್ಷ ತಮ್ಮ ಅಧಿಕಾರದಿಂದ ಕೆಳಗಿಳಿಯಲು ಒಪ್ಪುತ್ತಿಲ್ಲ.

ಅತ್ತ ಕಡೆ ಸಿರಿಯಾ ಬಂಡುಕೋರರು ‘ಬಷರ್ ಅಲ್ ಅಸ್ಸಾದ್ ಅಧಿಕಾರದಿಂದ ಕೆಳಗಿಳಿಯುವವರೆಗೂ ಯುದ್ದ ನಿಲ್ಲಿಸುವ ಮಾತೇ ಇಲ್ಲ ಎಂದು ವಿಶ್ವಸಂಸ್ತೆಯ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.ಇದೆರೆಲ್ಲದರ ನಡುವೆ ಅಲ್ಲಿನ ರಕ್ತಪಾತದಿಂದಾಗಿ ನರುಳುತ್ತಿರುವವರು ಸಿರಿಯಾದ ಜನ ಮತ್ತು ಸಿರಿಯಾ ದೇಶದ ಮುಂದಿನ ಪ್ರಜೆಗಲಾಗಬೇಕಾಗಿರುವ ಮುಗ್ದ ಕಂದಮ್ಮಗಳು ಮಾತ್ರ.

ಜಗತ್ತಿಗೆ ಕಾಣುತ್ತಿಲ್ಲವೇ  ಮುಗ್ದ ಕಂದಮ್ಮಗಳ ಮಾರಣಹೋಮ…

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ ಇದು ಸಿರಿಯಾದ ಹುಡುಗನೊಬ್ಬ  ಫೇಸ್‌ಬುಕ್‌ನಲ್ಲಿ ಇಡೀ ಪ್ರಪಂಚಕ್ಕೆ ಕೂಗಿ ಹೇಳಿರುವ ನುಡಿ.

ಮುಗ್ದ ಕಂದಮ್ಮಗಳ ಮಾರಣ ಹೋಮವನ್ನು ಜಗತ್ತಿನ ದೇಶಗಳು ನೋಡಿಯೂ ನೋಡದಂತೆ ಇವೆ.ಅಲ್ಲಿನ ಮುಗ್ದ ರಕ್ತಸಿಕ್ತ ಮಕ್ಕಳ ಚಿತ್ರಗಳನ್ನು ನೋಡಿದ್ರೆ ಕಲ್ಲು ಹೃದಯ ಇದ್ರೂ ಸಹ ಕಣ್ಣೀರು ಬರಿಸುವಂತಿದೆ.ಅಮೇರಿಕಾ ರಷ್ಯಾ ಸೇರಿದಂತೆ ಕೆಲವು ದೇಶಗಳು, ಏಕೆ ಹೀಗೆ ಮಕ್ಕಳ ಮತ್ತು ಅಲ್ಲಿನ ಜನರ ಜೀವನದಲ್ಲಿ ಆಟವಾಡುತ್ತಿವೆ ಗೊತ್ತಿಲ್ಲ.ಒಂದಂತೂ ಸತ್ಯ ಅಧಿಕಾರದ ಮೋಹದಿಂದ ಜಗತ್ತಿನ ಜನ ಏನೆಲ್ಲಾ ಮಾಡ್ತಾರೆ ಎನ್ನುವುದಕ್ಕೆ ಇದೊಂದು ಕಣ್ಣಿಗೆ ಕಾಣುವ ನಿದರ್ಶನ.

ಸಿರಿಯಾದ ಮತ್ತಷ್ಟು ಭಯಾನಕ ಚಿತ್ರಗಳು…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸಿನಿಮಾ ರಸಿಕರೇ ಅಪ್ಪಿ ತಪ್ಪಿ ಇವತ್ತು ಚಿತ್ರಮಂದಿರಗಳ ಕಡೆ ಹೋಗಬೇಡಿ.!ಏಕೆ ಗೊತ್ತಾ.?ಮುಂದೆ ನೋಡಿ…

    ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.

  • ಆರೋಗ್ಯ

    ಕೂದಲು ಉದುರುತ್ತಿದ್ದರೆ. ಅದನ್ನು ತಡೆಗಟ್ಟಲು ಸುಲಭ ಉಪಾಯ ಇಲ್ಲಿದೆ ನೋಡಿ.!

    ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್‌ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…

  • ವಿಸ್ಮಯ ಜಗತ್ತು

    ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

    ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..

  • ಸುದ್ದಿ

    ವಿಟಮಿನ್ ‘ಡಿ’ ಮಹಿಳೆಯರಿಗೆ ಯಾಕೆ ಮುಖ್ಯ ಗೊತ್ತ…?

    ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….

  • ಉಪಯುಕ್ತ ಮಾಹಿತಿ

    ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

    ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…