News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕರ್ನಾಟಕದ ಸಾಧಕರು

ನಾನು ಹಳ್ಳಿಯವಳೇ.ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ…ಸುಧಾಮೂರ್ತಿ ಹೀಗೆ ಹೇಳಿದ್ದು ಯಾರಿಗೆ & ಏಕೆ ಗೊತ್ತಾ.?ಈ ಲೇಖನ ಓದಿ ಶೇರ್ ಮಾಡಿ…

6364

ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.

ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್‌ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ…

‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ಸುಧಾಮೂರ್ತಿ ಒಮ್ಮೆ ಲಂಡನ್‌ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್‌ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್‌ನ ಹೀತ್ರೂ ಇಂಟರ್‌ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಸುಧಾಮೂರ್ತಿಯವರ ಸರಳ ಉಡುಗೆ…

ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.

ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.

ಸುಧಾಮೂರ್ತಿಗೆ ಆ ಮಹಿಳೆ ಹಿಯಾಳಿಸಿದ್ದು ಹೇಗೆ..?

ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.

ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್‌ ನಿರ್ವಹಿಸಿದ್ದು ಏರ್‌ಪೋರ್ಟ್‌ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.

ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!

ಸುಧಾಮೂರ್ತಿ ಕೊಟ್ಟ ಕೌಂಟರ್‌ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!

ಇಂತಹ ಸರಳತೆಯ ಸುಧಾಮೂರ್ತಿಯವರ ಬಗ್ಗೆ ಒಂದು ಕಿರು ಪರಿಚಯ…

ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.

ಸುಧಾಮುರ್ತಿಯವರು ಪಡೆದಿರುವ ಪ್ರಶಸ್ತಿಗಳು…

  • ಬಿ.ಇ.(ಇಲೆಕ್ಟ್ರಿಕಲ್ ಇಂಜನಿಯರಿಂಗ್ ಪರೀಕ್ಷೆ) ಯಲ್ಲಿ ಪ್ರಥಮ ಸ್ಥಾನ ಲಭಿಸಿದಾಗ ಕರ್ನಾಟಕದ ಮುಖ್ಯ ಮಂತ್ರಿಗಳಿಂದ ಬೆಳ್ಳಿಯ ಪದಕ ಲಭಿಸಿತ್ತು.
  • ಎಮ್.ಟೆಕ್. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ದೊರೆತಾಗ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇಂಜನಿಯರ್ಸ್ ದಿಂದ ಬಂಗಾರದ ಪದಕ ದೊರೆತಿತ್ತು.
  • 1995ರಲ್ಲಿ ಬೆಂಗಳೂರಿನ ರೋಟರಿ ಕ್ಲಬ್ ನಿಂದ ಬೆಸ್ಟ್ ಟೀಚರ್ ಪುರಸ್ಕಾರ ದೊರೆತಿದೆ.
  • ಪಬ್ಲಿಕ್ ರಿಲೇಶನ್ಸ್ ಸೊಸೈಟಿ ಆಫ್ ಇಂಡಿಯಾದವರಿಂದ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ.
  • ಸಮಾಜಸೇವೆಗಾಗಿ ಹುಬ್ಬಳ್ಳಿ ದಕ್ಷಿಣ ಭಾಗದ ರೋಟರಿ ಕ್ಲಬ್ ನಿಂದ ಪುರಸ್ಕಾರ ದೊರೆತಿದೆ.
  • 2000 ನೆಯ ಸಾಲಿನ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ಲಭಿಸಿದೆ.
  • ಸಮಾಜಸೇವೆಗಾಗಿ 2000 ಸಾಲಿನ ಓಜಸ್ವಿನಿ ಪ್ರಶಸ್ತಿ ದೊರೆತಿದೆ.
  • ಮಿಲೆನಿಯಮ್ ಮಹಿಳಾ ಶಿರೋಮಣಿಪ್ರಶಸ್ತಿ ಲಭಿಸಿದೆ.
  • ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಎಂಜನಿಯರಿಂಗ್‌ ಪ್ರತಿಷ್ಠಾನ ಪ್ರಶಸ್ತಿ (2001),
  • “ಶಾಲೆ ಮಕ್ಕಳಿಗಾಗಿ ಕಂಪ್ಯೂಟರ್” ಈ ಕೃತಿಗೆ ಅತ್ತಿಮಬ್ಬೆ ಪ್ರಶಸ್ತಿ ದೊರೆತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…

  • ಸುದ್ದಿ

    ‘ಪಾರ್ಲೆ’ ಉದ್ಯೋಗಿಗಳ ಕೆಲಸಕ್ಕೆ ಕುತ್ತು : 10 ಸಾವಿರ ಕಾರ್ಮಿಕರಿಗೆ ಸಂಕಷ್ಟ……!

     ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…

  • ಸುದ್ದಿ

    ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು,ಡಿಲೀಟ್ ಮತ್ತು ತಿದ್ದುಪಡಿ ಮಾಡಲು ಅವಕಾಶ,ಇಲ್ಲಿದೆ ನೋಡಿ ಎಲ್ಲಾ ಮಾಹಿತಿ,.!

    18 ವರ್ಷಆಗಿರುವಯುವಕ-ಯುವತಿಯರೇ…  ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…

  • inspirational, ದೇಶ-ವಿದೇಶ, ಸುದ್ದಿ

    ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

    ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…