ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.
ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ಸುಧಾಮೂರ್ತಿ ಒಮ್ಮೆ ಲಂಡನ್ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್ನ ಹೀತ್ರೂ ಇಂಟರ್ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.
ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.

ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.
ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್ ನಿರ್ವಹಿಸಿದ್ದು ಏರ್ಪೋರ್ಟ್ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.
ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!
ಸುಧಾಮೂರ್ತಿ ಕೊಟ್ಟ ಕೌಂಟರ್ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!

ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…