ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.
ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ಸುಧಾಮೂರ್ತಿ ಒಮ್ಮೆ ಲಂಡನ್ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್ನ ಹೀತ್ರೂ ಇಂಟರ್ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.
ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.

ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.
ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್ ನಿರ್ವಹಿಸಿದ್ದು ಏರ್ಪೋರ್ಟ್ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.
ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!
ಸುಧಾಮೂರ್ತಿ ಕೊಟ್ಟ ಕೌಂಟರ್ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!

ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…
RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್ಗಳು, NBFC ಗಳು, ಸಹಕಾರಿ ಬ್ಯಾಂಕ್ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.
ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.