News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
karnataka

ನಾಳೆ ಕರ್ನಾಟಕ ಬಂದ್!!! ಆಗುತ್ತಾ ಇಲ್ವ, ಮುಂದೆ ಓದಿ…

580

ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ ಆಗ್ರಹಿಸಿ  ಅನೇಕ ಬೇಡಿಕೆಗಳನ್ನ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಸೋಮವಾರ ನಡೆಯುವ ಬಂದ್ ಗೆ ಬೆಂಬಲ ನೀಡುವಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

ಆದರೆ, ಬಂದ್ ಗೆ ಕೆಲ ಸಂಘಟನೆಗಳ ವಿರೋಧವಿದೆ. ಹೀಗಾಗಿ ನಾಳೆ ಬಂದ್ ಇದೆಯೋ ಇಲ್ಲವೋ ಎಂಬ ಗೊಂದಲ ಹುಟ್ಟಿಕೊಂಡಿದೆ. ಹಾಗಾಗಿ ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್​​​ ಗೊಂದಲ್ಲಿದೆ. ಯಾಕೆಂದರೆ ಬಂದ್​​’ಗೆ ಬೆಂಬಲ ನೀಡಲು ಹಲವು ಸಂಘಟನೆಗಳು ನಿರಾಕರಿಸಿವೆ.

ಕನ್ನಡ ಒಕ್ಕೂಟದ ಪರವಾಗಿ ವಾಟಾಳ್ ನಾಗರಾಜ್, ರಾಜ್ಯ ಬಂದ್’ಗೆ ಕರೆ ನೀಡಿದ್ದಾರೆ. ಆದರೆ, ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ಕೆಎಸ್ ಆರ್ ಟಿಸಿ, ಬಿಎಂಟಿಸಿ, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳೇ ಬೆಂಬಲ ನೀಡಲು ನಿರಾಕರಿಸಿವೆ. ಆಟೋ ಚಾಲಕರ ಸಂಘದಿಂದಲೂ ಬೆಂಬಲ ಇಲ್ಲ ಎಂದು ಹೇಳಲಾಗಿದೆ. ಹಾಗಾಗಿ ಜೂನ್ 12ರ ಬಂದ್ ಗೆ ವಾಟಾಳ್ ನಾಗರಾಜ್ ಅವರು ಎಲ್ಲಾ ಸಂಘಟನೆಗಳ ಮನವೊಲಿಸಿ ಬೆಂಬಲ ಪಡೆದುಕೊಳ್ಳುತ್ತಾರೋ ಅಥವಾ ಬಂದ್ ಗೆ ನೀರಸ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಜೂನ್ 12ರಂದು ರಾಜ್ಯ ಬಂದ್ ಇದೆಯೋ ಇಲ್ಲವೋ ಎಂಬ ಬಗ್ಗೆ ಇವತ್ತು ಅಂತಿಮ ನಿರ್ಧಾರ ಹೊರಬೀಳಬಹುದು. ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ, ಕಳಸಾ ಬಂಡೂರಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡ ಪರ ಒಕ್ಕೂಟ ಬಂದ್‌ಗೆ ಕರೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಆದರೆ, ಚಾಲಕರು ಮತ್ತು ನಿರ್ವಾಹಕರು  ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದು, ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗುವುದಿಲ್ಲ ಎಂದೂ ಸಂಘ ಎಂದು ಸ್ಪಷ್ಟಪಡಿಸಿದೆ.

ಕರ್ನಾಟಕ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ, ಆಟೋರಿಕ್ಷಾ ಮಾಲೀಕರು ಮತ್ತು ಚಾಲಕರ ಸಂಘ, ಬೆಂಗಳೂರು ನಗರ ಹೋಟೆಲ್‌ ಮಾಲೀಕರ ಸಂಘ, ಎಪಿಎಂಸಿ ವರ್ತಕರ ಸಂಘ, ರಾಜ್ಯ ತೈಲ ವರ್ತಕರ ಸಂಘಗಳು ತಮ್ಮ ಬೆಂಬಲ ಇಲ್ಲ ಎಂದು ತಿಳಿಸಿವೆ.  ಬಸ್‌ಗಳು ಮತ್ತು ಆಟೋರಿಕ್ಷಾಗಳ ಎಂದಿನಂತೆ ಸಂಚರಿಸುತ್ತವೆ. ಪೆಟ್ರೋಲ್ ಬಂಕ್‌ಗಳು, ಶಾಲಾ ಕಾಲೇಜುಗಳು, ಹೋಟೆಲ್‌ಗಳು, ಅಂಗಡಿಗಳು ಸಹ ಕಾರ್ಯನಿರ್ವಹಿಸುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಂಗಳಸೂತ್ರ ನುಂಗಿದ ಹೋರಿ… ಮಂಗಳ ಸೂತ್ರದ ಬೆಲೆಯೆಷ್ಟು ಗೊತ್ತಾ?

    ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…

  • ವಿಚಿತ್ರ ಆದರೂ ಸತ್ಯ

    ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಶಾಕ್ ಆಗ್ತೀರಾ!ಈ ಲೇಖನಿ ಓದಿ….

    ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.

  • ಸುದ್ದಿ

    SSLC ಫೇಲ್ ಆದವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ…

    ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

    ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.