ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ ಆಗ್ರಹಿಸಿ ಅನೇಕ ಬೇಡಿಕೆಗಳನ್ನ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಸೋಮವಾರ ನಡೆಯುವ ಬಂದ್ ಗೆ ಬೆಂಬಲ ನೀಡುವಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.
ಆದರೆ, ಬಂದ್ ಗೆ ಕೆಲ ಸಂಘಟನೆಗಳ ವಿರೋಧವಿದೆ. ಹೀಗಾಗಿ ನಾಳೆ ಬಂದ್ ಇದೆಯೋ ಇಲ್ಲವೋ ಎಂಬ ಗೊಂದಲ ಹುಟ್ಟಿಕೊಂಡಿದೆ. ಹಾಗಾಗಿ ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್ ಗೊಂದಲ್ಲಿದೆ. ಯಾಕೆಂದರೆ ಬಂದ್’ಗೆ ಬೆಂಬಲ ನೀಡಲು ಹಲವು ಸಂಘಟನೆಗಳು ನಿರಾಕರಿಸಿವೆ.
ಕನ್ನಡ ಒಕ್ಕೂಟದ ಪರವಾಗಿ ವಾಟಾಳ್ ನಾಗರಾಜ್, ರಾಜ್ಯ ಬಂದ್’ಗೆ ಕರೆ ನೀಡಿದ್ದಾರೆ. ಆದರೆ, ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ಕೆಎಸ್ ಆರ್ ಟಿಸಿ, ಬಿಎಂಟಿಸಿ, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳೇ ಬೆಂಬಲ ನೀಡಲು ನಿರಾಕರಿಸಿವೆ. ಆಟೋ ಚಾಲಕರ ಸಂಘದಿಂದಲೂ ಬೆಂಬಲ ಇಲ್ಲ ಎಂದು ಹೇಳಲಾಗಿದೆ. ಹಾಗಾಗಿ ಜೂನ್ 12ರ ಬಂದ್ ಗೆ ವಾಟಾಳ್ ನಾಗರಾಜ್ ಅವರು ಎಲ್ಲಾ ಸಂಘಟನೆಗಳ ಮನವೊಲಿಸಿ ಬೆಂಬಲ ಪಡೆದುಕೊಳ್ಳುತ್ತಾರೋ ಅಥವಾ ಬಂದ್ ಗೆ ನೀರಸ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಜೂನ್ 12ರಂದು ರಾಜ್ಯ ಬಂದ್ ಇದೆಯೋ ಇಲ್ಲವೋ ಎಂಬ ಬಗ್ಗೆ ಇವತ್ತು ಅಂತಿಮ ನಿರ್ಧಾರ ಹೊರಬೀಳಬಹುದು. ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ, ಕಳಸಾ ಬಂಡೂರಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡ ಪರ ಒಕ್ಕೂಟ ಬಂದ್ಗೆ ಕರೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಬಂದ್ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಆದರೆ, ಚಾಲಕರು ಮತ್ತು ನಿರ್ವಾಹಕರು ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದು, ಬಸ್ಗಳ ಸಂಚಾರದಲ್ಲಿ ವ್ಯತ್ಯಯವಾಗುವುದಿಲ್ಲ ಎಂದೂ ಸಂಘ ಎಂದು ಸ್ಪಷ್ಟಪಡಿಸಿದೆ.
ಕರ್ನಾಟಕ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ, ಆಟೋರಿಕ್ಷಾ ಮಾಲೀಕರು ಮತ್ತು ಚಾಲಕರ ಸಂಘ, ಬೆಂಗಳೂರು ನಗರ ಹೋಟೆಲ್ ಮಾಲೀಕರ ಸಂಘ, ಎಪಿಎಂಸಿ ವರ್ತಕರ ಸಂಘ, ರಾಜ್ಯ ತೈಲ ವರ್ತಕರ ಸಂಘಗಳು ತಮ್ಮ ಬೆಂಬಲ ಇಲ್ಲ ಎಂದು ತಿಳಿಸಿವೆ. ಬಸ್ಗಳು ಮತ್ತು ಆಟೋರಿಕ್ಷಾಗಳ ಎಂದಿನಂತೆ ಸಂಚರಿಸುತ್ತವೆ. ಪೆಟ್ರೋಲ್ ಬಂಕ್ಗಳು, ಶಾಲಾ ಕಾಲೇಜುಗಳು, ಹೋಟೆಲ್ಗಳು, ಅಂಗಡಿಗಳು ಸಹ ಕಾರ್ಯನಿರ್ವಹಿಸುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .