ಆರೋಗ್ಯ

ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

217

ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.

ವಿಶೇಷವಾಗಿ ತಣ್ಣೀರಿನಲ್ಲಿ ಹಲವು ರೋಗರುಜಿನಗಳನ್ನು ಗುಣಪಡಿಸುವ ಸಾಮರ್ಥ್ಯವಿದೆ.

ದೇಹದಿಂದ ತ್ಯಾಜ್ಯ ವಸ್ತು ಹಾಗೂ ಕಲ್ಮಶಗಳನ್ನು ಹೊರಹಾಕಲೂ ನೀರು ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರಲೇಬೇಕು. ಕೆಲವಾರು ಖಾಯಿಲೆಗಳ ನಿವಾರಣೆಗೆ ನೀರು ಔಷಧಿಯಂತೆ ಕೆಲಸ ಮಾಡುತ್ತದೆ.

ನಮ್ಮ ಭೂಮಿಯಲ್ಲಿ ಶೇ. 71 ರಷ್ಟು ನೀರು ಇರುವಂತೆ, ನಮ್ಮ ದೇಹವೂ ಶೇ. 71 ರಷ್ಟು ನೀರಿನಿಂದ ಕೂಡಿದೆ ಎಂದು ಹೇಳಲಾಗಿದೆ.

ನಮ್ಮ ದೇಹದ ಆರೋಗ್ಯ ಉತ್ತಮ ರೀತಿ ಇರಬೇಕಾದರೆ, ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು. ನೀರಿನಿಂದ ಆಗುವ ಪ್ರಯೋಜನಗಳನ್ನು ನೋಡಿ :-

  • ನಮ್ಮ ತ್ವಚೆ ಉತ್ತಮವಾಗಿರಲು,
  • ಚರ್ಮದಡಿ ಸಂಗ್ರಹವಾಗಿರುವ ವಿಷಕಾರಿ ವಸ್ತುಗಳನ್ನು ಮತ್ತು ಸೋಂಕುಕಾರಕ ಕಣಗಳನ್ನು ನಿವಾರಿಸಲೂ ನೀರುಬೇಕು.
  • ವಿಶೇಷವಾಗಿ ಜೀವರಾಸಾಯನಿಕ ಪ್ರಕ್ರಿಯೆ ಉತ್ತಮವಾಗಿ ನಡೆಯಲು,
  • ತಿಂದ ಆಹಾರವನ್ನು ಪಚನಗೊಳಿಸಲು,
  • ಶಕ್ತಿವೃದ್ಧಿಸಲು,
  • ಏಕಾಗ್ರತೆ ಪ‌ಡೆಯಲು ನೀರು ಅತ್ಯಗತ್ಯ.

ಕುಡಿಯುವ ನೀರು ಸ್ವಚ್ಛವಾಗಿರುವುದನ್ನು ಖಚಿತಪ‌ಡಿಸಿಕೊಂಡು ಕುಡಿಯುವುದು ಒಳ್ಳೆಯದು.

ಸ್ವಚ್ಛ ನೀರನ್ನು ಪಡೆಯುವ ಸುಲಭ ವಿಧಾನವೆಂದರೆ ಕುದಿಸಿ, ತಣ್ಣಗೆ ಕುಡಿಯುವುದು ನಮ್ಮ ಆರೋಗ್ಯಕ್ಕೆ ಉತ್ತಮವೆಂದರೆ, ಸಾಮಾನ್ಯ ತಾಪಮಾನದಲ್ಲಿರುವ ತಣ್ಣೀರು.

ತಣ್ಣೀರು ಎಂದ ಮಾತ್ರಕ್ಕೆ ಫ್ರಿಜ್‌ನಲ್ಲಿರುವ ನೀರು ಎಂದು ತಿಳಿಯಬಾರದು.
ತಣ್ಣೀರನ್ನು ಕುಡಿಯುವುದು ಹಾಗೂ ಬೆಳಿಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಗರಿಷ್ಠ ಪ್ರಯೋಜನ ಪಡೆಯಬಹುದಾಗಿದೆ. ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು. ಇದರಿಂದ ರಕ್ತಸಂಚಲನೆ ಉತ್ತಮಗೊಂಡು, ಆ ಮೂಲಕ ಹಲವಾರು ಖಾಯಿಲೆಗಳ ಶಮನಕ್ಕೆ ದಾರಿ ಮಾಡಿಕೊಡುತ್ತದೆ.

ನಾವು ತಿಂದ ಆಹಾರ ಜೀರ್ಣಗೊಂಡ ಬಳಿಕ ಕೆಲವು ಕಾರಣಗಳಿಂದ ಆಮ್ಲ ಬಳಕೆಯಾಗದೆ, ಉಳಿಯುವುದರಿಂದ ಹೊಟ್ಟೆಯಲ್ಲಿ ಉರಿ ಪ್ರಾರಂಭವಾಗುತ್ತದೆ. ಹೊಟ್ಟೆಯುರಿಯಿಂದ ಎದೆಭಾಗದಲ್ಲಿ ಉರಿ, ಹುಳಿ ತೆಗು ಮುಂತಾದ ತೊಂದರೆಗಳು ಎದುರಾಗುತ್ತವೆ.

ಇವುಗಳಿಂದ ಮುಕ್ತಿ ಪಡೆಯಬೇಕಾದರೆ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣವೇ ಒಂದು ಲೋಟ ತಣ್ಣೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.

ದೇಹದ ಚರ್ಮ ಒಣಗಲು ಒಣ ಹವೆ ಪ್ರಮುಖ ಕಾರಣ. ಬಿಸಿ ನೀರಿನಿಂದ ಸ್ನಾನ, ಬಿಸಿ ನೀರನ್ನು ಕುಡಿಯುವುದರಿಂದಲ್ಲೂ ಚರ್ಮ ಒಣಗದಂತೆ ಒಣ ಚರ್ಮಕ್ಕೆ ತಣ್ಣೀರು ಅತ್ಯುತ್ತಮ ಪರಿಹಾರ.

ಚರ್ಮದಲ್ಲಿ ತುರಿಕೆ, ಪರೆ ಏಳುವುದು ಮುಂತಾದ ತೊಂದರೆಗಳಿದ್ದರೆ ತಣ್ಣೀರಿನಿಂದ ತೊಳೆದು ಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು.

ಮತ್ತೊಂದು ವಿಶೇಷವೆಂದರೆ, ಪುರುಷರ ಫಲವತ್ತತೆಯಲ್ಲಿ ತಣ್ಣೀರು ಪ್ರಮುಖ ಪಾತ್ರ ವಹಿಸುತ್ತದೆ. ಪುರುಷರಲ್ಲಿ ವೀರ್ಯಾಣುಗಳು, ದೇಹದ ತಾಪಮಾನಕ್ಕಿಂತಲೂ ಕೊಂಚ ಕಡಿಮೆ ಇರಬೇಕು. ಇದೇ ಕಾರಣಕ್ಕೆ ಎಲ್ಲಾ ಸಸ್ತನಿಗಳ ವೃಷ್ಣಗಳು ದೇಹದಿಂದ ಹೊರಗಿರುತ್ತವೆ.

ನಾವು ಧರಿಸುವ ಬಟ್ಟೆಗಳು, ದೀರ್ಘಕಾಲ ಕುಳಿತುಕೊಳ್ಳುವುದು, ವಾಹನ ಚಾಲನೆ ಮೊದಲಾದ ಕಾರಣಗಳಿಂದ ಸೂಕ್ತ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.

ಹಾಗಾಗಿ ಸಾಕಷ್ಟು ತಣ್ಣೀರು ಕುಡಿಯುವ ಮೂಲಕ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಫಲವತ್ತತೆ ಉಳಿಸಿಕೊಳ್ಳಲು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.

ಕಣ್ಣುಗಳ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಆಗಿಂದಾಗ್ಗೆ ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ಕಣ್ಣುಗಳಿಗೆ ಆರಾಮ ಎನಿಸುತ್ತದೆ. ಕಣ್ಣುಗಳಿಗೆ ಅಂಟಿಕೊಂಡಿದ್ದ ಧೂಳು ಮತ್ತಿತರ ಕಣಗಳು ದೂರವಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

    ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು….

  • ಜೀವನಶೈಲಿ

    ಭಾರತೀಯ ಮಹಿಳೆಯರು ಆಭರಣಗಳನ್ನು ಧರಿಸುವುದರ ಹಿಂದಿರುವ ವೈಜ್ಞಾನಿಕ ಕಾರಣಗಳು ಗೊತ್ತಾ…? ಈ ಲೇಖನ ಓದಿ…

    ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…

  • ದೇಶ-ವಿದೇಶ

    ವಿಧವೆಯನ್ನು ಮದುವೆಯಾದ್ರೆ ಸಿಗಲಿರುವ ಹಣ ಎಷ್ಟು ಗೊತ್ತಾ..?ಶಾಕ್ ಆಗ್ಬೇಡಿ!ಈ ಲೇಖನ ಓದಿ…

    ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…

  • ಆಧ್ಯಾತ್ಮ

    ದೀಪಗಳ ಹಬ್ಬದ ಹಿನ್ನಲೆ ಏನು ಗೊತ್ತಾ?ಪಟಾಕಿ ಹೊಡೆಯುವವರಿಗೆ ಇಲ್ಲಿವೆ, ಕೆಲವು ಸಲಹೆಗಳು…ತಿಳಿಯಲು ಇದನ್ನು ಓದಿ…

    ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.