ಆರೋಗ್ಯ

ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

2996

ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ:-

  • ಕೂದಲಿನ ಬುಡಕ್ಕೆ ನಿಂಬೆರಸವನ್ನು ತಿಕ್ಕಿ ಹತ್ತು ನಿಮಿಷ ಬಿಟ್ಟು ಸ್ನಾನ ಮಾಡಿದರೆ ತಲೆಯ ಹೊಟ್ಟು ಕಡಿಮೆಯಾಗುತ್ತದೆ.
  • ಜ್ವರದಿಂದ ಬಳಲಿಕೆ ಉಂಟಾದಾಗ ನಿಂಬೆರಸವನ್ನು ಸೇವಿಸಿದರೆ ಬಳಲಿಕೆ ಕಡಿಮೆಯಾಗುತ್ತದೆ.
  • ಸ್ವಲ್ಪ ಕಡಲೆಹಿಟ್ಟಿಗೆ  ಜೇನುತ್ತುಪ್ಪ ಮತ್ತು ನಿಂಬೆರಸ ಸೇರಿಸಿ ಕಲೆಸಿ ಮುಖಕ್ಕೆ ಲೇಪಿಸಿ 1 ಘಂಟೆಯ ನಂತರ ಬೆಚ್ಚಗಿನ ನೀರಿನಲ್ಲಿ ತೊಳೆದುಕೊಳ್ಳಬೇಕು ಇದರ ಉಪಯೋಗದಿಂದ ಮುಖದ ಜಿಡ್ಡು ,ಕೊಳೆ ಹೋಗಿ ಮುಖದ ಕಾಂತಿ ಹೆಚ್ಚುತ್ತದೆ.

ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ :-

*ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.

*ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.

*ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ    ಬೇರಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಬೇಕು.

* ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.

*ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ತಿಕ್ಕಿದರೆ ಕಪ್ಪು ಹೊಗುತ್ತದೆ.

*ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ.

*ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ.

*ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

*ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ.

*ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.

*ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ  ಕುದಿಸಿ ನೀರಿನಂಶವೆಲ್ಲ ಇಂಗಿದ ನಂತರ ಪ್ರತಿದಿನ ಉಪಯೋಗಿಸಬೇಕು.

*ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು.

*ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ.

*ನಿಂಬೆಹಣ್ಣಿನ ಸಿಪ್ಪೆಯನ್ನು ಹಣೆಗೆ ತಿಕ್ಕುತಿದ್ದರೆ ತಲೆನೋವು ಕಡಿಮೆಯಾಗುತ್ತದೆ.

*ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.

*ದೂರ ಪ್ರಯಾಣದ ಸಂದರ್ಭದಲ್ಲಿ ವಾಕರಿಕೆ ಮತ್ತು ತಲೆಸುತ್ತು ಸಮಸ್ಯೆಗೆ ನಿಂಬೆಹಣ್ಣನ್ನು ಮೂಸುತ್ತಿರಬೇಕು.

*ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.

*ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ.

*ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮತ್ತೆ ಪ್ಲೇ ಸ್ಟೋರ್‌ನಲ್ಲಿ ನಕಲಿ ಆ್ಯಪ್ಸ್ ಕಾಟ,ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ,ತಿಳಿದುಕೊಳ್ಳಿ…!

    ಗೂಗಲ್‌ನ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್‌ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ.  ಕಂಪ್ಯೂಟರ್ ಮತ್ತು ಸ್ಮಾರ್ಟ್‌ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್‌ ಅಪ್‌ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…

  • ಉಪಯುಕ್ತ ಮಾಹಿತಿ

    ಅಕ್ಕಿ ತೊಳೆದ ನೀರನ್ನು ಚೆಲ್ಲುವ ಮೊದಲು ಇದನ್ನು ತಿಳಿದುಕೊಳ್ಳಿ.

    ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ.  ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…

  • ಆರೋಗ್ಯ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಸುದ್ದಿ

    ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ,…ಏನೆಂದು ತಿಳಿಯಿರಿ?

    ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…

  • ಸುದ್ದಿ, ಸ್ಪೂರ್ತಿ

    ಒಂದು ದಿನದ ಮಟ್ಟಿಗೆ DCPಯಾಗಿ, ತನ್ನ ತಂದೆಗೆ ಆದೇಶ ನೀಡಿದ ವಿಧ್ಯಾರ್ಥಿನಿ..!ಈಕೆ ಡಿಸಿಪಿ ಆಗಿದ್ದು ಹೇಗೆ ಗೊತ್ತಾ..?

    ಐಎಸ್​​ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್​ ಕಮಿಷನರ್​​ ಆಗುವ ಅವಕಾಶ ನೀಡಲಾಗಿತ್ತು.  ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್​ ಫಾರ್​ ಎಜುಕೇಷನ್​ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್​​ 2 ಪರೀಕ್ಷೆಯಲ್ಲಿ ಶೇ. 99.25…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…