ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ ಈ ಟ್ವೀಟ್ ಭಾರೀ ಅಚ್ಚರಿ ಮೂಡಿಸಿದೆ.

ಅಷ್ಟಕ್ಕೂ ಕಿಚ್ಚ ಮಾಡಿದ ಟ್ವೀಟ್ನಲ್ಲಿ ಏನಿದೆ ಗೊತ್ತಾ..?
ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಹೇಳುತ್ತ “ನಿಜವಾದ ಗಂಡಸು ಎನಿಸಿಕೊಳ್ಳಲು ಮದ್ಯಪಾನ ಮಾಡಬೇಕಾಗಿಲ್ಲ ಮತ್ತು ಕತ್ತಲು ಆಗಲಿ ಎಂದು ಕಾಯಬೇಕಾಗಿಲ್ಲ” ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಫೊಟೋ ಒಂದನ್ನೂ ಶೇರ್ ಮಾಡಿದ್ದಾರೆ. ಅದರಲ್ಲಿ “ಕೇವಲ ಏನನ್ನೋ ಸಾಬೀತು ಪಡಿಸಲು ನಾನು ಫೈಟ್ ಮಾಡುವುದಿಲ್ಲ. ನನ್ನ ಎದುರಾಳಿ ಫೈಟ್ ಮಾಡಲು ಯೋಗ್ಯನಾಗಿದ್ದಾಗ ಮಾತ್ರ ನಾನು ಫೈಟ್ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಸುದೀಪ್ ತುಂಬಾ ಪ್ರಬುದ್ಧ ನಟ.. ಸಾಧಾರಣವಾಗಿ ಸುದೀಪ್ ಇಷ್ಟು ಖಡಕ್ ಆದ ಸಾಲುಗಳನ್ನು ಟ್ವೀಟ್ ಮಾಡುವುದು ತುಂಬ ಕಡಿಮೆ. ಕಡಿಮೆ ಎನ್ನುವುದಕ್ಕಿಂತನು ಮಾಡುವುದೆ ಇಲ್ಲ. ಆದ್ರೆ ಸುದೀಪ್ ದಿಢೀರನೆ ಹೀಗೆ ಪೋಸ್ಟ್ ಮಾಡಿರುವುದು ಯಾರಿಗೆ ಎನ್ನುವ ಅನುಮಾನ ಮೂಡುತ್ತಿದೆ. ಹೀಗಾಗಿ ಕಿಚ್ಚನ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ.

ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಅಸಲಿಗೆ ಆಗಸ್ಟ್ 8 ರಂದು ಈ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಈಗ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದ್ದು ಸೆಪ್ಟೆಂಬರ್ 12 ರಂದು ಬಿಡುಗಡೆಯಾಗಲಿದೆ. ಪೈಲ್ವಾನ್ ರಿಲೀಸ್ ನ ತಯಾರಿಯಲ್ಲಿರುವ ಸುದೀಪ್ ದಿಢೀರನೆ ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಪೋಸ್ಟ್ ಮಾಡಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.