ಹಣ ಕಾಸು

ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

924

ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ. ಎಟಿಎಂ ಯಂತ್ರಗಳ ಮೂಲಕ ಕೈಗೊಳ್ಳಬಹುದಾದ 15 ಪ್ರಮುಖ ವ್ಯವಹಾರಗಳ ಪಟ್ಟಿ ಇಲ್ಲಿ ಮಾಡಲಾಗಿದೆ.

1. ನಗದು ವಿತ್ ಡ್ರಾ (ಕ್ಯಾಶ್ ವಿಥ್ ಡ್ರಾ)

ಎಟಿಎಂ ಕೇಂದ್ರಗಳಲ್ಲಿ ಹಣ ವಿತ್ ಡ್ರಾ ಮಾಡಿಕೊಳ್ಳುವ ಸೇವೆ ಜನಜನಿತವಾಗಿದೆ. ಮುಖ್ಯವಾಗಿ ಪ್ರತಿಯೊಬ್ಬರೂ ನಗದು ವಿತ್ ಡ್ರಾ ವ್ಯವಹಾರ ಮಾಡಿರುತ್ತಾರೆ. ನೋಟು ನಿಷೇಧದ ನಂತರ ಒಂದು ದಿನಕ್ಕೆ ಅಥವಾ ಒಂದು ವಾರಕ್ಕೆ 50 ಸಾವಿರ ನಗದು ವಿತ್ ಡ್ರಾ ಮಾಡಬಹುದಾಗಿದೆ.

2. ಬ್ಯಾಲೆನ್ಸ್ ಪರಿಶೀಲನೆ (ಬ್ಯಾಲೆನ್ಸ್ ಚೆಕ್)

ಗ್ರಾಹಕರು ತಮ್ಮ ಖಾತೆಯಲ್ಲಿನ ಮೊತ್ತವನ್ನು, ಪ್ರಸ್ತುತ ಲಭ್ಯವಿರುವ ಒಟ್ಟು ಮೊತ್ತವನ್ನು ಪರಿಶೀಲನೆ ಮಾಡಬಹುದು. ಎಟಿಎಂ ಕಾರ್ಡ್ ಸ್ವೈಪ್ ಮಾಡಿದ ನಂತರ ಪರದೆ ಮೇಲೆ ಬ್ಯಾಲೆನ್ಸ್ ಚೆಕ್ ಆಯ್ಕೆ ಬರುತ್ತದೆ.

3. ಫಂಡ್ ವರ್ಗಾವಣೆ (ಫಂಡ್ ಟ್ರಾನ್ಸ್ಫರ್)

ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಫಂಡ್ಸ್ ವರ್ಗಾವಣೆ ಮಾಡಬಹುದು. ಫಂಡ್ ವರ್ಗಾವಣೆ ಮಾಡುವಾಗ ಕಳಿಸಬೇಕಾಗಿರುವ ವ್ಯಕ್ತಿಯ ಕಾರ್ಡ್ ಮೇಲಿರುವ 16 ಡಿಜಿಟ್ ಸಂಖ್ಯೆಗಳು ಗೊತ್ತಿರಬೇಕಾಗುತ್ತದೆ.

4. ಮಿನಿ ಸ್ಟೇಟ್ಮೆಂಟ್ ತೆಗೆಯಬಹುದು.

ನಿಮ್ಮ ಖಾತೆ ಬಗೆಗಿನ ವ್ಯವಹಾರಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈ ಮಿನಿ ಸ್ಟೇಟ್ಮೆಂಟ್ ಪಡೆದುಕೊಳ್ಳಬಹುದು. ಈ ಮಿನಿ ಹೇಳಿಕೆಯಲ್ಲಿ ಹಿಂದಿನ ಹತ್ತು ವ್ಯವಹಾರಗಳ ಮಾಹಿತಿ ನೀವು ನೋಡಬಹುದು.

5. ನಿಮ್ಮ ಸಿಕ್ರೆಟ್ ಪಿನ್ ಬದಲಾವಣೆ

ಎಟಿಎಂ ಕೇಂದ್ರಗಳಲ್ಲಿ ಗ್ರಾಹಕರು ತಮ್ಮ ಡೆಬಿಟ್ ಕಾರ್ಡಿನ ನಾಲ್ಕು ಅಂಕೆಗಳ ಪಿನ್ ನಂಬರ್ ಬದಲಾವಣೆ ಮಾಡಬಹುದು. ಇದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ನಿಯಮಿತವಾಗಿ ಪಿನ್ ನಂಬರ್ ಬದಲಾವಣೆ ಮಾಡುತ್ತಿರಬಹುದು.

6. ಫಿಕ್ಸೆಡ್ ಡಿಪೋಸಿಟ್

ಬ್ಯಾಂಕ್ ಗ್ರಾಹಕರು ಎಟಿಎಂ ಬಳಸಿ ಸ್ಥಿರ ಠೇವಣಿ ಖಾತೆಯನ್ನು ತೆರೆಯಬಹುದು. ಖಾತೆಯ ಅವಧಿಯನ್ನು ಆಯ್ಕೆ ಮಾಡುವ ಅವಕಾಶ ಇದ್ದು, ಕನಿಷ್ಟ ರೂ. 5000 ರಿಂದ ಗರಿಷ್ಠ ರೂ. 49000 ವ್ಯಾಪ್ತಿಯಲ್ಲಿ ಮೊತ್ತ ಡಿಪಾಸಿಟ್ ಮಾಡಬಹುದು.

7. ಇನ್ಸುರೆನ್ಸೆ  ಪ್ರೀಮಿಯಂ ಪೇಮೆಂಟ್

ಎಟಿಎಂ ಮೂಲಕ ಐಸಿಐಸಿಐ, ಎಕ್ಸಿಸ್ ಬ್ಯಾಂಕುಗಳು ಮ್ಯೂಚುವಲ್ ಫಂಡ್ ಮತ್ತು ಎಲ್ಐಸಿ ಪ್ರೀಮಿಯಂ ಪಾವತಿಗೆ ಸೌಲಭ್ಯ ಕಲ್ಪಿಸಿದೆ. ಎಟಿಎಂ ಮೂಲಕ ಪ್ರೀಮಿಯಂ ಪಾವತಿ ಸಂದರ್ಭದಲ್ಲಿ ಪಾಲಿಸಿ ನಂಬರ್ ಮತ್ತು ಖಾತೆ ವಿವರಗಳನ್ನು ಹೊಂದಿರಬೇಕು.

8. ಆದಾಯ ತೆರಿಗೆ ಪಾವತಿಸಿ

ನೇರವಾಗಿ ಆದಾಯ ತೆರಿಗೆ ಪಾವತಿಸುವುದಕ್ಕಾಗಿ ನೋಂದಣಿ ಮಾಡಿಸಬೇಕಾಗುತ್ತದೆ. ತೆರಿಗೆ ಪಾವತಿಯ ಮೊತ್ತ ನಿಮ್ಮ ಖಾತೆಯಿಂದ ಕಡಿತವಾಗುತ್ತದೆ. Special Information Number(SIN) ಆಯ್ಕೆ ಮೂಲಕ ನಿಮಗೆ ರಸೀತಿ ಲಭ್ಯವಾಗುತ್ತದೆ. ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡುವಾಗ SIN ಸಂಖ್ಯೆ ಒದಗಿಸಬೇಕಾಗುತ್ತದೆ.

9. ಟ್ರಸ್ಟ್ಗಳಿಗೆ ದೇಣಿಗೆ ಮಾಡಿ

ಎಟಿಎಂಗಳ ಮೂಲಕ ದೇಣಿಗೆಯನ್ನು ನೀಡಬಹುದು. ನಿಮಗೆ ಇಷ್ಟವಾದ NGO ಅಥವಾ ದೇವಸ್ಥಾನದ ಟ್ರಸ್ಟ್ ಗಳಿಗೆ ದೇಣಿಗೆ ನೀಡಲು ಎಟಿಎಂ ಯಂತ್ರದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಉದಾ: ರಾಮಕೃಷ್ಣ ಮಿಷನ್, ತಿರುಪತಿ, ಇಸ್ಕಾನ್, ಕಾಶಿ ವಿಶ್ವನಾಥ ಹೀಗೆ ನಿಮಗೆ ಇಷ್ಟವಾದ ಚಾರಿಟಿ ಸಂಸ್ಥೆ/ದೇವಸ್ಥಾನಗಳಿಗೆ ಡೊನೆಟ್ ಮಾಡಬಹುದು. ಒಂದು ಸಲ ದೇಣಿಗೆ ಪಾವತಿಸಿದ ನಂತರ ರಸೀತಿ ಪಡೆಯಬಹುದು. ಇದನ್ನು ತೆರಿಗೆ ಫೈಲಿಂಗ್ ಮಾಡುವ ವೇಳೆ ಬಳಸಬಹುದು

10.ಚೆಕ್ ಬುಕ್ ಗಾಗಿ ಕೋರಿಕೆ

ಗ್ರಾಹಕರು ಚೆಕ್ ಬುಕ್ ಕೋರಿ ಮನವಿಯನ್ನು ನೀಡಲು ಬ್ಯಾಂಕುಗಳಿಗೆ ಹೋಗಬೇಕಾಗಿಲ್ಲ. ಎಟಿಎಂ ಕೇಂದ್ರಗಳಿಗೆ ಭೇಟಿ ಕೊಟ್ಟು ಹೊಸ ಚೆಕ್ ಬುಕ್ ಗಾಗಿ ಮನವಿ ಸಲ್ಲಿಸಬಹುದು. ನಿಮ್ಮ ನೋಂದಾಯಿತ ವಿಳಾಸವನ್ನು ನಮೂದಿಸಲು ಮರೆಯಬೇಡಿ. ಈ ಸೌಲಭ್ಯವನ್ನು ICICI ಮತ್ತು SBI ಬ್ಯಾಂಕುಗಳು ನೀಡಿವೆ.

11. ಖಾತೆ ವರ್ಗಾವಣೆ ಮಾಡಬಹುದು.

ಖಾತೆ ವರ್ಗಾವಣೆಯನ್ನು ಒಂದು ಬ್ಯಾಂಕಿನಿಂದ ಇನ್ನೊಂದು ಬ್ಯಾಂಕಿಗೆ ಅದೇ ಗ್ರಾಹಕನಿಗೆ ಅಥವಾ ಬೇರೆ ಗ್ರಾಹಕನಿಗೆ ವರ್ಗಾವಣೆ ಮಾಡಬಹುದು.  ಹಲವು ಬ್ಯಾಂಕುಗಳು ಈ ಸೌಲಭ್ಯ ಒದಗಿಸುತ್ತಿವೆ. ಇದಕ್ಕೆ ನಿಮ್ಮ ಡೆಬಿಟ್ ಕಾರ್ಡ್, ಪಿನ್ ನಂಬರ್ ಮತ್ತು ಫಲಾನುಭವಿಯ ಡೆಬಿಟ್ ಕಾರ್ಡ್ ನಂಬರ್ ಬೇಕಾಗುತ್ತದೆ.

12.ಮೊಬೈಲ್ ಬ್ಯಾಂಕಿಂಗ್ ನೋಂದಣಿ

ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಸೇವೆಗಾಗಿ ಎಟಿಎಂ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ಮೊಬೈಲ್ ಬ್ಯಾಂಕಿಂಗ್ ಅರ್ಜಿಗಳನ್ನು ನೋಂದಣಿ ಮಾಡಿಸಬಹುದು ಇಲ್ಲವೆ ಅಪನೋಂದಣಿ ಮಾಡಬಹುದು.

13. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮಾಡಿ

ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಪಾವತಿ ಮಾಡುವುದೇ ಒಂದು ತಲೆನೋವಿನ ವಿಚಾರ. ಎಟಿಎಂ ಕೇಂದ್ರಗಳಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಡೆಬಿಟ್ ಕಾರ್ಡುಗಳ ಮೂಲಕ ಪಾವತಿ ಮಾಡಬಹುದು. ಎಟಿಎಂ ಯಂತ್ರದಲ್ಲಿ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿ ‘Bill Pay’ ಆಪ್ಸನ್ ಆಯ್ಕೆ ಮಾಡಿದ ನಂತರ ಕಾರ್ಡ್ ನಂಬರ್ ನಮೂದಿಸಿ ಬಿಲ್ ಪಾವತಿ ಮಾಡಿ.

14. ರೈಲ್ವೆ  ಟಿಕೆಟ್  ಬುಕಿಂಗ್ ಮಾಡಿ

ಎಟಿಎಂ ಮುಖಾಂತರ ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಂತಹ ಕೆಲ ಬ್ಯಾಂಕುಗಳು ರೈಲ್ವೆ ಟಿಕೇಟ್ ಬುಕಿಂಗ್ ಮಾಡಲು ಅವಕಾಶ ಕಲ್ಪಸಿವೆ.

15. ಮೊಬೈಲ್ ಮತ್ತು ಡಿಟಿಎಚ್ ರೀಚಾರ್ಜ್ ಮಾಡಬಹುದು

ಮೊಬೈಲ್ ರಿಚಾರ್ಜ್, ಡಿಟಿಎಚ್ ರೀಚಾರ್ಜ್ ನಂತಹ ಹಲವಾರು ವ್ಯವಹಾರಗಳನ್ನು ಎಟಿಎಂ ಯಂತ್ರದ ಮೂಲಕ ನಿರ್ವಹಿಸಬಹುದು. ಮೊಬೈಲ್ ಚಾರ್ಜ್ ಕಡಿಮೆ ಇದ್ದಾಗ ರಿಟೇಲ್ ಶಾಪ್ ಹುಡುಕುವ ಬದಲು ಎಟಿಎಂ ಕೇಂದ್ರಗಳನ್ನು ರಿಚಾರ್ಜ್ ಮಾಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ದಯವಿಟ್ಟು ಊಟ ತಿಂದ ತಕ್ಷಣ ಈ 5 ತಪ್ಪುಗಳನ್ನು ಮಾಡಲೇಬೇಡಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • ಸುದ್ದಿ

    SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

    ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.

  • ಸುದ್ದಿ

    ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ ವಿಧಿಸಿದ ಕೋರ್ಟ್ ….!

    ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…