News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಹಣ ಕಾಸು

ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

930

ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ. ಎಟಿಎಂ ಯಂತ್ರಗಳ ಮೂಲಕ ಕೈಗೊಳ್ಳಬಹುದಾದ 15 ಪ್ರಮುಖ ವ್ಯವಹಾರಗಳ ಪಟ್ಟಿ ಇಲ್ಲಿ ಮಾಡಲಾಗಿದೆ.

1. ನಗದು ವಿತ್ ಡ್ರಾ (ಕ್ಯಾಶ್ ವಿಥ್ ಡ್ರಾ)

ಎಟಿಎಂ ಕೇಂದ್ರಗಳಲ್ಲಿ ಹಣ ವಿತ್ ಡ್ರಾ ಮಾಡಿಕೊಳ್ಳುವ ಸೇವೆ ಜನಜನಿತವಾಗಿದೆ. ಮುಖ್ಯವಾಗಿ ಪ್ರತಿಯೊಬ್ಬರೂ ನಗದು ವಿತ್ ಡ್ರಾ ವ್ಯವಹಾರ ಮಾಡಿರುತ್ತಾರೆ. ನೋಟು ನಿಷೇಧದ ನಂತರ ಒಂದು ದಿನಕ್ಕೆ ಅಥವಾ ಒಂದು ವಾರಕ್ಕೆ 50 ಸಾವಿರ ನಗದು ವಿತ್ ಡ್ರಾ ಮಾಡಬಹುದಾಗಿದೆ.

2. ಬ್ಯಾಲೆನ್ಸ್ ಪರಿಶೀಲನೆ (ಬ್ಯಾಲೆನ್ಸ್ ಚೆಕ್)

ಗ್ರಾಹಕರು ತಮ್ಮ ಖಾತೆಯಲ್ಲಿನ ಮೊತ್ತವನ್ನು, ಪ್ರಸ್ತುತ ಲಭ್ಯವಿರುವ ಒಟ್ಟು ಮೊತ್ತವನ್ನು ಪರಿಶೀಲನೆ ಮಾಡಬಹುದು. ಎಟಿಎಂ ಕಾರ್ಡ್ ಸ್ವೈಪ್ ಮಾಡಿದ ನಂತರ ಪರದೆ ಮೇಲೆ ಬ್ಯಾಲೆನ್ಸ್ ಚೆಕ್ ಆಯ್ಕೆ ಬರುತ್ತದೆ.

3. ಫಂಡ್ ವರ್ಗಾವಣೆ (ಫಂಡ್ ಟ್ರಾನ್ಸ್ಫರ್)

ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಫಂಡ್ಸ್ ವರ್ಗಾವಣೆ ಮಾಡಬಹುದು. ಫಂಡ್ ವರ್ಗಾವಣೆ ಮಾಡುವಾಗ ಕಳಿಸಬೇಕಾಗಿರುವ ವ್ಯಕ್ತಿಯ ಕಾರ್ಡ್ ಮೇಲಿರುವ 16 ಡಿಜಿಟ್ ಸಂಖ್ಯೆಗಳು ಗೊತ್ತಿರಬೇಕಾಗುತ್ತದೆ.

4. ಮಿನಿ ಸ್ಟೇಟ್ಮೆಂಟ್ ತೆಗೆಯಬಹುದು.

ನಿಮ್ಮ ಖಾತೆ ಬಗೆಗಿನ ವ್ಯವಹಾರಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈ ಮಿನಿ ಸ್ಟೇಟ್ಮೆಂಟ್ ಪಡೆದುಕೊಳ್ಳಬಹುದು. ಈ ಮಿನಿ ಹೇಳಿಕೆಯಲ್ಲಿ ಹಿಂದಿನ ಹತ್ತು ವ್ಯವಹಾರಗಳ ಮಾಹಿತಿ ನೀವು ನೋಡಬಹುದು.

5. ನಿಮ್ಮ ಸಿಕ್ರೆಟ್ ಪಿನ್ ಬದಲಾವಣೆ

ಎಟಿಎಂ ಕೇಂದ್ರಗಳಲ್ಲಿ ಗ್ರಾಹಕರು ತಮ್ಮ ಡೆಬಿಟ್ ಕಾರ್ಡಿನ ನಾಲ್ಕು ಅಂಕೆಗಳ ಪಿನ್ ನಂಬರ್ ಬದಲಾವಣೆ ಮಾಡಬಹುದು. ಇದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ನಿಯಮಿತವಾಗಿ ಪಿನ್ ನಂಬರ್ ಬದಲಾವಣೆ ಮಾಡುತ್ತಿರಬಹುದು.

6. ಫಿಕ್ಸೆಡ್ ಡಿಪೋಸಿಟ್

ಬ್ಯಾಂಕ್ ಗ್ರಾಹಕರು ಎಟಿಎಂ ಬಳಸಿ ಸ್ಥಿರ ಠೇವಣಿ ಖಾತೆಯನ್ನು ತೆರೆಯಬಹುದು. ಖಾತೆಯ ಅವಧಿಯನ್ನು ಆಯ್ಕೆ ಮಾಡುವ ಅವಕಾಶ ಇದ್ದು, ಕನಿಷ್ಟ ರೂ. 5000 ರಿಂದ ಗರಿಷ್ಠ ರೂ. 49000 ವ್ಯಾಪ್ತಿಯಲ್ಲಿ ಮೊತ್ತ ಡಿಪಾಸಿಟ್ ಮಾಡಬಹುದು.

7. ಇನ್ಸುರೆನ್ಸೆ  ಪ್ರೀಮಿಯಂ ಪೇಮೆಂಟ್

ಎಟಿಎಂ ಮೂಲಕ ಐಸಿಐಸಿಐ, ಎಕ್ಸಿಸ್ ಬ್ಯಾಂಕುಗಳು ಮ್ಯೂಚುವಲ್ ಫಂಡ್ ಮತ್ತು ಎಲ್ಐಸಿ ಪ್ರೀಮಿಯಂ ಪಾವತಿಗೆ ಸೌಲಭ್ಯ ಕಲ್ಪಿಸಿದೆ. ಎಟಿಎಂ ಮೂಲಕ ಪ್ರೀಮಿಯಂ ಪಾವತಿ ಸಂದರ್ಭದಲ್ಲಿ ಪಾಲಿಸಿ ನಂಬರ್ ಮತ್ತು ಖಾತೆ ವಿವರಗಳನ್ನು ಹೊಂದಿರಬೇಕು.

8. ಆದಾಯ ತೆರಿಗೆ ಪಾವತಿಸಿ

ನೇರವಾಗಿ ಆದಾಯ ತೆರಿಗೆ ಪಾವತಿಸುವುದಕ್ಕಾಗಿ ನೋಂದಣಿ ಮಾಡಿಸಬೇಕಾಗುತ್ತದೆ. ತೆರಿಗೆ ಪಾವತಿಯ ಮೊತ್ತ ನಿಮ್ಮ ಖಾತೆಯಿಂದ ಕಡಿತವಾಗುತ್ತದೆ. Special Information Number(SIN) ಆಯ್ಕೆ ಮೂಲಕ ನಿಮಗೆ ರಸೀತಿ ಲಭ್ಯವಾಗುತ್ತದೆ. ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡುವಾಗ SIN ಸಂಖ್ಯೆ ಒದಗಿಸಬೇಕಾಗುತ್ತದೆ.

9. ಟ್ರಸ್ಟ್ಗಳಿಗೆ ದೇಣಿಗೆ ಮಾಡಿ

ಎಟಿಎಂಗಳ ಮೂಲಕ ದೇಣಿಗೆಯನ್ನು ನೀಡಬಹುದು. ನಿಮಗೆ ಇಷ್ಟವಾದ NGO ಅಥವಾ ದೇವಸ್ಥಾನದ ಟ್ರಸ್ಟ್ ಗಳಿಗೆ ದೇಣಿಗೆ ನೀಡಲು ಎಟಿಎಂ ಯಂತ್ರದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಉದಾ: ರಾಮಕೃಷ್ಣ ಮಿಷನ್, ತಿರುಪತಿ, ಇಸ್ಕಾನ್, ಕಾಶಿ ವಿಶ್ವನಾಥ ಹೀಗೆ ನಿಮಗೆ ಇಷ್ಟವಾದ ಚಾರಿಟಿ ಸಂಸ್ಥೆ/ದೇವಸ್ಥಾನಗಳಿಗೆ ಡೊನೆಟ್ ಮಾಡಬಹುದು. ಒಂದು ಸಲ ದೇಣಿಗೆ ಪಾವತಿಸಿದ ನಂತರ ರಸೀತಿ ಪಡೆಯಬಹುದು. ಇದನ್ನು ತೆರಿಗೆ ಫೈಲಿಂಗ್ ಮಾಡುವ ವೇಳೆ ಬಳಸಬಹುದು

10.ಚೆಕ್ ಬುಕ್ ಗಾಗಿ ಕೋರಿಕೆ

ಗ್ರಾಹಕರು ಚೆಕ್ ಬುಕ್ ಕೋರಿ ಮನವಿಯನ್ನು ನೀಡಲು ಬ್ಯಾಂಕುಗಳಿಗೆ ಹೋಗಬೇಕಾಗಿಲ್ಲ. ಎಟಿಎಂ ಕೇಂದ್ರಗಳಿಗೆ ಭೇಟಿ ಕೊಟ್ಟು ಹೊಸ ಚೆಕ್ ಬುಕ್ ಗಾಗಿ ಮನವಿ ಸಲ್ಲಿಸಬಹುದು. ನಿಮ್ಮ ನೋಂದಾಯಿತ ವಿಳಾಸವನ್ನು ನಮೂದಿಸಲು ಮರೆಯಬೇಡಿ. ಈ ಸೌಲಭ್ಯವನ್ನು ICICI ಮತ್ತು SBI ಬ್ಯಾಂಕುಗಳು ನೀಡಿವೆ.

11. ಖಾತೆ ವರ್ಗಾವಣೆ ಮಾಡಬಹುದು.

ಖಾತೆ ವರ್ಗಾವಣೆಯನ್ನು ಒಂದು ಬ್ಯಾಂಕಿನಿಂದ ಇನ್ನೊಂದು ಬ್ಯಾಂಕಿಗೆ ಅದೇ ಗ್ರಾಹಕನಿಗೆ ಅಥವಾ ಬೇರೆ ಗ್ರಾಹಕನಿಗೆ ವರ್ಗಾವಣೆ ಮಾಡಬಹುದು.  ಹಲವು ಬ್ಯಾಂಕುಗಳು ಈ ಸೌಲಭ್ಯ ಒದಗಿಸುತ್ತಿವೆ. ಇದಕ್ಕೆ ನಿಮ್ಮ ಡೆಬಿಟ್ ಕಾರ್ಡ್, ಪಿನ್ ನಂಬರ್ ಮತ್ತು ಫಲಾನುಭವಿಯ ಡೆಬಿಟ್ ಕಾರ್ಡ್ ನಂಬರ್ ಬೇಕಾಗುತ್ತದೆ.

12.ಮೊಬೈಲ್ ಬ್ಯಾಂಕಿಂಗ್ ನೋಂದಣಿ

ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಸೇವೆಗಾಗಿ ಎಟಿಎಂ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ಮೊಬೈಲ್ ಬ್ಯಾಂಕಿಂಗ್ ಅರ್ಜಿಗಳನ್ನು ನೋಂದಣಿ ಮಾಡಿಸಬಹುದು ಇಲ್ಲವೆ ಅಪನೋಂದಣಿ ಮಾಡಬಹುದು.

13. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮಾಡಿ

ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಪಾವತಿ ಮಾಡುವುದೇ ಒಂದು ತಲೆನೋವಿನ ವಿಚಾರ. ಎಟಿಎಂ ಕೇಂದ್ರಗಳಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಡೆಬಿಟ್ ಕಾರ್ಡುಗಳ ಮೂಲಕ ಪಾವತಿ ಮಾಡಬಹುದು. ಎಟಿಎಂ ಯಂತ್ರದಲ್ಲಿ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿ ‘Bill Pay’ ಆಪ್ಸನ್ ಆಯ್ಕೆ ಮಾಡಿದ ನಂತರ ಕಾರ್ಡ್ ನಂಬರ್ ನಮೂದಿಸಿ ಬಿಲ್ ಪಾವತಿ ಮಾಡಿ.

14. ರೈಲ್ವೆ  ಟಿಕೆಟ್  ಬುಕಿಂಗ್ ಮಾಡಿ

ಎಟಿಎಂ ಮುಖಾಂತರ ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಂತಹ ಕೆಲ ಬ್ಯಾಂಕುಗಳು ರೈಲ್ವೆ ಟಿಕೇಟ್ ಬುಕಿಂಗ್ ಮಾಡಲು ಅವಕಾಶ ಕಲ್ಪಸಿವೆ.

15. ಮೊಬೈಲ್ ಮತ್ತು ಡಿಟಿಎಚ್ ರೀಚಾರ್ಜ್ ಮಾಡಬಹುದು

ಮೊಬೈಲ್ ರಿಚಾರ್ಜ್, ಡಿಟಿಎಚ್ ರೀಚಾರ್ಜ್ ನಂತಹ ಹಲವಾರು ವ್ಯವಹಾರಗಳನ್ನು ಎಟಿಎಂ ಯಂತ್ರದ ಮೂಲಕ ನಿರ್ವಹಿಸಬಹುದು. ಮೊಬೈಲ್ ಚಾರ್ಜ್ ಕಡಿಮೆ ಇದ್ದಾಗ ರಿಟೇಲ್ ಶಾಪ್ ಹುಡುಕುವ ಬದಲು ಎಟಿಎಂ ಕೇಂದ್ರಗಳನ್ನು ರಿಚಾರ್ಜ್ ಮಾಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಈ ಮಹಿಳೆ ತನ್ನ ತಾಯಿಯ ಚಿತಾಭಸ್ಮ ತಿನ್ನುತ್ತಾಳೆ ..!ಕಾರಣ ತಿಳಿಯಲು ಈ ಲೇಖನ ಓದಿ…

    ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸುದ್ದಿ

    ಕರ್ತವ್ಯಕ್ಕೆ ತೆರಳಿದ ಪತಿಗಾಗಿ 19 ವರ್ಷ ಶಬರಿಯಂತೆ ಕಾಯ್ದ ಪತ್ನಿ…….!

    ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…