ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ. ಎಟಿಎಂ ಯಂತ್ರಗಳ ಮೂಲಕ ಕೈಗೊಳ್ಳಬಹುದಾದ 15 ಪ್ರಮುಖ ವ್ಯವಹಾರಗಳ ಪಟ್ಟಿ ಇಲ್ಲಿ ಮಾಡಲಾಗಿದೆ.
1. ನಗದು ವಿತ್ ಡ್ರಾ (ಕ್ಯಾಶ್ ವಿಥ್ ಡ್ರಾ)
ಎಟಿಎಂ ಕೇಂದ್ರಗಳಲ್ಲಿ ಹಣ ವಿತ್ ಡ್ರಾ ಮಾಡಿಕೊಳ್ಳುವ ಸೇವೆ ಜನಜನಿತವಾಗಿದೆ. ಮುಖ್ಯವಾಗಿ ಪ್ರತಿಯೊಬ್ಬರೂ ನಗದು ವಿತ್ ಡ್ರಾ ವ್ಯವಹಾರ ಮಾಡಿರುತ್ತಾರೆ. ನೋಟು ನಿಷೇಧದ ನಂತರ ಒಂದು ದಿನಕ್ಕೆ ಅಥವಾ ಒಂದು ವಾರಕ್ಕೆ 50 ಸಾವಿರ ನಗದು ವಿತ್ ಡ್ರಾ ಮಾಡಬಹುದಾಗಿದೆ.
2. ಬ್ಯಾಲೆನ್ಸ್ ಪರಿಶೀಲನೆ (ಬ್ಯಾಲೆನ್ಸ್ ಚೆಕ್)
ಗ್ರಾಹಕರು ತಮ್ಮ ಖಾತೆಯಲ್ಲಿನ ಮೊತ್ತವನ್ನು, ಪ್ರಸ್ತುತ ಲಭ್ಯವಿರುವ ಒಟ್ಟು ಮೊತ್ತವನ್ನು ಪರಿಶೀಲನೆ ಮಾಡಬಹುದು. ಎಟಿಎಂ ಕಾರ್ಡ್ ಸ್ವೈಪ್ ಮಾಡಿದ ನಂತರ ಪರದೆ ಮೇಲೆ ಬ್ಯಾಲೆನ್ಸ್ ಚೆಕ್ ಆಯ್ಕೆ ಬರುತ್ತದೆ.
3. ಫಂಡ್ ವರ್ಗಾವಣೆ (ಫಂಡ್ ಟ್ರಾನ್ಸ್ಫರ್)
ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಫಂಡ್ಸ್ ವರ್ಗಾವಣೆ ಮಾಡಬಹುದು. ಫಂಡ್ ವರ್ಗಾವಣೆ ಮಾಡುವಾಗ ಕಳಿಸಬೇಕಾಗಿರುವ ವ್ಯಕ್ತಿಯ ಕಾರ್ಡ್ ಮೇಲಿರುವ 16 ಡಿಜಿಟ್ ಸಂಖ್ಯೆಗಳು ಗೊತ್ತಿರಬೇಕಾಗುತ್ತದೆ.
4. ಮಿನಿ ಸ್ಟೇಟ್ಮೆಂಟ್ ತೆಗೆಯಬಹುದು.
ನಿಮ್ಮ ಖಾತೆ ಬಗೆಗಿನ ವ್ಯವಹಾರಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈ ಮಿನಿ ಸ್ಟೇಟ್ಮೆಂಟ್ ಪಡೆದುಕೊಳ್ಳಬಹುದು. ಈ ಮಿನಿ ಹೇಳಿಕೆಯಲ್ಲಿ ಹಿಂದಿನ ಹತ್ತು ವ್ಯವಹಾರಗಳ ಮಾಹಿತಿ ನೀವು ನೋಡಬಹುದು.
5. ನಿಮ್ಮ ಸಿಕ್ರೆಟ್ ಪಿನ್ ಬದಲಾವಣೆ
ಎಟಿಎಂ ಕೇಂದ್ರಗಳಲ್ಲಿ ಗ್ರಾಹಕರು ತಮ್ಮ ಡೆಬಿಟ್ ಕಾರ್ಡಿನ ನಾಲ್ಕು ಅಂಕೆಗಳ ಪಿನ್ ನಂಬರ್ ಬದಲಾವಣೆ ಮಾಡಬಹುದು. ಇದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ನಿಯಮಿತವಾಗಿ ಪಿನ್ ನಂಬರ್ ಬದಲಾವಣೆ ಮಾಡುತ್ತಿರಬಹುದು.
6. ಫಿಕ್ಸೆಡ್ ಡಿಪೋಸಿಟ್
ಬ್ಯಾಂಕ್ ಗ್ರಾಹಕರು ಎಟಿಎಂ ಬಳಸಿ ಸ್ಥಿರ ಠೇವಣಿ ಖಾತೆಯನ್ನು ತೆರೆಯಬಹುದು. ಖಾತೆಯ ಅವಧಿಯನ್ನು ಆಯ್ಕೆ ಮಾಡುವ ಅವಕಾಶ ಇದ್ದು, ಕನಿಷ್ಟ ರೂ. 5000 ರಿಂದ ಗರಿಷ್ಠ ರೂ. 49000 ವ್ಯಾಪ್ತಿಯಲ್ಲಿ ಮೊತ್ತ ಡಿಪಾಸಿಟ್ ಮಾಡಬಹುದು.
7. ಇನ್ಸುರೆನ್ಸೆ ಪ್ರೀಮಿಯಂ ಪೇಮೆಂಟ್
ಎಟಿಎಂ ಮೂಲಕ ಐಸಿಐಸಿಐ, ಎಕ್ಸಿಸ್ ಬ್ಯಾಂಕುಗಳು ಮ್ಯೂಚುವಲ್ ಫಂಡ್ ಮತ್ತು ಎಲ್ಐಸಿ ಪ್ರೀಮಿಯಂ ಪಾವತಿಗೆ ಸೌಲಭ್ಯ ಕಲ್ಪಿಸಿದೆ. ಎಟಿಎಂ ಮೂಲಕ ಪ್ರೀಮಿಯಂ ಪಾವತಿ ಸಂದರ್ಭದಲ್ಲಿ ಪಾಲಿಸಿ ನಂಬರ್ ಮತ್ತು ಖಾತೆ ವಿವರಗಳನ್ನು ಹೊಂದಿರಬೇಕು.
8. ಆದಾಯ ತೆರಿಗೆ ಪಾವತಿಸಿ
ನೇರವಾಗಿ ಆದಾಯ ತೆರಿಗೆ ಪಾವತಿಸುವುದಕ್ಕಾಗಿ ನೋಂದಣಿ ಮಾಡಿಸಬೇಕಾಗುತ್ತದೆ. ತೆರಿಗೆ ಪಾವತಿಯ ಮೊತ್ತ ನಿಮ್ಮ ಖಾತೆಯಿಂದ ಕಡಿತವಾಗುತ್ತದೆ. Special Information Number(SIN) ಆಯ್ಕೆ ಮೂಲಕ ನಿಮಗೆ ರಸೀತಿ ಲಭ್ಯವಾಗುತ್ತದೆ. ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡುವಾಗ SIN ಸಂಖ್ಯೆ ಒದಗಿಸಬೇಕಾಗುತ್ತದೆ.
9. ಟ್ರಸ್ಟ್ಗಳಿಗೆ ದೇಣಿಗೆ ಮಾಡಿ
ಎಟಿಎಂಗಳ ಮೂಲಕ ದೇಣಿಗೆಯನ್ನು ನೀಡಬಹುದು. ನಿಮಗೆ ಇಷ್ಟವಾದ NGO ಅಥವಾ ದೇವಸ್ಥಾನದ ಟ್ರಸ್ಟ್ ಗಳಿಗೆ ದೇಣಿಗೆ ನೀಡಲು ಎಟಿಎಂ ಯಂತ್ರದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಉದಾ: ರಾಮಕೃಷ್ಣ ಮಿಷನ್, ತಿರುಪತಿ, ಇಸ್ಕಾನ್, ಕಾಶಿ ವಿಶ್ವನಾಥ ಹೀಗೆ ನಿಮಗೆ ಇಷ್ಟವಾದ ಚಾರಿಟಿ ಸಂಸ್ಥೆ/ದೇವಸ್ಥಾನಗಳಿಗೆ ಡೊನೆಟ್ ಮಾಡಬಹುದು. ಒಂದು ಸಲ ದೇಣಿಗೆ ಪಾವತಿಸಿದ ನಂತರ ರಸೀತಿ ಪಡೆಯಬಹುದು. ಇದನ್ನು ತೆರಿಗೆ ಫೈಲಿಂಗ್ ಮಾಡುವ ವೇಳೆ ಬಳಸಬಹುದು

10.ಚೆಕ್ ಬುಕ್ ಗಾಗಿ ಕೋರಿಕೆ
ಗ್ರಾಹಕರು ಚೆಕ್ ಬುಕ್ ಕೋರಿ ಮನವಿಯನ್ನು ನೀಡಲು ಬ್ಯಾಂಕುಗಳಿಗೆ ಹೋಗಬೇಕಾಗಿಲ್ಲ. ಎಟಿಎಂ ಕೇಂದ್ರಗಳಿಗೆ ಭೇಟಿ ಕೊಟ್ಟು ಹೊಸ ಚೆಕ್ ಬುಕ್ ಗಾಗಿ ಮನವಿ ಸಲ್ಲಿಸಬಹುದು. ನಿಮ್ಮ ನೋಂದಾಯಿತ ವಿಳಾಸವನ್ನು ನಮೂದಿಸಲು ಮರೆಯಬೇಡಿ. ಈ ಸೌಲಭ್ಯವನ್ನು ICICI ಮತ್ತು SBI ಬ್ಯಾಂಕುಗಳು ನೀಡಿವೆ.
11. ಖಾತೆ ವರ್ಗಾವಣೆ ಮಾಡಬಹುದು.
ಖಾತೆ ವರ್ಗಾವಣೆಯನ್ನು ಒಂದು ಬ್ಯಾಂಕಿನಿಂದ ಇನ್ನೊಂದು ಬ್ಯಾಂಕಿಗೆ ಅದೇ ಗ್ರಾಹಕನಿಗೆ ಅಥವಾ ಬೇರೆ ಗ್ರಾಹಕನಿಗೆ ವರ್ಗಾವಣೆ ಮಾಡಬಹುದು. ಹಲವು ಬ್ಯಾಂಕುಗಳು ಈ ಸೌಲಭ್ಯ ಒದಗಿಸುತ್ತಿವೆ. ಇದಕ್ಕೆ ನಿಮ್ಮ ಡೆಬಿಟ್ ಕಾರ್ಡ್, ಪಿನ್ ನಂಬರ್ ಮತ್ತು ಫಲಾನುಭವಿಯ ಡೆಬಿಟ್ ಕಾರ್ಡ್ ನಂಬರ್ ಬೇಕಾಗುತ್ತದೆ.
12.ಮೊಬೈಲ್ ಬ್ಯಾಂಕಿಂಗ್ ನೋಂದಣಿ
ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಸೇವೆಗಾಗಿ ಎಟಿಎಂ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ಮೊಬೈಲ್ ಬ್ಯಾಂಕಿಂಗ್ ಅರ್ಜಿಗಳನ್ನು ನೋಂದಣಿ ಮಾಡಿಸಬಹುದು ಇಲ್ಲವೆ ಅಪನೋಂದಣಿ ಮಾಡಬಹುದು.
13. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮಾಡಿ
ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಪಾವತಿ ಮಾಡುವುದೇ ಒಂದು ತಲೆನೋವಿನ ವಿಚಾರ. ಎಟಿಎಂ ಕೇಂದ್ರಗಳಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಡೆಬಿಟ್ ಕಾರ್ಡುಗಳ ಮೂಲಕ ಪಾವತಿ ಮಾಡಬಹುದು. ಎಟಿಎಂ ಯಂತ್ರದಲ್ಲಿ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿ ‘Bill Pay’ ಆಪ್ಸನ್ ಆಯ್ಕೆ ಮಾಡಿದ ನಂತರ ಕಾರ್ಡ್ ನಂಬರ್ ನಮೂದಿಸಿ ಬಿಲ್ ಪಾವತಿ ಮಾಡಿ.
14. ರೈಲ್ವೆ ಟಿಕೆಟ್ ಬುಕಿಂಗ್ ಮಾಡಿ
ಎಟಿಎಂ ಮುಖಾಂತರ ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಂತಹ ಕೆಲ ಬ್ಯಾಂಕುಗಳು ರೈಲ್ವೆ ಟಿಕೇಟ್ ಬುಕಿಂಗ್ ಮಾಡಲು ಅವಕಾಶ ಕಲ್ಪಸಿವೆ.
15. ಮೊಬೈಲ್ ಮತ್ತು ಡಿಟಿಎಚ್ ರೀಚಾರ್ಜ್ ಮಾಡಬಹುದು
ಮೊಬೈಲ್ ರಿಚಾರ್ಜ್, ಡಿಟಿಎಚ್ ರೀಚಾರ್ಜ್ ನಂತಹ ಹಲವಾರು ವ್ಯವಹಾರಗಳನ್ನು ಎಟಿಎಂ ಯಂತ್ರದ ಮೂಲಕ ನಿರ್ವಹಿಸಬಹುದು. ಮೊಬೈಲ್ ಚಾರ್ಜ್ ಕಡಿಮೆ ಇದ್ದಾಗ ರಿಟೇಲ್ ಶಾಪ್ ಹುಡುಕುವ ಬದಲು ಎಟಿಎಂ ಕೇಂದ್ರಗಳನ್ನು ರಿಚಾರ್ಜ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…