ಗ್ಯಾಜೆಟ್

ನಿಮ್ಗೆ ವಾಟ್ಸ್ಯಾಪ್ ಇಲ್ಲದೆ ನಿದ್ದೆ ಬರೋದಿಲ್ಲ ಅಂತ ಗೊತ್ತು..!ಆದ್ರೆ ಇದ್ರಿಂದ ನಿಮ್ಗೆ ಏನೆಲ್ಲಾ ಬಾರಿ ನಷ್ಟ ಆಗುತ್ತಿದೆ ಗೊತ್ತಾ..?

493

ಇಲ್ಲ, ನಾನು ವಾಟ್ಸ್ಯಾಪ್ ಯೂಸ್‌ಮಾಡ್ತಿಲ್ಲ… ಹಾಗಂತ  ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು  ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್‌ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್‌ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

ಒಂದೆರಡು ಗಂಟೆ ಇಂಟರ್ನೆಟ್‌ಆಫ್ ಮಾಡಿ ಸುಮ್ಮನೆ ಕುಳಿತುಕೊಳ್ಳಿ. ವಾಟ್ಸ್ಯಾಪ್ ಕಡೆಗೆ ನಿಮ್ಮ ಗಮನ ಎಳೆಯದಿದ್ದರೆ, ನೀವು ಈ ಗೀಳಿನಿಂದ ಸೇಫ್ ಅಂತ ಅರ್ಥ. ಹಾಗಾದ್ರೆ, ಅತಿಯಾದ ವಾಟ್ಸ್ಯಾಪ್‌ಬಳಕೆಯಿಂದ ನಿಮಗೆ ಏನೇನು ನಷ್ಟ ಆಗ್ತಿದೆ ಗೊತ್ತಾ? ನಿಮ್ಮನ್ನು ವೇಸ್ಟ್‌ಆಗಿಸ್ತಿದೆ ವಾಟ್ಸ್ ಆಪ್!

1. ಸಮಯ ಹಾಳು:-

ನೋಡೋಣ, ಯಾರಾದ್ರೂ ಆನ್‌ಲೈನ್‌ಇದ್ದಾರ ಅಂತ ಚೆಕ್ ಮಾಡುವುದರಲ್ಲೆ  30 ನಿಮಿಷ ವ್ಯರ್ಥವಾಗುತ್ತದೆ. ದಿನಕ್ಕೆ ಅರ್ಧ ಗಂಟೆ ಅಂತಾದ್ರೆ  ತಿಂಗಳಿಗೆ ಎಷ್ಟಾಗುತ್ತೆ ಲೆಕ್ಕ ಹಾಕಿ? ಪ್ರತಿ ಸಲ ಆನ್ ಲೈನ್‌ಗೆ ಬಂದಾಗ , ಯಾರಾದ್ರೂ ಚಾಟ್‌ಗೆ ಸಿಗ್ತಾರಾ ಅಂತ ಹುಡುಕೋದು ಕೂಡ ಕೆಲವರಿಗೆ ಚಟವಾಗಿಬಿಟ್ಟಿದೆ. ಹೀಗೆ ಮಾಡೂ ದಿಂದ  ಆಗೂ ಪ್ರಯೋಜನವಾದ್ರೂ ಏನು? ಅಂತಿಮವಾಗಿ ನಿಮಗೆ ಸಿಕ್ಕಿದ್ದಾದರೂ ಏನು? ಸೊನ್ನೆ! 00000000000000000000000000000000000000000

2. ಡಿಪಿ: ಪೋಟೂ ಅಷ್ಟೇ ಅಲ್ಲ!

ವಾಟ್ಸ್ವಾಪ್‌ ಡಿಪಿ ಅಥವಾ ಡಿಸ್‌ಪ್ಲೇ ಪಿಕ್ಚರ್‌ಈಗ ಕೇವಲ ಪೋಟೂ ಮಾತ್ರ ಆಗಿ ಉಳಿದಿಲ್ಲ. ನಿಮ್ಮ ಬದುಕನ್ನು ಎಲ್ಲರೆದುರು ಬಿಂಬಿಸುವ ಸಾಧನವಾಗಿ ಬದಲಾಗಿದೆ. ಎಲ್ಲರೂ ಮೆಚ್ಚುವಂಥ ಫೋಟೊವನ್ನು ಸೆಲೆಕ್ಟ್ ಮಾಡುವುದೇ ದೊಡ್ಡ ಸವಾಲು. ಈಗಂತೂ ನಿಮ್ಮ ಡಿಪಿಯನ್ನು ಯಾರ್ಯಾರು ನೋಡಿದ್ದಾರೆ, ನೋಡಿಲ್ಲ ಅಂತಲೂ ಗೊತ್ತಾಗುತ್ತೆ. ಅಯ್ಯೋ ಅವನು/ ಅವಳು ನನ್ನ ಡಿಪಿ ಚೆಕ್‌ಮಾಡಿಲ್ಲ. ಇನ್ನೂ ಚೆಂದದ ಪೋಟೂ ಹಾಕ್ತೀನಿ ಅಂತ ಅರ್ಧ ಗಂಟೆಗೊಮ್ಮೆ ಡಿಪಿ ಬದಲಿಸುತ್ತಾರೆ. ಜಗ ಮೆಚ್ಚುವ ಡಿಪಿಗಾಗಿ  ಹಂಬಲಿಸುತ್ತಾ, ಅದಕ್ಕಾಗಿಯೇ ಫೋಟೊ ಕ್ಲಿಕ್ಕಿಸಿಕೊಳ್ಳುವವರೂ ಇದ್ದಾರೆ. ಇದರಿಂದ ನಿಮ್ಮೊಳಗೆ ಆತ್ಮರತಿ ಬೆಳೆಯುತ್ತಿದೆ. ಹೊರಜಗತ್ತಿಗೆ ನಿಮ್ಮ ಮೇಲಿನ ಗಂಭೀರತೆ ಹೊರಟುಹೋಗುತ್ತಿದೆ.

3. ಪೋನೆ ಇಲ್ಲ, ಮೆಸೇಜೆ ಎಲ್ಲಾ…

ವಾಟ್ಸ್ಯಾಪ್‌ಬರುವುದಕ್ಕಿಂತಲೂವು  ಮುಂಚೆ, ಪ್ರೀತಿ ಪಾತ್ರರಿಗೆ  ಆಗೂಮ್ಮೆ , ಈಗೊಮ್ಮೆಯಾದರೂ ಫೋನ್ ಮಾಡುತ್ತಿದ್ದೆವು. ಆದರೆ, ಈಗ ವಾಟ್ಸ್ಯಾಪ್‌ನಲ್ಲಿ ಮೆಸೇಜ್‌ಕಳಿಸಿದರೆ ಮುಗಿಯಿತು. ಇನ್ನೂ ದುರಂತವೆಂದರೆ, ಮದುವೆ ಕರೆಯೋಲೆಗಳೂ ವಾಟ್ಸ್ಯಾಪ್‌ನಲ್ಲೇ ತಲುಪುತ್ತಿವೆ,  ಸಂಭಂದಗಳು ಗಟ್ಟಿಯಾಗಿಸಬೇಕಿದ್ದ ವಾಟ್ಸ್ಯಾಪ್‌ನಿಂದಲೇ ಮನುಷ್ಯ- ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ವ್ಯಕ್ತಿ ತನಗೆ ಗೊತ್ತಿಲ್ಲದಂತೆ, ಆತ್ಮೀಯನೊಂದಿಗೆ ದೂರವಾಗುತ್ತಿದ್ದಾನೆ.

4. ಟಿಕ್‌ಟಿಕ್‌ಬ್ಲೂ ಟಿಕ್….

ನಾನು ಮೆಸೇಜ್‌ಕಳಿಸಿ ಆಗಲೇ ಅರ್ಧ ಗಂಟೆಯಾಯ್ತು. ಇನ್ನೂ ಸಿಂಗಲ್‌ಟಿಕ್‌ಇದೆ, ಬ್ಲೂ ಟಿಕ್ ಬಂದಿದೆ, ಆದ್ರೂ ರಿಪ್ಲೆ ಮಾಡಿಲ್ಲ, ಆನ್‌ಲೈನ್‌ಇದ್ದಾನೆ, ಆದ್ರೂ ನನ್ನ ಮೆಸೇಜ್‌ನೋಡದೆ ನಿರ್ಲಕ್ಷಿಸುತ್ತಿದ್ದಾನೆ, ಸಿಂಗಲ್‌ಟಿಕ್‌ಅಷ್ಟೇ ಇದೆ ಅವಳೇನಾದ್ರೂ ನನ್ನನ್ನ ಬ್ಲಾಕ್ ಮಾಡಿದ್ಲಾ..? ಮೆಸೇಜ್‌ಮಾಡಿದಾಗ ಮೂಡುವ ಟಿಕ್‌ಗಳು ಇಂಥವೆಲ್ಲಾ ಟೆನನ್‌ಗಳನ್ನು ಸೃಷ್ಟಿಸುತ್ತಿವೆ. ನಿಮ್ಮನ್ನು ಅನುಮಾನದ ಗೂಡಾಗಿಸುತ್ತಿದೆ.

5. ನಿಮ್ಮ ಫೋನು, ಕಸದ ಬುಟ್ಟಿ..!

ಪ್ರೈಮರಿ ದೂಸ್ತಾಗಳು , ಕ್ರೇಝಿ ಕ್ಲಾಸ್‌ಮೇಟ್ಸ್, ಓಲ್ಡ್‌ಫ್ರೆಂಡ್ಸ್ ಅಸೋಸಿಯೇ?ನ್… ಎಂಬ ಇತ್ಯಾದಿ ವಾಟ್ಸ್ಯಾಪ್‌ಗ್ರೂಪಿಗೆ ನೀವು ಸದಸ್ಯರಾಗಿರುತ್ತೀರಿ. ಅಲ್ಲಿ ಬೆಳಗ್ಗೆ, ರಾತ್ರಿ ಬರುವ ಗುಡ್‌ಮಾರ್ನಿಂಗ್, ಗುಡ್ನೈಟ್‌ಮೆಸೇಜ್‌ಗಳು, ಮೀಮ್ಸ್, ಹಳಸಲು ಜೋಕ್‌ಗಳಿಂದಲೇ ಪೋನ್‌ ಮೆಮೋರಿ ತುಂಬಿ ಮೋಬೈಲ್ ದಿನಕ್ಕೊಮ್ಮೆ ಹ್ಯಾಂಗ್‌ಆಗುತ್ತದೆ. ಎಷ್ಟೇ ಬೇಡ ಬೇಡ ಅಂದರೂ, ಇಂಥ ಗ್ರೂಪ್‌ಗ್ಳಿಂದ ದೂರ ಉಳಿಯುವುದು ಕಷ್ಟದ ವಿಷಯ. ವಾಟ್ಸ್ಯಾಪ್‌ಕಾರಣದಿಂದಲೇ ನಿಮ್ಮ ಪೋನು ಕಸದ ಬುಟ್ಟಿ ಆಗಿರುತ್ತೆ.

ನಿಮ್ಮ ಫೋನ್ ಚಾರ್ಜ್ ಮಾಡಬೇಕಾದ್ರೆ, ಈ 5 ತಪ್ಪುಗಳನ್ನು ಮಾಡಲೇಬೇಡಿ..!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ಆರೋಗ್ಯ

    ಬಾಳೆಲೆ ಊಟ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ! ಹಲವು ಜನರಿಗೆ ತಿಳಿದಿಲ್ಲ.

    ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…

  • ಸುದ್ದಿ

    ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

    ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • ಸುದ್ದಿ

    ಪ್ರಸಿದ್ದ ಆಭರಣ ಶೋರೂಂಗಳ ಮೇಲೆ ಐಟಿ ದಾಳಿ, 125 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ…!

    ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು  ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ  ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ  ದಾಖಲೆ ಇಲ್ಲದ  ಆದಾಯವನ್ನು…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…