ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಆದ್ರೆ ತಮಾಷೆ ಏನಪ್ಪಾ ಅಂದ್ರೆ, ಇಲ್ಲಿರುವ ಕೆಲವು ಗುಣಗಳು ನಮ್ಮಲ್ಲಿದ್ರೆ, ವಿಜ್ಞಾನದ ಪ್ರಕಾರ ನಾವು ನಮಗಿಂತ, ನಾವಂದುಕೊಂಡಿರೋದಕ್ಕಿಂತ ಜಾಸ್ತಿ ಬುದ್ಧಿವಂತ್ರಂತೆ. ಅದು ಹೇಗೆ ಅಂತಿರಾ…..ಮುಂದೆ ಓದಿ
ನಿಮ್ಮಲ್ಲಿ ನೀವೂ ನಕ್ಕು, ನಿಮ್ಮ ಜೊತೆ ಇರೋರನ್ನೂ ನಗಿಸೊ ಸ್ವಭಾವ ಇದ್ದರೆ, ನಿಮ್ಮ ಮೆದುಳು ತುಂಬ ಚನ್ನಾಗಿ ಕೆಲಸ ಮಾಡುತ್ತೆ, ಚುರುಕಾಗಿದೆ ಅಂತ ಅರ್ಥ. 1990 ರಲ್ಲಿ ಮೈಕಲ್ ಎ. ಜಾನ್ ಹೇಳೊ ಪ್ರಕಾರ ನೀವು ಹಾಸ್ಯಭರಿತರಾಗಿದ್ರೆ, ನಿಮ್ಮಲ್ಲಿ ಪ್ರಾಬ್ಲಮ್ ಸಾಲ್ವಿಂಗ್ ಶಕ್ತಿ ಹೆಚ್ಚಂತೆ.
ನಿಮಗೆ ಎಲ್ಲರೂ ಟೆನ್ಷನ್ ಒಳ್ಳೇದಲ್ಲ ಅಂತ ಸುಮಾರ್ ಸರ್ತಿ ಹೇಳಿರ್ತಾರೆ. ಆದರೆ, ಸ್ಟ್ರೆಸ್ನ ಸರಿಯಾಗಿ ನಿಭಾಯಿಸಿದ್ರೆ ಅದರಿಂದ ತುಂಬ ಉಪಯೋಗ ಇದೆಯಂತೆ ಕಣ್ರಿ. ಈ ಸ್ಟ್ರೆಸ್ಸ್ ಲೆವಲ್ ಹಿತ – ಮಿತವಾಗಿದ್ರೆ, ನಮ್ಮ ಎಷ್ಟೋ ದಿನನಿತ್ಯದ ಕೆಲಸಗಳಿಗೆ ಸಹಾಯ ಆಗುತ್ತೆ. ಹಿಂಗೆ ಒಂದು ಸರ್ತಿ, ಇಸ್ರೇಲ್ ಅಲ್ಲಿ ಒಂದ್ಸಲ್ಪ ಜನಕ್ಕೆ ಕಂಪ್ಯೂಟರ್ ಲ್ಯಾಬಲ್ಲಿ ಏನೋ ನೋಡಿ ಅಂತ ಸುಳ್ಳು ಕಂಪ್ಯೂಟರ್ ವೈರಸ್ ಹಬ್ಬಿಸಿಬಿಟ್ರಂತೆ … ಅಲ್ಲಿದವ್ರು ಪಾಪ ಇದನ್ನ ತಾವೇ ಮಾಡಿದ್ದು ಅಂತ ಕಕ್ಕಾಬಿಕ್ಕಿ ಆಗಿ ಅದನ್ನ ಸರಿ ಮಾಡೋ ರೀತಿ ಯೋಚ್ಸಿದ್ರಂತೆ . ಆಗ ಸಂಶೋಧಕರು ಕಂಡು ಹಿಡಿದಿದ್ದೇನಪ್ಪಾ ಅಂದ್ರೆ, ಯಾರು ಟೆನ್ಷನ್ ಮಾಡ್ಕೊಂಡಿದ್ರೋ, ಅವರೇ ಚನ್ನಾಗಿ ಕೆಲಸ ಮುಗಿಸೋದು ಅಂತ. ವಿಚಿತ್ರ ಅಲ್ವಾ?
ನೀವು, ಸ್ಕೂಲು- ಕಾಲೇಜಲ್ಲಿ ನಾನು ಯಾವಾಗ್ಲೂ ಕನಸು ಕಾಣ್ತಾ ಲಾಸ್ಟ್ ಬೆಂಚಲ್ಲೇ ಉಳ್ಕೊಂಡ್ಬಿಟ್ಟೆ… ನನ್ನ ಲೈಫ್ ಏನಾಗತ್ತೋ ಅಂತ ಚಿಂತೆ ಮಾಡಿದ್ರೆ, ಇಲ್ಲಿದೆ ನಿಮ್ಗೊಂದು ಒಳ್ಳೆ ಸುದ್ದಿ. ವಿಜ್ಞಾನಿಗಳ ಪ್ರಕಾರ, ಒಂದು ಕೆಲಸ ಮಾಡೋವಾಗ ನಿಮ್ಮ ಗಮನ ಆ ಕಡೆ ಈ ಕಡೆ ಹೋದ್ರೆ, ಒಂದೇ ಸಲಕ್ಕೆ ನಿಮಗೆ ಒಂದಕ್ಕಿಂತ ಹೆಚ್ಚು ಕೆಲಸ ಮಾಡೊ ಶಕ್ತಿ ಇದೆ ಅಂತಂತೆ. ಹಾಗೇ, ಹಗಲುಗನಸು ಕಾಣೋರಿಗೆ, ನೆನಪಿನ ಶಕ್ತಿ ಜಾಸ್ತಿ .
ನಿಮ್ಮ ಕೈಲಿ ಒಂದು ಪುಸ್ತಕ ಇದ್ದುಬಿಟ್ರೆ, ಲೋಕಾನೇ ಮರೆತುಬಿಡ್ತೀರ…ಇದರ ಜೊತೆಗೆ ಸ್ವಲ್ಪ ಕಾಫಿ ಸಿಕ್ಕಿಬಿಟ್ರಂತೂ, ಸ್ವರ್ಗಕ್ಕೆ ಮೂರೇ ಮೆಟ್ಟಿಲು. ಮತ್ತೇನೂ ಬೇಡ, ಯಾರೂ ಬೇಡ ಅಲ್ವಾ?ನೀವು ನಿಮ್ಮ ಜೊತೇನೆ ಜಾಸ್ತಿ ಸಮಯ ಕಳೆಯಕ್ಕೆ ಇಷ್ಟ ಪಡ್ತೀರ. 90 % ಅಂತರ್ಮುಖಿಗಳಿಗೆ ಓದೋ ಹವ್ಯಾಸ ಉಂಟಂತೆ ಹಾಗೇ,ಯಾರು ಚಿಕ್ಕ ವಯಸ್ಸಿಂದ ಓದೋ ಹವ್ಯಾಸ ಬೆಳೆಸಿಕೊಂಡಿರ್ತಾರೋ ಅಂಥಾವರು, ಮುಂದೆ ಬುದ್ದಿವಂತರಾಗಿರ್ತಾರೆ ಮತ್ತು ತಮ್ಮನ್ನ ಚನ್ನಾಗಿ ವ್ಯಕ್ತಪಡಿಸಿಕೊಳ್ತಾರೆ.
ಎಡಚರಿಗೆ ವಿಭಿನ್ನವಾದ ಯೋಚನಾಶಕ್ತಿ ಇರುತ್ತಂತೆ. 90 ರ ದಶಕದಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ,ಎಡಗೈ ಉಪಯೋಗಿಸೋರ ಆಲೋಚನೆಗಳು ಡಿಫರೆಂಟಾಗಿ ಇರೋದ್ರಿಂದ ಅವರು ಎರಡು ಸಂಬಂಧ ಇಲ್ಲದಿರೊ ವಸ್ತುಗಳಲ್ಲೂ ಲಿಂಕ್ ಹುಡುಕ್ತಾರಂತೆ. ಇವರಲ್ಲಿ ಕ್ರಿಯಾಶೀಲತೆ ಜಾಸ್ತಿ ಮತ್ತು ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಬೇಗ ಒಂದು ಉಪಾಯ ಕಂಡು ಹಿಡೀತಾರೆ.
… ಹಾಗಾದ್ರೆ ಈಗ ಹೇಳಿ ನೀವು ಬುದ್ದಿವಂತರಾ, ಅಲ್ವಾ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.
ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…