News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ತಂತ್ರಜ್ಞಾನ

ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1806

ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ. ಈ ಹಿನ್ನಲೆಯಲ್ಲಿ ಮೊಬೈಲ್ ಮೂಲಕವೇ ಆಧಾರ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡುವ ಪ್ರಯತ್ನ ಇದಾಗಿದೆ.

ಕೇಂದ್ರ ಸರಕಾರವೂ ತನ್ನ ಎಲ್ಲಾ ಸೇವೆಗಳನ್ನು ಪಡೆದುಕೊಳ್ಳುವ ಸಲುವಾಗಿ ಆಧಾರ್ ಪಡೆಯುವುದನ್ನು ಕಡ್ಡಾಯ ಮಾಡುವುದರೊಂದಿಗೆ ಈಗಾಗಲೇ ಪಡೆದುಕೊಂಡಿರುವ ಸೇವೆಗಳಿಗೂ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡುತ್ತಿದೆ. ಇದೇ ಮಾದರಿಯಲ್ಲಿ ಮೊಬೈಲ್ ನಂಬರ್ ನೊಂದಿಗೆ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡುತ್ತಿದೆ.

ಆಧಾರ್ ಲಿಂಕ್ ಮಾಡಲು:-

ಮೊಬೈಲ್ ಸಂಖ್ಯೆಯನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ನೀವು ಎಲ್ಲಿಯೂ ಹೋಗಬೇಕಾದ ಅವಶ್ಯಕತೆ ಇಲ್ಲ. ಇದಕ್ಕಾಗಿ ನಿಮ್ಮ ಮೊಬೈಲ್ ನಿಂದ ಒಂದು ಕರೆಯನ್ನು ಮಾಡಬೇಕಾಗದೆ ಅಷ್ಟೆ. 14546 ಸಂಖ್ಯೆಗೆ ಕರೆ ಮಾಡಬೇಕಾಗಿದ್ದು, ಇದು ಉಚಿತ ಸೇವೆಯಾಗಿದೆ.

ಹಂತ 01:-

ನಿಮ್ಮ ಫೋನಿಂದ 14546 ಸಂಖ್ಯೆಗೆ ಕರೆಯನ್ನು ಮಾಡಬೇಕಾಗಿದೆ. ಮಾಡಿದ ನಂತರದಲ್ಲಿ IVR ದ್ವನಿಯೂ ಕೇಳುವವರೆಗೂ ಕಾಯಬೇಕಾಗಿದೆ.

ಹಂತ 02:-

 

ನಿಮ್ಮ ಕರೆಯೂ ಕನೆಕ್ಟ್ ಆದ ನಂತರದಲ್ಲಿ ನೀವು ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೆಕಾಗಿದೆ. ಅಲ್ಲಿ ಹೇಳುವ ಮಾದರಿಯಲ್ಲಿ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ.

ಹಂತ 04:-

ಇದಾದ ನಂತರದಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡುವಂತೆ ತಿಳಿಸಲಾಗುತ್ತದೆ. ನಂತರ ನಿಮ್ಮ ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡಿರಿ. ಹೀಗೆ ಮಾಡಿದ ನಂತರಲ್ಲಿ ಟೆಲಿಕಾಂ ಆಪರೇಟರ್ ನಿಮ್ಮ ಆಧಾರ್ ಮಾಹಿತಿಯನ್ನು UIDAIಗೆ ವೆರಿಫಿಕೇಷನ್‌ಗೆ ವರ್ಗಾಹಿಸುತ್ತದೆ.

ಹಂತ 05:-

ಇದಾದ ನಂತರದಲ್ಲಿ ಟೆಲಿಕಾಂ ಆಪರೇಟರ್ ನಿಮಗೊಂದು OTPಯನ್ನು ಕಳುಹಿಸಲಿದ್ದು, ನೀವು ಕರೆಯಲ್ಲಿ ಇರುವ ಸಂದರ್ಭದಲ್ಲಿಯೇ ಈ OTPಯನ್ನು ಡಯಲ್ ಮಾಡಬೇಕಾಗಿದೆ. ಹೀಗೆ ಮಾಡಿದ ನಂತರದಲ್ಲಿ ನಿಮ್ಮ ಮೊಬೈಲ್ ಲಿಂಕ್ ಆಗಿರುದಕ್ಕೆ ಧೃಡೀಕರಣ SMS ಬರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

    ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

  • ಸುದ್ದಿ

    ಹೆತ್ತ ತಾಯಿಗೆ ಈ ಮಗ ಮಾಡಿರುವ ಕೆಲಸ ಕೇಳಿದ್ರೆ ನೀವೂ ಬೆಚ್ಚಿ ಬೀಳ್ತೀರಾ..

    ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…

  • ಸುದ್ದಿ

    ಜಗತ್ತನ್ನ ಆಳಲು ಸಿದ್ದವಾಗಿವೆ ಟೆಕ್ನಾಲಜಿ ಕಂಪನಿಗಳು…!

    ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…

  • ಸುದ್ದಿ

    ಕುರುಕ್ಷೇತ್ರ ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷತೆ, ಏನೆಂದು ತಿಳಿಯಿರಿ?

    ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…