ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ.

ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ.

ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ. ನಿಮ್ಮ ಉಗುರಿನ ಬುಡಕ್ಕೆ ಅರ್ಧ ಚಂದ್ರನ ಆಕೃತಿಯಿದ್ದರೆ ಶಾಸ್ತ್ರದ ಪ್ರಕಾರ ನೀವು ಬುದ್ದಿವಂತರಂತೆ. ಬಹಳ ಪ್ರಬಲರು ಎಂದು ಶಾಸ್ತ್ರ ಹೇಳುತ್ತದೆ.

ಉಗುರಿನ ಮೇಲೆ ಅರ್ಧ ಚಂದ್ರನ ಆಕಾರವಿದ್ದರೆ ಜೀವನದಲ್ಲಿ ಎಂದೂ ಆರ್ಥಿಕ ಸಂಕಟ ಎದುರಾಗುವುದಿಲ್ಲವಂತೆ. ಹಣದ ಕೊರತೆ ಎಂದೂ ಕಾಡುವುದಿಲ್ಲವಂತೆ. ಜೀವನದಲ್ಲಿ ಸದಾ ನಗು, ಸಮೃದ್ಧಿ ನೆಲೆಸಿರುತ್ತದೆಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…