News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನಿಮ್ಮ ಎಲ್ಲಾ ಕಾಯಿಲೆಗಳಿಗೆ ಔಷಧಿಗಳು ಅಡುಗೆ ಮನೆಯಲ್ಲಿ ದೊರೆಯುತ್ತವೆ! ತಿಳಿಯಲು ಈ ಲೇಖನ ಓದಿ…

867

ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ…

ಅಡುಗೆ ಮನೆ ಔಷಧಾಲಯ:-

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿ:-

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.

ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

 

ಸಾಸಿವೆ:

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ :

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಜೀರಿಗೆ :

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಕೊತ್ತಂಬರಿ (ಧನಿಯಾ) :

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

 

ಬೆಳ್ಳುಳ್ಳಿ :

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅರಿಶಿಣ:

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.

ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.

ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್‌ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.

ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದುಡ್ಡಿನ ಆಸೆಗಾಗಿ ಹೆಣ್ಣನ್ನು ಅಶ್ಲೀಲವಾಗಿ ತೋರಿಸ್ತೀರಾ…, ‘ಐ ಲವ್ ಯು’ ಟೀಂ ವಿರುದ್ಧ ವೆಂಕಟ್ ಕಿಡಿ…!

    ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…

  • ಸುದ್ದಿ

    ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ ಜಿಯೋ..!

    ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್‌ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್‌ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ರೈಡ್!ಅಲ್ಲಿ ಸಿಕ್ಕಿದ್ದು ಏನು ಗೊತ್ತಾ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್‍ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್‍ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading