ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.
ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.
ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.
ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.
ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…