ಉಪಯುಕ್ತ ಮಾಹಿತಿ

ನಿಮ್ಮ ಎಲ್ಲಾ ಕಾಯಿಲೆಗಳಿಗೆ ಔಷಧಿಗಳು ಅಡುಗೆ ಮನೆಯಲ್ಲಿ ದೊರೆಯುತ್ತವೆ! ತಿಳಿಯಲು ಈ ಲೇಖನ ಓದಿ…

861

ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ…

ಅಡುಗೆ ಮನೆ ಔಷಧಾಲಯ:-

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿ:-

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.

ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

 

ಸಾಸಿವೆ:

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ :

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಜೀರಿಗೆ :

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಕೊತ್ತಂಬರಿ (ಧನಿಯಾ) :

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

 

ಬೆಳ್ಳುಳ್ಳಿ :

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅರಿಶಿಣ:

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.

ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.

ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್‌ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.

ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

    ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….

  • ಸಂಬಂಧ

    ವರದಕ್ಷಿಣೆ ಬೇಡಿಕೆ ನೀಡಿದ ವರನ ಕುಟುಂಬದವರಿಗೆ ,ಮದುವೆಯಲ್ಲಿ ‘ವಧು’ ನೀಡಿದ ಶಾಕ್ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…

  • ಉಪಯುಕ್ತ ಮಾಹಿತಿ

    ರಾವಣ ಸಾಯೋಕೆ ಮುಂಚೆ ಲಕ್ಶ್ಮಣನಿಗೆ ಕಲಿಯುಗದ ಬಗ್ಗೆ ಹೇಳಿದ ಘೋರ ಸತ್ಯ. ಏನದು ಗೊತ್ತಾ?

    ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ  ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…

  • govt, modi, ತಂತ್ರಜ್ಞಾನ

    ಹೊಸ ವರ್ಷಕ್ಕೆ ಹೊಸ ಕೊಡುಗೆ: 2018 ಕ್ಕೆ ದೇಶಿ ಜಿಪಿಎಸ್ ಹೊಂದಲಿರುವ ನಮ್ಮ ಭಾರತ!

    ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading