News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ಎಲ್ಲಾ ಕಾಯಿಲೆಗಳಿಗೆ ಔಷಧಿಗಳು ಅಡುಗೆ ಮನೆಯಲ್ಲಿ ದೊರೆಯುತ್ತವೆ! ತಿಳಿಯಲು ಈ ಲೇಖನ ಓದಿ…

862

ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ…

ಅಡುಗೆ ಮನೆ ಔಷಧಾಲಯ:-

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿ:-

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.

ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

 

ಸಾಸಿವೆ:

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ :

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಜೀರಿಗೆ :

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಕೊತ್ತಂಬರಿ (ಧನಿಯಾ) :

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

 

ಬೆಳ್ಳುಳ್ಳಿ :

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅರಿಶಿಣ:

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.

ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.

ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್‌ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.

ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

    ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…

  • ವಿಚಿತ್ರ ಆದರೂ ಸತ್ಯ

    ಹೆಂಡ್ತಿ ಮಾತು ಕೇಳಿ, ಇಲ್ಲಂದ್ರೆ ನಿಮಗೆ, ನಿಮ್ಮ ಗಡ್ಡಕ್ಕೆ ಅನಾಹುತ ತಪ್ಪಿದ್ದಲ್ಲ !!!

    ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • ಗ್ಯಾಜೆಟ್

    ಫ್ಲಿಪ್‌ಕಾರ್ಟಿನಲ್ಲಿ ರೂ.799ಕ್ಕೆ ನೋಕಿಯಾ 3310 ಕ್ಲೋನ್ ಪೋನ್..!!!!

    ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…