ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.
ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.
ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.
ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.
ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…