ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ. ಈ ಹಿನ್ನಲೆಯಲ್ಲಿ ಸಾಮಾನ್ಯ ಜನರು ಆಫ್ ಲೈನ್ ಮಾರುಕಟ್ಟೆಗಿಂತಲೂ ಆನ್ಲೈನ್ ಮಾರುಕಟ್ಟೆಯನ್ನು ಹೆಚ್ಚು ಅವಲಂಬನೆ ಮಾಡುತ್ತಿದ್ದಾರೆ.

ಆದರೆ ಆನ್ಲೈನಿನಲ್ಲಿ ನಕಲಿ ಫೋನ್ಗಳ ಹಾವಳಿಯೂ ಇತ್ತೀಚಿನ ದಿನಗಳಲ್ಲಿ ಅಧಿಕಾವಾಗುತ್ತಿದ್ದು, ಗ್ರಾಹಕರಿಗೆ ಅವು ನಕಲಿಯೇ ಅಸಲಿಯೇ ಎಂಬುದು ತಿಳಿಯುತ್ತಿಲ್ಲ. ಯಾವುದೇ ಫೋನ್ಗಳು ಅಸಲಿಯಾಗಿದ್ದರೇ ಅದರಲ್ಲಿ IMEI ಅಥಾವ MEID ಸಂಖ್ಯೆಗಳು ಇರಬೇಕು. ಇದು ಇದ್ದರೇ ಮಾತ್ರವೇ ನಿಮ್ಮ ಫೋನ್ ಅಸಲಿ ಎಂದು ಗುರುತಿಸಬಹುದಾಗಿದೆ. ಹಾಗಾಗಿ ನಿಮ್ಮ ಫೋನ್ ಅಸಲಿಯೇ ಅಥಾವ ನಕಲಿಯೇ ಎಂಬುದನ್ನು ನೀವೆ ತಿಳಿಯುವುದು ಹೇಗೆ ಎಂಬುದನ್ನು ತಿಳಿಸುವ ಪ್ರಯತ್ನವು ಇದಾಗಿದೆ.


ನಿಮ್ಮ ಸ್ಮಾರ್ಟ್ಫೋನಿನ ಡಯಲ್ ಪ್ಯಾಡಿನಲ್ಲಿ *#06# ಡಯಲ್ ಮಾಡುವ ಮೂಲಕ ನಿಮ್ಮ ಫೋನಿನ IMEI ಅಥಾವ MEID ಸಂಖ್ಯೆಯನ್ನು ನೀವು ತಿಳಿದುಕೊಳ್ಳಬಹುದಾಗಿದೆ. ಇದರಿಂದ ನಿಮ್ಮ ಫೋನ್ ಅಸಲಿ ಇಲ್ಲವೇ ನಕಲಿ ಎಂಬುದು ತಿಳಿಯಲಿದೆ.

IMEI ಅಥಾವ MEID ಸಂಖ್ಯೆ ಐಪೋನಿನ ಹಿಂಭಾಗದಲ್ಲಿ ದಾಖಲಿಸಲಾಗಿರುತ್ತದೆ. ಇದಕ್ಕಾಗಿ ನೀವು ಯಾವುದೇ ಶ್ರಮ ಪಡುವ ಅಗತ್ಯವೇ ಇರುವುದಿಲ್ಲ. ಫೋನಿನ ಹಿಂಭಾಗದಲ್ಲಿ ಆಪಲ್ IMEI ಅಥಾವ MEID ಸಂಖ್ಯೆಯನ್ನು ದಾಖಲಿಸಲಿದೆ.

ನಿಮ್ಮ ಐಪೋನಿನಲ್ಲಿರುವ ಸಿಮ್ ಕಾರ್ಡ್ ಟ್ರೈ ನಲ್ಲಿಯೂ ನೀವು IMEI ಅಥಾವ MEID ಸಂಖ್ಯೆಯನ್ನು ಕಾಣಬಹುದಾಗಿದೆ. ನೂತನ ಫೋನ್ಗಳಲ್ಲಿ ಇದೇ ಮಾದರಿಯಲ್ಲಿ ಇರಲಿದೆ.
ಆಂಡ್ರಾಯ್ಡ್ ಫೋನಿನ ಸೆಟ್ಟಿಂಗ್ಸ್ನಲ್ಲಿರುವ ಎಬೋಟ್ ಫೋನಿನ ಆಯ್ಕೆಯಲ್ಲಿ ಸೆಟ್ಟಸ್ ನಲ್ಲಿ ನೀವು ನಿಮ್ಮ ಪೋನಿನ IMEI ಅಥಾವ MEID ಸಂಖ್ಯೆಯನ್ನು ತಿಳಿದುಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.