News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

5661

ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

ಕಣ್ಣು ಮುಚ್ಚಾಲೆ : ಇದು Hide and Seek ಗೆ ಹೋಲಿಸಬಹುದು, ಇದು ಮಕ್ಕಳ ಆಟ, ಇದನ್ನು ಸುಮಾರು ಐದರಿ೦ದ ಹತ್ತು ಮಕ್ಕಳಗು೦ಪು ಆಡಬಹುದು, ಗೋಡೆಗೆ ಮುಖ ಮಾಡಿ ಕಣ್ಣು ಮುಚ್ಚಿಕೊ೦ಡು ಒ೦ದರಿ೦ದ ನೂರರವರೆಗೆ ಎಣಿಸುತ್ತಿರುವಾಗ ಉಳಿದವರು ಹೋಗಿ ಬಚ್ಚಿಟ್ಟುಕೊಳ್ಳಬೇಕು. ಎಣಿಕೆ ಮುಗಿದನ೦ತರ ಬಚ್ಚಿಟ್ಟುಕೊ೦ಡಿರುವವರನ್ನು ಹುಡುಕಿ ಅವರ ಹೆಸರನ್ನು ಕೂಗಿ ಗೋಡೆಗೆ ಕೈ ತಾಕಿಸಬೇಕು.

ಬುಗುರಿ : ಈ ಆಟವನ್ನು ಸಾಮಾನ್ಯವಾಗಿ ಗಂಡು ಮಕ್ಕಳು ಹಳ್ಳಿಗಳಲ್ಲಿ ಬುಗುರಿ ಆಟವನ್ನು ಹೆಚ್ಚಾಗಿ ಆಡುತ್ತಾರೆ. ಈ ಬುಗುರಿ ಆಟಕ್ಕೆ ಇತಿಹಾಸದ ಹಿನ್ನೆಲೆ ಸಮೃದ್ದಿಯಾಗಿ ಮಹಾಭಾರತ ಕಥೆಯಲ್ಲಿ ಪಾಂಡವರು ಮತ್ತು ಕೌರವರು ಆಟದ ಸನ್ನಿವೇಶದಲ್ಲಿ ಕಾಣಿಸುತ್ತದೆ.

ಹಳ್ಳಿಗಳಲ್ಲಿ ಈಗಲೂ ಕೆಲುವು ಕಡೆ ಈ ಆಟದ ಕುರುಹು ಕಾಣಬರುತ್ತದೆ. ಉದಾ: ಗೌರಿಬಿದನೂರಿನ ತಾಲೂಕಿನ ಮಂಚೇನ ಹಳ್ಳಿಯಾ ” ಭೀಮನ ಬುಗುರಿ (ಬೆಟ್ಟ).

ಈ ಆಟದ ನಿಯಮ ಈ ರೀತಿ : ಮೊದಲು ಹುಡಗರು ಬುಗುರಿಯನ್ನು ದಾರದಿಂದ ಹೊಸೆದ ಚಾಟಿಯನ್ನು ಸುತ್ತಿ ಆಟದಲ್ಲಿ ಇರುವ ಹುಡುಗುರು ಬಂಗರವನ್ನು ಸ್ಪರ್ಶಿಸಿ ತಕ್ಷಣ ನೆಲಕ್ಕೆ ಹಾಕಿ ನಂತರ ಚಾಟಿಯ ಸಹಾಯದಿಂದ ಯಾರು ಕ್ಯಲ್ಲಿ ಹಿಡಿಯುತ್ತಾರು… ಅವರು ಆಟ ಆಡಲು ಸಿದ್ದವಾಗುತ್ತಾರೆ. ಅಂತಿಮವ ಬುಗುರಿಯನ್ನು ನೆಲದಲ್ಲಿ ಇಡುತ್ತಾನೆ. ಮಿಕ್ಕವರು ನೆಲದಲ್ಲಿ ಬಿದ್ದ ಬುಗುರಿಗೆ ಗುರಿ ಇಟ್ಟು ಹೋಡೆದು ಗುನ್ನ (ತೂತು) ಮಾಡುತ್ತಾರೆ.

ಹೀಗೆಯೇ ಆಟ ಮುಂದುವರೆಯುತ್ತದೆ. ಈ ಆಟದಲ್ಲಿ ಬುಗುರಿಗಳು ಎರಡು ಹೋಳು ಆಗುವುದು ಸರ್ವೇ ಸಾಮಾನ್ಯ. ನೆಲಕ್ಕೆ ಬುಗುರಿ ಬೀಳದ ಹಾಗೆ ಕ್ಯೆಲ್ಲಿ ಹಿಡಿದರೆ ಅದಕ್ಕೆ “ಅಂತರ ಮಂಗ” ಎನ್ನುತ್ತಾರೆ. ಆಟಗಾರನ ಅನುಭವದಿಂದ ಬುಗುರಿಯನ್ನು ಅನೇಕ ರೀತಿ ಆಡಿಸುತ್ತಾನೆ.

ಕುಂಟು ಬಿಲ್ಲೆ : ಇದು ಚಿಕ್ಕ ಹೆಣ್ಣು ಮಕ್ಕಳು ಆಡುವ ಆಟ. ಚೌಕಾಕಾರಾದ ಮನೆಗಳನ್ನು ಬರೆದು ಮನೆಯಿಂದ ಮನೆಗೆ ಕುಣಿಯುತ್ತ ಆಡುವ ಆಟ

ಚಿನ್ನಿ ದಾಂಡು : ಚಿನ್ನಿ ದಾಂಡು ಅಥವಾ ಗಿಲ್ಲಿ ದಾಂಡು ಅಥವಾ ಹಾಣೆ ಗೆಂಡೆ ಅಥವಾ ಚಿನ್ನಿ ಕೋಲು ಒಂದು ಜನಪ್ರಿಯ ಗ್ರಾಮೀಣ ಆಟ. ಇದರಲ್ಲಿ ಮರದ ಕೋಲಿನಿಂದ ಮಾಡಿದ ಒಂದು ಚಿಕ್ಕ ಚಿನ್ನಿ ಅಥವಾ ಗಿಲ್ಲಿ ಅಥವಾ ಹಾಣೆ ಮತ್ತು ಸ್ವಲ್ಪ ದೊಡ್ಡದಾದ ಒಂದು ದಾಂಡು ಅಥವಾ ಕೋಲು ಇವುಗಳ ಸಹಾಯದಿಂದ ಆಡಲಾಗುತ್ತದೆ . ಇದನ್ನು ವೈಯಕ್ತಿಕವಾಗಿ ಅಥವಾ ತಂಡಗಳಾಗಿ ಆಡಬಹುದು.

ವ್ಯವಸ್ಥೆ/ಸಲಕರಣೆಗಳು : ಆಡಲು ಸಾಕಷ್ಟು ಜಾಗ.

ಸುಮಾರು ಒಂದು ಗೇಣು ಉದ್ದದ ನೆಲದ ಮೇಲೆ ಕೊರೆದ ಒಂದು ಗುಂಡಿ / ಕುಳಿ / ಉಳ್ಳ.

ಗುಂಡಿಯಷ್ಟೇ ಉದ್ದವಾದ ಮರದ ಕೋಲಿನಿಂದ ಮಾಡಿದ ಚಿನ್ನಿ / ಹಾಣೆ / ಗಿಲ್ಲಿ. ಇದರ ಎರಡೂ ಬದಿ ಚೂಪಾಗಿರಬೇಕು.

ಚಿನ್ನಿಗಿಂತ ಕನಿಷ್ಠ ಎರಡೂವರೆ-ಮೂರು ಪಟ್ಟು ಉದ್ದವಾದ, ಮರದ ಕೋಲಿನಿಂದ ಮಾಡಿದ ನೇರವಾದ ದಾಂಡು.

ಲಗೋರಿ : ಲಗೋರಿ !!! ಅಂತ ಕಿರುಚಿದಾಗ ಮೈ ಎಲ್ಲ ಜುಮ್ ಅನ್ನುವುದು. ನಮ್ಮ ನಾಡಿನಲ್ಲಿ ಹಲವಾರು ವರ್ಷಗಳಿಂದ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಯಂಕಾಲ ಎಲ್ಲರೂ ಜೊತೆಗೂಡಿ ಆಡುತ್ತಿದ್ದ ಆಟ ಲಗೋರಿ. ಈಗ ಲಗೋರಿ ಆಡುವವರು ಅತಿ ಕಡಿಮೆ, ಗ್ರಾಮ್ಯ ಪ್ರದೇಶಗಳಲ್ಲಿ ಮಾತ್ರ ಸಿಗುವವರು.

ಈ ಆಟವನ್ನು ಇಬ್ಬರಿಗಿಂತ ಹೆಚ್ಚಾಗಿ ಎಷ್ಟು ಜನರು ಕೂಡ ಆಡಬಹುದು. ಅವರನ್ನು ಎರಡು ತಂಡಗಳಲ್ಲಿ ವಿಭಜಿಸಿವವರು. ಮೊದಲನೆಯ ತಂಡದವರು ೭ ರಿಂದ ೯ ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸುವರು. ಹಾಗೆ ಜೋಡಿಸಿದ ಕಲ್ಲುಗಳಿಗೆ ಸ್ವಲ್ಪದೂರದಿಂದ ಮತ್ತೊಂದು ತಂಡದವರು ಒಂದು ಚೆಂಡನ್ನು ಎಸೆಯುವರು. ಆ ಚೆಂಡು ತಾಗಿ ಕಲ್ಲುಗಳು ಚದುರಿದಾಗ, ಮೊದಲನೆಯ ತಂಡದವರು ಅದನ್ನು ಮತ್ತೆ ಯಥಾಸ್ಥಿತಿಗೆ ತರಲು ಪ್ರಯತ್ನಿಸುವರು. ಅದನ್ನು ತಡೆಯುವುದೇ ಎದುರಾಳಿ ತಂಡದ ಗುರಿ.

ಮೊದಲನೆಯ ತಂಡದವರು ಆ ಕಲ್ಲುಗಳನ್ನು ಜೋಡಿಸುವ ಪ್ರಯತ್ನದಲ್ಲಿರುವಾಗ ಎದುರಾಳಿ ತಂಡದವರು ಆ ಚೆಂಡನ್ನು ಯಾರೊಬ್ಬರಿಗೆ ತಾಗುವಂತೆ ಎಸೆದರೆ, ತಾಗಿದಾತ ಆಟದಿಂದ ಹೊರಗೆ ಹೋಗುತ್ತಾನೆ. ಹೀಗೆ ಎದುರಾಳಿಯ ಪ್ರತಿಯೊಬ್ಬರನ್ನು ಆಟದಿಂದ ಹೊರ ಕಳುಹಿಸುವುದೇ ಆಟದ ಗುರಿ. ಈ ಸಮಯದಲ್ಲಿ ಎದುರಾಳಿ ತಂಡವೇನಾದರು ಕಲ್ಲುಗಳನ್ನು ಜೋಡಿಸುವುದರಲ್ಲಿ ಯಶಸ್ವಿಯಾದಲ್ಲಿ ಆ ತಂಡವೇ ಈ ಆಟದಲ್ಲಿ ವಿಜಯಿಗಳು.

ಚನ್ನೆಮಣೆ : ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು. ಮತ್ತೆ ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು… ಹೀಗೆ ಸಾಗುತ್ತದೆ ಚನ್ನೆಮನೆ ಆಟ. ಎರಡು ಆಟಗಾರರು, ಪ್ರತಿಯೊಬ್ಬರಿಗೂ ೭ ಮನೆಗಳು. ಪ್ರತೀ ಮನೆಗಳಲ್ಲೂ ೪ ಕಾಳುಗಳು. ಮೊದಲು ಆಟ ಶುರುಮಾಡಿದವ ತನ್ನ ೭ ಮನೆಗಳಲ್ಲಿ ಯಾವುದಾದರೊಂದು ಮನೆಯನ್ನು ಆಯ್ದುಕೊಂಡು ಅದರಲ್ಲಿರುವ ೪ ಕಾಳುಗಳನ್ನು ತನ್ನ ಹಾಗೂ ತನ್ನ ಸಹ ಆಟಗಾರನ ಮನೆಗಳಿಗೆ ಹಂಚುತ್ತಾ ಹೋಗಬೇಕು.

ಹೀಗೆ ಹಂಚುತ್ತಾ ಹೋಗುವಾಗ ಮತ್ತೆ ೪ ಕಾಳುಗಳು ಒಟ್ಟುಗೂಡಿದರೆ ಮನೆಯಲ್ಲಿ ಕರು ಹಾಕಿತೆಂದೂ, ಆ ಕರು ಮನೆಯ ಯಜಮಾನನ (ಆ ೭ ಮನೆಯ ಆಟಗಾರ ಮನೆ ಒಡೆಯ) ಸ್ವತ್ತೆಂದೂ, ಅವನು ಅದನ್ನು ತೆಗೆದಿರಿಸಿಕೊಳ್ಳುತ್ತಾನೆ. ಒಬ್ಬನ ಆಟ ಮುಗಿಯುವುದು ಆತನ ಕೈಯಲ್ಲಿರುವ ಕಾಳುಗಳು ಖಾಲಿಯಾಗಿ, ಮುಂದೆ ಕಾಳಿರದ ಬರಿಯ ಖಾಲಿ ಮನೆಗಳು ಸಿಕ್ಕಾಗ….

ಹೀಗೆ ಚದುರಿಸಿ ಹಂಚುವ, ಕೂಡಿಸುವ ಆಟದಲ್ಲಿ ಯಾರಾದರೊಬ್ಬರು ಗೆಲ್ಲುತಾರೆ (ಹೆಚ್ಹು ಕಾಳನ್ನು ಕೂಡಿ ಹಾಕಿದವನು).

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

    ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

    ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

  • ಆರೋಗ್ಯ

    ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!

    ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು  ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…

  • ಸುದ್ದಿ

    ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

    ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….

  • inspirational

    ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?

    ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ತಯಾರಿಸುವುದು ಹೇಗೆ.?ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ  ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…

  • ಸುದ್ದಿ

    ಭಾರತೀಯ ಸೇನೆ ಪಾಕ್ ನೆಲದಲ್ಲಿ ದಾಳಿ ನಡೆಸಿದ ವೇಳೆ ನರೇಂದ್ರ ಮೋದಿ ಏನ್ ಮಾಡ್ತಾ ಇದ್ರು ಗೊತ್ತಾ..?

    ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….