ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಕಣ್ಣು ಮುಚ್ಚಾಲೆ : ಇದು Hide and Seek ಗೆ ಹೋಲಿಸಬಹುದು, ಇದು ಮಕ್ಕಳ ಆಟ, ಇದನ್ನು ಸುಮಾರು ಐದರಿ೦ದ ಹತ್ತು ಮಕ್ಕಳಗು೦ಪು ಆಡಬಹುದು, ಗೋಡೆಗೆ ಮುಖ ಮಾಡಿ ಕಣ್ಣು ಮುಚ್ಚಿಕೊ೦ಡು ಒ೦ದರಿ೦ದ ನೂರರವರೆಗೆ ಎಣಿಸುತ್ತಿರುವಾಗ ಉಳಿದವರು ಹೋಗಿ ಬಚ್ಚಿಟ್ಟುಕೊಳ್ಳಬೇಕು. ಎಣಿಕೆ ಮುಗಿದನ೦ತರ ಬಚ್ಚಿಟ್ಟುಕೊ೦ಡಿರುವವರನ್ನು ಹುಡುಕಿ ಅವರ ಹೆಸರನ್ನು ಕೂಗಿ ಗೋಡೆಗೆ ಕೈ ತಾಕಿಸಬೇಕು.
ಬುಗುರಿ : ಈ ಆಟವನ್ನು ಸಾಮಾನ್ಯವಾಗಿ ಗಂಡು ಮಕ್ಕಳು ಹಳ್ಳಿಗಳಲ್ಲಿ ಬುಗುರಿ ಆಟವನ್ನು ಹೆಚ್ಚಾಗಿ ಆಡುತ್ತಾರೆ. ಈ ಬುಗುರಿ ಆಟಕ್ಕೆ ಇತಿಹಾಸದ ಹಿನ್ನೆಲೆ ಸಮೃದ್ದಿಯಾಗಿ ಮಹಾಭಾರತ ಕಥೆಯಲ್ಲಿ ಪಾಂಡವರು ಮತ್ತು ಕೌರವರು ಆಟದ ಸನ್ನಿವೇಶದಲ್ಲಿ ಕಾಣಿಸುತ್ತದೆ.
ಹಳ್ಳಿಗಳಲ್ಲಿ ಈಗಲೂ ಕೆಲುವು ಕಡೆ ಈ ಆಟದ ಕುರುಹು ಕಾಣಬರುತ್ತದೆ. ಉದಾ: ಗೌರಿಬಿದನೂರಿನ ತಾಲೂಕಿನ ಮಂಚೇನ ಹಳ್ಳಿಯಾ ” ಭೀಮನ ಬುಗುರಿ (ಬೆಟ್ಟ).
ಈ ಆಟದ ನಿಯಮ ಈ ರೀತಿ : ಮೊದಲು ಹುಡಗರು ಬುಗುರಿಯನ್ನು ದಾರದಿಂದ ಹೊಸೆದ ಚಾಟಿಯನ್ನು ಸುತ್ತಿ ಆಟದಲ್ಲಿ ಇರುವ ಹುಡುಗುರು ಬಂಗರವನ್ನು ಸ್ಪರ್ಶಿಸಿ ತಕ್ಷಣ ನೆಲಕ್ಕೆ ಹಾಕಿ ನಂತರ ಚಾಟಿಯ ಸಹಾಯದಿಂದ ಯಾರು ಕ್ಯಲ್ಲಿ ಹಿಡಿಯುತ್ತಾರು… ಅವರು ಆಟ ಆಡಲು ಸಿದ್ದವಾಗುತ್ತಾರೆ. ಅಂತಿಮವ ಬುಗುರಿಯನ್ನು ನೆಲದಲ್ಲಿ ಇಡುತ್ತಾನೆ. ಮಿಕ್ಕವರು ನೆಲದಲ್ಲಿ ಬಿದ್ದ ಬುಗುರಿಗೆ ಗುರಿ ಇಟ್ಟು ಹೋಡೆದು ಗುನ್ನ (ತೂತು) ಮಾಡುತ್ತಾರೆ.
ಹೀಗೆಯೇ ಆಟ ಮುಂದುವರೆಯುತ್ತದೆ. ಈ ಆಟದಲ್ಲಿ ಬುಗುರಿಗಳು ಎರಡು ಹೋಳು ಆಗುವುದು ಸರ್ವೇ ಸಾಮಾನ್ಯ. ನೆಲಕ್ಕೆ ಬುಗುರಿ ಬೀಳದ ಹಾಗೆ ಕ್ಯೆಲ್ಲಿ ಹಿಡಿದರೆ ಅದಕ್ಕೆ “ಅಂತರ ಮಂಗ” ಎನ್ನುತ್ತಾರೆ. ಆಟಗಾರನ ಅನುಭವದಿಂದ ಬುಗುರಿಯನ್ನು ಅನೇಕ ರೀತಿ ಆಡಿಸುತ್ತಾನೆ.
ಕುಂಟು ಬಿಲ್ಲೆ : ಇದು ಚಿಕ್ಕ ಹೆಣ್ಣು ಮಕ್ಕಳು ಆಡುವ ಆಟ. ಚೌಕಾಕಾರಾದ ಮನೆಗಳನ್ನು ಬರೆದು ಮನೆಯಿಂದ ಮನೆಗೆ ಕುಣಿಯುತ್ತ ಆಡುವ ಆಟ
ಚಿನ್ನಿ ದಾಂಡು : ಚಿನ್ನಿ ದಾಂಡು ಅಥವಾ ಗಿಲ್ಲಿ ದಾಂಡು ಅಥವಾ ಹಾಣೆ ಗೆಂಡೆ ಅಥವಾ ಚಿನ್ನಿ ಕೋಲು ಒಂದು ಜನಪ್ರಿಯ ಗ್ರಾಮೀಣ ಆಟ. ಇದರಲ್ಲಿ ಮರದ ಕೋಲಿನಿಂದ ಮಾಡಿದ ಒಂದು ಚಿಕ್ಕ ಚಿನ್ನಿ ಅಥವಾ ಗಿಲ್ಲಿ ಅಥವಾ ಹಾಣೆ ಮತ್ತು ಸ್ವಲ್ಪ ದೊಡ್ಡದಾದ ಒಂದು ದಾಂಡು ಅಥವಾ ಕೋಲು ಇವುಗಳ ಸಹಾಯದಿಂದ ಆಡಲಾಗುತ್ತದೆ . ಇದನ್ನು ವೈಯಕ್ತಿಕವಾಗಿ ಅಥವಾ ತಂಡಗಳಾಗಿ ಆಡಬಹುದು.
ವ್ಯವಸ್ಥೆ/ಸಲಕರಣೆಗಳು : ಆಡಲು ಸಾಕಷ್ಟು ಜಾಗ.
ಸುಮಾರು ಒಂದು ಗೇಣು ಉದ್ದದ ನೆಲದ ಮೇಲೆ ಕೊರೆದ ಒಂದು ಗುಂಡಿ / ಕುಳಿ / ಉಳ್ಳ.
ಗುಂಡಿಯಷ್ಟೇ ಉದ್ದವಾದ ಮರದ ಕೋಲಿನಿಂದ ಮಾಡಿದ ಚಿನ್ನಿ / ಹಾಣೆ / ಗಿಲ್ಲಿ. ಇದರ ಎರಡೂ ಬದಿ ಚೂಪಾಗಿರಬೇಕು.
ಚಿನ್ನಿಗಿಂತ ಕನಿಷ್ಠ ಎರಡೂವರೆ-ಮೂರು ಪಟ್ಟು ಉದ್ದವಾದ, ಮರದ ಕೋಲಿನಿಂದ ಮಾಡಿದ ನೇರವಾದ ದಾಂಡು.
ಲಗೋರಿ : ಲಗೋರಿ !!! ಅಂತ ಕಿರುಚಿದಾಗ ಮೈ ಎಲ್ಲ ಜುಮ್ ಅನ್ನುವುದು. ನಮ್ಮ ನಾಡಿನಲ್ಲಿ ಹಲವಾರು ವರ್ಷಗಳಿಂದ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಯಂಕಾಲ ಎಲ್ಲರೂ ಜೊತೆಗೂಡಿ ಆಡುತ್ತಿದ್ದ ಆಟ ಲಗೋರಿ. ಈಗ ಲಗೋರಿ ಆಡುವವರು ಅತಿ ಕಡಿಮೆ, ಗ್ರಾಮ್ಯ ಪ್ರದೇಶಗಳಲ್ಲಿ ಮಾತ್ರ ಸಿಗುವವರು.
ಈ ಆಟವನ್ನು ಇಬ್ಬರಿಗಿಂತ ಹೆಚ್ಚಾಗಿ ಎಷ್ಟು ಜನರು ಕೂಡ ಆಡಬಹುದು. ಅವರನ್ನು ಎರಡು ತಂಡಗಳಲ್ಲಿ ವಿಭಜಿಸಿವವರು. ಮೊದಲನೆಯ ತಂಡದವರು ೭ ರಿಂದ ೯ ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸುವರು. ಹಾಗೆ ಜೋಡಿಸಿದ ಕಲ್ಲುಗಳಿಗೆ ಸ್ವಲ್ಪದೂರದಿಂದ ಮತ್ತೊಂದು ತಂಡದವರು ಒಂದು ಚೆಂಡನ್ನು ಎಸೆಯುವರು. ಆ ಚೆಂಡು ತಾಗಿ ಕಲ್ಲುಗಳು ಚದುರಿದಾಗ, ಮೊದಲನೆಯ ತಂಡದವರು ಅದನ್ನು ಮತ್ತೆ ಯಥಾಸ್ಥಿತಿಗೆ ತರಲು ಪ್ರಯತ್ನಿಸುವರು. ಅದನ್ನು ತಡೆಯುವುದೇ ಎದುರಾಳಿ ತಂಡದ ಗುರಿ.
ಮೊದಲನೆಯ ತಂಡದವರು ಆ ಕಲ್ಲುಗಳನ್ನು ಜೋಡಿಸುವ ಪ್ರಯತ್ನದಲ್ಲಿರುವಾಗ ಎದುರಾಳಿ ತಂಡದವರು ಆ ಚೆಂಡನ್ನು ಯಾರೊಬ್ಬರಿಗೆ ತಾಗುವಂತೆ ಎಸೆದರೆ, ತಾಗಿದಾತ ಆಟದಿಂದ ಹೊರಗೆ ಹೋಗುತ್ತಾನೆ. ಹೀಗೆ ಎದುರಾಳಿಯ ಪ್ರತಿಯೊಬ್ಬರನ್ನು ಆಟದಿಂದ ಹೊರ ಕಳುಹಿಸುವುದೇ ಆಟದ ಗುರಿ. ಈ ಸಮಯದಲ್ಲಿ ಎದುರಾಳಿ ತಂಡವೇನಾದರು ಕಲ್ಲುಗಳನ್ನು ಜೋಡಿಸುವುದರಲ್ಲಿ ಯಶಸ್ವಿಯಾದಲ್ಲಿ ಆ ತಂಡವೇ ಈ ಆಟದಲ್ಲಿ ವಿಜಯಿಗಳು.
ಚನ್ನೆಮಣೆ : ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು. ಮತ್ತೆ ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು… ಹೀಗೆ ಸಾಗುತ್ತದೆ ಚನ್ನೆಮನೆ ಆಟ. ಎರಡು ಆಟಗಾರರು, ಪ್ರತಿಯೊಬ್ಬರಿಗೂ ೭ ಮನೆಗಳು. ಪ್ರತೀ ಮನೆಗಳಲ್ಲೂ ೪ ಕಾಳುಗಳು. ಮೊದಲು ಆಟ ಶುರುಮಾಡಿದವ ತನ್ನ ೭ ಮನೆಗಳಲ್ಲಿ ಯಾವುದಾದರೊಂದು ಮನೆಯನ್ನು ಆಯ್ದುಕೊಂಡು ಅದರಲ್ಲಿರುವ ೪ ಕಾಳುಗಳನ್ನು ತನ್ನ ಹಾಗೂ ತನ್ನ ಸಹ ಆಟಗಾರನ ಮನೆಗಳಿಗೆ ಹಂಚುತ್ತಾ ಹೋಗಬೇಕು.
ಹೀಗೆ ಹಂಚುತ್ತಾ ಹೋಗುವಾಗ ಮತ್ತೆ ೪ ಕಾಳುಗಳು ಒಟ್ಟುಗೂಡಿದರೆ ಮನೆಯಲ್ಲಿ ಕರು ಹಾಕಿತೆಂದೂ, ಆ ಕರು ಮನೆಯ ಯಜಮಾನನ (ಆ ೭ ಮನೆಯ ಆಟಗಾರ ಮನೆ ಒಡೆಯ) ಸ್ವತ್ತೆಂದೂ, ಅವನು ಅದನ್ನು ತೆಗೆದಿರಿಸಿಕೊಳ್ಳುತ್ತಾನೆ. ಒಬ್ಬನ ಆಟ ಮುಗಿಯುವುದು ಆತನ ಕೈಯಲ್ಲಿರುವ ಕಾಳುಗಳು ಖಾಲಿಯಾಗಿ, ಮುಂದೆ ಕಾಳಿರದ ಬರಿಯ ಖಾಲಿ ಮನೆಗಳು ಸಿಕ್ಕಾಗ….
ಹೀಗೆ ಚದುರಿಸಿ ಹಂಚುವ, ಕೂಡಿಸುವ ಆಟದಲ್ಲಿ ಯಾರಾದರೊಬ್ಬರು ಗೆಲ್ಲುತಾರೆ (ಹೆಚ್ಹು ಕಾಳನ್ನು ಕೂಡಿ ಹಾಕಿದವನು).
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…