ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಗೆ ಗೊತ್ತಾ, ನಮ್ಮಗಳ ಮನೆ ಪಕ್ಕದಲ್ಲಿರುವ ಗ್ರಾಮ ಪಂಚಾಯತಿ ಕೇಂದ್ರದಲ್ಲಿ, ನಮ್ಮ ಗ್ರಾಮೀಣ ಭಾಗದ ಜನರಿಗೆ ಏನೆಲ್ಲಾ ಸವಲತ್ತುಗಳು ಸಿಗುತ್ತವೆ ಅಂತಾ?
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ನಮ್ಮ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಏನೆಲ್ಲಾ ಸೌಲಭ್ಯ ಸಿಗುತ್ತೆ ಅನ್ನೋದರ ಬಗ್ಗೆ ನಿಮಗಾಗಿ ಮಾಹಿತಿ ಇಲ್ಲಿದೆ. ಮುಂದೆ ಓದಿ…..
ಜನರು ತಮಗೆ ಬೇಕಿರುವ ಅಗತ್ಯ ದಾಖಲೆಗಳನ್ನು ಪಡೆಯಲು ತಾಲೂಕು ಕಚೇರಿ, ನಾಡಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವುಗಳು ಸ್ಥಳೀಯ ಗ್ರಾಮ ಪಂಚಾಯಿತಿಗಳಲ್ಲೇ ದೊರೆಯುವಂತೆ ಮಾಡಿರುವ ಸೇವೆಗೆ ‘ಪಂಚಾಯಿ- 100 ಬಾಪೂಜಿ ಸೇವಾ ಕೇಂದ್ರ’ ಎಂದು ಹೆಸರಿಡಲಾಗಿದೆ. ಈ ಸೇವೆ ಈಗಾಗಲೇ ಜುಲೈ 1 ರಿಂದ 2 ಸಾವಿರ ಗ್ರಾ.ಪಂ.ಗಳಲ್ಲಿ ಸೇವೆಗೆ ಚಾಲನೆ ನೀಡಲಾಗಿದೆ. ಒಟ್ಟು 100 ಸೇವೆಗಳು ಲಭ್ಯವಾಗಲಿವೆ.
ಸಾರ್ವಜನಿಕ ಕೋರಿಕೆ ಸ್ವೀಕರಿಸುವ ಸೇವಾ ಕೇಂದ್ರಗಳು ಆ ಕೋರಿಕೆಯನ್ನು ನಾಡಕಚೇರಿಯು ದೃಢೀಕರಿಸಿದ ದಾಖಲೆಯನ್ನು ಪಮಚತಂತ್ರ ತಂತ್ರಾಂಶಕ್ಕೆ ವರ್ಗಾವಣೆ ಮಾಡಲಿದ್ದು ಬಳಿಕ ಆ ದಾಖಲೆಗಲನ್ನು ಅಪೇಕ್ಷಿತರಿಗೆ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಕೊಡ ಮಾಡಲಾಗುವುದು.
ಜಾತಿ. ಆದಾಯ, ವಾಸಸ್ಥಳ, ಗೇಣಿ ರಹಿತ, ಜೀವಂತ, ಬೇಸಾಯ ಕುಟುಂಬ ಸದಸ್ಯರ ದೃಢೀಕರಣ, ಜಮೀನು ಇಲ್ಲದಿರುವಿಕೆ, ನಿರುದ್ಯೋಗಿ, ಕೃಷಿ ಕಾರ್ಮಿಕ, ಭೂಹಿಡುವಳಿ ಪ್ರಮಾಣಪತ್ರ, ವಸತಿ, ಉದ್ಯೋಗದ ಉದ್ದೇಶಕ್ಕೆ ಆದಾಯ ದೃಢೀಕರಣ, ವಂಶವೃಕ್ಷ, ಬೆಳೆ, ಅಂಗವೈಕಲ್ಯ, ವಿಧವಾ ವೇತನ, ಸಧ್ಯಾ ಸುರಕ್ಷಾ, ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆ, ವೃದ್ಧಪ್ಯ ವೇತನ, ಮೈತ್ರಿ, ಮನಸ್ವಿನಿ ಸೇರಿ ಒಟ್ಟು 40 ಸೇವೆ ಮತ್ತು ಸೌಲಭ್ಯಗಳಿಗೆ ಪ್ರಮಾಣಪತ್ರಗಳು ಈ ಕೇಂದ್ರದಲ್ಲಿ ಸಿಗಲಿವೆ.
ಕಟ್ಟಡ ನಿರ್ಮಾಣ ಪರವಾನಗಿ, ನೀರಿನ ಸಂಪರ್ಕಕ್ಕೆ ಅರ್ಜಿ, ಎಸ್ಕಾಂಗೆ ನಿರಾಕ್ಷೇಪಣೆ ಪತ್ರ, ವಸತಿ ಯೋಜನೆಗೆ ಅರ್ಜಿ, ಉಚಿತ ನಿವೇಶನ ಪಡೆಯಲು ಅರ್ಜಿ, ಆಸ್ತಿ ತೆರಿಗೆ ಪಾವತಿ, ಭೂಪರಿವರ್ತನೆ ಕೋರಿಕೆ ಅರ್ಜಿ, ನೀರಿನ ಶುಲ್ಕ ಪಾವತಿ, ಟ್ರೇಡ್ ಲೈಸನ್ಸ್ ನವೀಕರಣ, ಜಾಹಿರಾತು ಪರವನಾಗಿ, ವಿದ್ಯಾರ್ಥಿಗಳಿಗೆ ದೂರ ಪ್ರಮಾಣಪತ್ರ, ಬೀದಿದೀಪ ನಿರ್ವಹಣೆ ಸೇರಿ ಒಟ್ಟು 40 ಗ್ರಾಮೀಣವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇವೆಗಳು ಈ ಕೇಂದ್ರಗಳಲ್ಲಿ ಸಿಗಲಿವೆ.
ಜೀವ ವಿಮೆ, ವಾಹನ ವಿಮೆ, ವಿದ್ಯುತ್ ಬಿಲ್, ಮೊಬೈಲ್ ಮತ್ತು ಡಿಟಿಎಚ್ ರಿಚಾರ್ಜ್, ಬಸ್ – ರೈಲು- ವಿಮಾನ ಬುಕ್ಕಿಂಗ್, ಪಡಿತರ ಕಾರ್ಡ್ ಅರ್ಜಿ, ಆಧಾರ್ ಕಾರ್ಡ್ ತಿದ್ದುಪಡಿ, ಹಣ ವರ್ಗಾವನಣೆ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸೇರಿ 17 ಸೇವೆಗಳೂ ಇಲ್ಲಿ ಸಿಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…