ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.
ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.
ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.
ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.
ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.
ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.
ತಕ್ಷಣದ ಪರಿಹಾರ:-
ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.
ಮೂಲ :
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.