News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಹೀಗೆ ಕಸಿ ಮಾಡಿದ್ರೆ,ಕೊಂಬೆಗೊಂದೊಂದು ಬಣ್ಣದ ಹೂಗಳು ನಿಮ್ಗೆ ಸಿಗುತ್ತೆ…

2164

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .ನಿಮ್ಮ ಹೆಂಡತಿಯಿಂದ “ಅದೇನು ಸೀಮೇಗಿಲ್ಲದ ಗಂಡೂಂತ ಇವನಿಗೆ ಕೊಟ್ಟು ಮದುವೆ ಮಾಡಿದ್ರಪ್ಪಾ ನನ್ನ ಥತ್ “ ಅಂತ ಬೈಯ್ಯಿಸಿಕೊಳ್ಳಬಾರದೆಂದರೆ ನಾ ಹೇಳಿದಂತೆ ಮಾಡಿ.

ಮೊದಲಿಗೆ ನಿಮ್ಮ ಮನೆಯಲ್ಲಿರುವ ಎರಡು ಬೇರೆ ಬೇರೆ ಬಣ್ಣದ ಗುಲಾಬಿ ಹೂ ಬಿಡುವ ಗಿಡಗಳನ್ನು ಆರಿಸಿಕೊಳ್ಳಿ.ಆ ಗಿಡದ ಮೇಲ್ಭಾಗದಲ್ಲಿ ಚಿಗುರುತ್ತಿರುವ ಕಡೆಯಿಂದ ಕೆಳಗೆ ನೋಡುತ್ತಾ ಬಂದರೆ ಅದೇ ಕೊಂಬೆಯಲ್ಲಿ ಮತ್ತೊಂದು ಕಡೆ ಇನ್ನೂ ಚಿಗುರಲು ತಯಾರಾಗುತ್ತಿರುವ ಕೆಂಪು ಬಣ್ಣದ ಗೆಣ್ಣು ಕಾಣುತ್ತದೆಯಲ್ಲಾ ಅದನ್ನು ಗಮನಿಸಿ.

ಈಗ ಮತ್ತೊಂದು ಗಿಡದ ಬಳಿ ಹೋಗಿ ಹಿಂದೆ ನೋಡಿದ ಅದೇ ಬೆಳ್ಳುಳ್ಳಿ ಗಾತ್ರದ ಕೊಂಬೆಗೆ ಒಂದು ಸ್ವಚ್ಚವಾದ ಬ್ಲೇಡ್ ತೆಗೆದುಕೊಂಡು ಕೊಂಬೆ ಉದ್ದವಾಗಿರುವ ಮಾದರಿಯಲ್ಲಿಯೇ ಒಂದು ಸೆಂಟಿಮೀಟರಿನಷ್ಟು ಉದ್ದದ ಗೆರೆ ಎಳೆಯಿರಿ ಅಂದರೆ ನಿಮ್ಮ ಬ್ಲೇಡಿನಿಂದ ಕುಯ್ಯುವುದು ಕೊಂಬೆಯ ಕಾಂಡದ ಒಳಗೆ ಹೋಗುವುದು ಬೇಡ ಮೇಲಿನ ಕಾಂಡದ ಸಿಪ್ಪೆಯನ್ನು ಮೀರುವುದು ಬೇಡ.

ಹೀಗೆ ಉದ್ದಕ್ಕೆ ಕುಯ್ದ ನಂತರ ಆ ಗೆರೆಯ ಮೇಲ್ಭಾಗಕ್ಕೆ ಅಡ್ಡ ಸ್ವಲ್ಪ ಕುಯ್ದುಬಿಡಿ ಅಂದರೆ ಈಗ ನಿಮಗೆ ಅದು ಇಂಗ್ಲೀಷಿನ T ಆಕಾರದಲ್ಲಿ ಕಾಣುತ್ತಿದೆಯಲ್ಲವೇ ? ಅದನ್ನು ನಿಧಾನವಾಗಿ ಸಿಪ್ಪೆ ಬಿಡಿಸಿ .ಈಗ ಅದನ್ನು ಹಾಗೆಯೇ ಬಿಟ್ಟು ಮೊದಲಿನ ಗಿಡದ ಹೊಸದಾದ ಚಿಗುರು ಗಿಣ್ಣಿನ್ನು ನಿಧಾನವಾಗಿ ಮೇಲಿನಿಂದ ಸಿಪ್ಪೆಯ ಅಳತೆಗೆ ಮಾತ್ರ ನಿಧಾನವಾಗಿ ಸೌತೆಕಾಯಿ ಹೆರೆಯುವ ಮಾದರಿಯಲ್ಲಿ ಚಿಗುರು ಗಿಣ್ಣನ್ನು ಮಾತ್ರ ಹೊರ ತೆಗೆಯಿರಿ.

ಹೊರತೆಗೆದ ಚಿಗುರು ಗಿಣ್ಣನ್ನು ತಂದು T ಡಿಸೈನಲ್ಲಿ ಕಟ್ ಮಾಡಿಟ್ಟ ಕಾಂಡದ ಸಿಪ್ಪೆಯೊಳಗೆ ನಿಧಾನವಾಗಿ ಮೇಲಿನಿಂದ ತೂರಿಸಿ ನಂತರ ಆ ಗಿಣ್ಣಿನ ಮೇಲೆ ಕೆಳಗೆ ಗಮ್ ಟೇಪ್ ಸುತ್ತಿ ಬಿಡಿ .ಇದಾದ ನಂತರ ಗಿಡದಲ್ಲಿ ಶೇ 80ರಷ್ಟು ಎಲೆಗಳನ್ನು ಅದೇ ಬ್ಲೇಡಿನಿಂದ ಕತ್ತರಿಸಿ ಹಾಕಿ ಹಾಗೂ ಗಿಡದ ಮೇಲಭಾಗದಲ್ಲಿರುವ ಚಿಗುರನ್ನೂ ಕೂಡ ಕತ್ತರಿಸಿ ಬಿಡಿ.ಇದನ್ನು ಟಿ ಬಡ್ಡಿಂಗ್ ಎಂದು ಕರೆಯುತ್ತಾರೆ.

ನಂತರ ನೀವು ಮೂರ್ನಾಲ್ಕು ದಿನಗಳಲ್ಲಿ ಈ ಹೊಸ ಗಿಣ್ಣು ನಿಧಾನವಾಗಿ ಚಿಗುರಿ ಹೊಸ ಬಣ್ಣದ ಹೂ ಬಿಡಲು ಶುರುವಾಗುತ್ತದೆ.ಈ ವಿಧಾನ ಮೊದಲು ಬಂದದ್ದು ನಿಂಬೆ ಗಿಡದಲ್ಲಿ ಬೇಗನೆ ಕಾಯಿ ಬಿಡಿಸುವುದಕ್ಕೆ ಆ ನಂತರ ಬಹಳಷ್ಟು ಗಿಡಗಳಿಗೆ ಇದೇ ವಿಧಾನವನ್ನು ಇಸ್ರೇಲಿನಲ್ಲಿ ಬಳಸುತ್ತಿದ್ದಾರೆ.

ಈ ತರಹದ ಕಸಿ ಮಾಡುವಾಗ ಒಂದೇ ಕೊಂಬೆಯ ಗಿಡಕ್ಕೆ ಕಸಿ ಮಾಡಿದರೆ ಗರಿಷ್ಠ ಫಲಿತಾಂಶ ಎರಡೂ ಗಿಡದಿಂದ ಪಡೆಯಬಹುದು ಹಾಗೂ ಒಂಟಿ ಕೊಂಬೆಯ ಗಿಡಕ್ಕೆ ಈ ತರಹ ಕಸಿ ಮಾಡಿದ ನಂತರ ಕಸಿ ಮಾಡಿದ ಜಾಗದಿಂದ ಮೂರು ಇಂಚಿನಷ್ಟು ಮೇಲಿನ ಕೊಂಬೆಯನ್ನು ಅರ್ಧಕ್ಕೆ ಕತ್ತರಿಸಿ ಮಡಿಚಿಬಿಡಬೇಕು ಏಕೆಂದರೆ ಮೇಲಿನ ಕೊಂಬೆ ಹಾಗೆಯೇ ಇದ್ದರೆ ಗಿಡ ಪೋಷಕಾಂಶಗಳೆಲ್ಲವೂ ಮೇಲಕ್ಕೆ ಹೋಗಲು ಶುರುವಾಗುವುದರಿಂದ ಕಸಿ ಮಾಡಿದ ಹೊಸ ಚಿಗುರು ಬೇಗ ಬೆಳೆಯುವುದಿಲ್ಲ.

ಹಾಗೂ ಅದನ್ನು ಏಕೆ ಅರ್ಧ ಕತ್ತರಿಸಿ ಹಾಗೆಯೇ ಬಿಡಬೇಕೆಂದರೆ ಈ ಮೊದಲಿನ ಕೊಂಬೆಯು ನೆಲದಿಂದ ಪೋಷಕಾಂಶಗಳನ್ನು ಅತ್ಯುತ್ತಮವಾಗಿ ಮೇಲಕ್ಕೆ ಎಳೆಯುತ್ತಿರುತ್ತದೆ ಹಾಗಾಗಿ ಅದನ್ನು ಪೂರಾ ಕತ್ತರಿಸಿಬಿಟ್ಟರೆ ಪೂಷಕಾಂಶ ಮೇಲೆಕ್ಕೆಳೆಯುವ ಪ್ರಮುಖ ಪಂಪನ್ನೇ ಆಫ್ ಮಾಡಿದಂತಾಗುತ್ತದೆ ಹಾಗಾಗಿ ಅದನ್ನು ಅರ್ಧ ಕತ್ತರಿಸಿ ಮಡಚಿ ಬಿಟ್ಟರೆ ಅದು ಮುಂದೆ ಬಳೆಯುವುದಿಲ್ಲ ಆದರೆ ಪೋಷಕಾಂಶ ಸೆಳೆದು ಹೊಸ ಚಿಗುರಿಗೆ ಕೊಡುತ್ತದೆ ಎಂದಷ್ಟೇ.

ಈ ವಿಧಾನದಲ್ಲಿ ನಿಮ್ಮ ಎರಡೂ ಗಿಡಗಳೂ ಕೂಡ ಹಾಳಾಗುವುದಿಲ್ಲ ಹಾಗೂ ಏಕಕಾಲದಲ್ಲಿ ಎರಡೂ ಗಿಡಗಳಿಗೆ ಕಸಿ ಮಾಡಬಹುದು.ಹಾಗೂ ನಿಮ್ಮ ಹೆಂಡತಿಯು ಗುಲಾಬಿ ಗಿಡಕ್ಕೆ ಕಸಿ ಮಾಡಲು ಒಪ್ಪಿಗೆ ಕೊಡದಿದ್ದರೆ ಪಕ್ಕದ ಮನೆಯ ಆಂಟಿಯ ಗುಲಾಬಿ ಗಿಡಕ್ಕೆ ಆದರೂ ಕಸಿ ಮಾಡಿಬಿಡಿ !
ನಾಳೆದಿನ ಬಿಡುವ ಚಿತ್ರಾವಿಚಿತ್ರ ಬಣ್ಣದ ಗುಲಾಬಿ ಹೂ ನೋಡಿ ಹೊಟ್ಟೆ ಉರಿದುಕೊಳ್ಳಲಿ !

ಕೃಪೆ:ಉಮೇಶ್ ಆಚಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬರೋಬ್ಬರಿ 75 ವರ್ಷಗಳ ನಂತರ ಭೇಟಿಯಾದ ಪ್ರೇಮಿಗಳು….!

    75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…

  • ಆರೋಗ್ಯ

    ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

    ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.